AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಡಾಖ್​ ತಲುಪಿದ ರಾಷ್ಟ್ರಪತಿ ರಾಮನಾಥ ಕೋವಿಂದ್​; ನಾಳೆ ಯೋಧರೊಟ್ಟಿಗೆ ವಿಜಯದಶಮಿ ಆಚರಣೆ

ಅಕ್ಟೋಬರ್​ 15ರಂದು ಅಂದರೆ ವಿಜಯದಶಮಿ ದಿನದಂದು ರಾಷ್ಟ್ರಪತಿಗಳು ಲಡಾಖ್​​ನ ದ್ರಾಸ್​ನಲ್ಲಿರಲಿದ್ದಾರೆ. 1999ರ ಕಾರ್ಗಿಲ್​ ಯುದ್ಧದಲ್ಲಿ ಮಡಿದ ಯೋಧರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸುವರು.

ಲಡಾಖ್​ ತಲುಪಿದ ರಾಷ್ಟ್ರಪತಿ ರಾಮನಾಥ ಕೋವಿಂದ್​; ನಾಳೆ ಯೋಧರೊಟ್ಟಿಗೆ ವಿಜಯದಶಮಿ ಆಚರಣೆ
ರಾಮನಾಥ ಕೋವಿಂದ್​
TV9 Web
| Edited By: |

Updated on: Oct 14, 2021 | 11:18 AM

Share

ರಾಷ್ಟ್ರಪತಿ ರಾಮನಾಥ ಕೋವಿಂದ್​ (President Ram Nath Kovind) ಅವರು ಇಂದಿನಿಂದ ಎರಡು ದಿನಗಳ ಕಾಲ ಲಡಾಖ್​ ಮತ್ತು ಜಮ್ಮು-ಕಾಶ್ಮೀರ (Jammu-Kahsmir) ಪ್ರವಾಸ ಹಮ್ಮಿಕೊಂಡಿದ್ದಾರೆ. ಅವರು ಈಗಾಗಲೇ ಲಡಾಖ್​ ತಲುಪಲಿದ್ದಾರೆ. ಈ ಬಾರಿಯ ದಸರಾ ಹಬ್ಬವನ್ನು ಅವರು ಲಡಾಖ್​ನ ದ್ರಾಸ್​​​ ಪ್ರದೇಶದಲ್ಲಿ, ಭಾರತೀಯ ಸೇನೆ ಜತೆ ಆಚರಿಸಲು ನಿರ್ಧರಿಸಿದ್ದು, ತನ್ನಿಮಿತ್ತ ಇಂದೇ ಅಲ್ಲಿಗೆ ತೆರಳಲಿದ್ದಾರೆ.  ವಿಶ್ವದಲ್ಲಿ ತಾಪಮಾನ ಅತ್ಯಂತ ಕೆಳಮಟ್ಟಕ್ಕೆ ಇಳಿಯುವ ಪ್ರದೇಶಗಳಲ್ಲಿ ಈ  ದ್ರಾಸ್​​ ಪ್ರದೇಶವೂ ಒಂದು. ಇಲ್ಲಿ ಕೆಲವೊಮ್ಮೆ ತಾಪಮಾನ -40 ಡಿಗ್ರಿ ಸೆಲ್ಸಿಯಸ್​​ಗಿಂತಲೂ ಕೆಳಗೆ ಇಳಿಯುತ್ತದೆ. ರಾಷ್ಟ್ರಪತಿಗಳು ಸಾಮಾನ್ಯವಾಗಿ ದಸರಾ ಹಬ್ಬವನ್ನು ದೆಹಲಿಯಲ್ಲಿಯೇ ಆಚರಿಸುವುದು ಸಂಪ್ರದಾಯ. ಆದರೆ ರಾಮನಾಥ ಕೋವಿಂದ್​ ಈ ಬಾರಿ ಸಂಪ್ರದಾಯ ಮೀರಲಿದ್ದು, ಭಾರತೀಯ ಸೇನೆಯೊಂದಿಗೆ, ದ್ರಾಸ್​​ನಲ್ಲಿ ನವರಾತ್ರಿ ವಿಜಯದಶಮಿ ಆಚರಣೆ ನಡೆಸಲಿದ್ದಾರೆ.  

ರಾಷ್ಟ್ರಪತಿ ರಾಮನಾಥ ಕೋವಿಂದ್​​ರ ಲಡಾಖ್​ ಮತ್ತು ಜಮ್ಮು-ಕಾಶ್ಮೀರ ಭೇಟಿ ಬಗ್ಗೆ ರಾಷ್ಟ್ರಪತಿ ಭವನ ಪ್ರಕಟಣೆ ಬಿಡುಗಡೆ ಮಾಡಿದೆ. ರಾಮನಾಥ ಕೋವಿಂದ್​ ಅವರು ಅಕ್ಟೋಬರ್​ 14 ಮತ್ತು 15ರಂದು ಲಡಾಖ್​, ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಾರೆ. ಕಾರ್ಗಿಲ್​ ಯುದ್ಧದಲ್ಲಿ ಮಡಿದ ಹುತಾತ್ಮರಿಗೆ ಅಕ್ಟೋಬರ್​ 15ರಂದು ರಾಮನಾಥ ಕೋವಿಂದ್​ ಶ್ರದ್ಧಾಂಜಲಿ ಸಲ್ಲಿಸುವರು. ಅದಾದ ಬಳಿಕ ಅಲ್ಲಿನ ಸೇನಾ ಅಧಿಕಾರಿಗಳು ಮತ್ತು ಸೈನಿಕರೊಟ್ಟಿಗೆ ಸಂವಾದ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದೆ.

ಮೊದಲ ದಿನ ಅಂದರೆ ಇಂದು ರಾಮನಾಥ ಕೋವಿಂದ್ ಅವರು, ಲಡಾಖ್​ಗೆ ತೆರಳಲಿದ್ದಾರೆ. ಅಲ್ಲಿ ಲೇಹ್​​ನ ಸಿಂಧು ಘಾಟ್​​ನಲ್ಲಿ ಸಿಂಧು ದರ್ಶನ ಪೂಜೆ ನೆರವೇರಿಸಲಿದ್ದಾರೆ. ಈ ಪ್ರದೇಶ ಶೇಯ್​ ಎಂಬ ಗ್ರಾಮದ ಬಳಿಯಿದ್ದು, ನೈಸರ್ಗಿಕವಾಗಿ ಅತ್ಯಂತ ಸುಂದರವಾದ ಪ್ರದೇಶವಾಗಿದೆ.  ಇಂದು ಸಂಜೆ ರಾಮನಾಥ ಕೋವಿಂದ್​ ಜಮ್ಮು-ಕಾಶ್ಮಿರಕ್ಕೆ ತೆರಳಿ ಅಲ್ಲಿ ಭಾರತೀಯ ಸೇನೆಯ ಉತ್ತರ ಕಮಾಂಡ್​​​ನ ಪ್ರಧಾನ ಕಚೇರಿಯಿರುವ ಉಧಾಂಪುರ ಸ್ಟೇಶನ್​​​ನಲ್ಲಿ ಯೋಧರೊಟ್ಟಿಗೆ ಸಂವಾದ ನಡೆಸುವರು.

ಅಕ್ಟೋಬರ್​ 15ರಂದು ಅಂದರೆ ವಿಜಯದಶಮಿ ದಿನದಂದು ರಾಷ್ಟ್ರಪತಿಗಳು ಲಡಾಖ್​​ನ ದ್ರಾಸ್​ನಲ್ಲಿರಲಿದ್ದಾರೆ. 1999ರ ಕಾರ್ಗಿಲ್​ ಯುದ್ಧದಲ್ಲಿ ಮಡಿದ ಯೋಧರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸುವರು. ಈ ದ್ರಾಸ್​​​ನ್ನು ಲಡಾಖ್​​ನ ಗೇಟ್​ವೇ ಎಂದೇ ಕರೆಯಲಾಗುತ್ತದೆ. ಸಮುದ್ರಮಟ್ಟದಿಂದ ಎತ್ತರವಾಗಿರುವ ಈ ಗುಡ್ಡ ಪ್ರದೇಶ ಟ್ರೆಕ್ಕಿಂಗ್​​ಗೆ ಹೆಸರಾದ ತಾಣ. ಪ್ರವಾಸಿಗರ ಅಚ್ಚುಮೆಚ್ಚಿನ ಪ್ರದೇಶವಾಗಿದೆ. ಹಾಗೇ, ಅತ್ಯಂತ ಮಹತ್ವವಾದ ಸೇನಾ ತಾಣವೂ ಹೌದು. ತುಂಬ ಚಳಿಯಿರುವ ಈ ಜಾಗದಲ್ಲಿ ಭಾರತೀಯ ಯೋಧರು ನಿಂತು ದೇಶ ರಕ್ಷಣೆ ಮಾಡುತ್ತಿದ್ದಾರೆ. ಅಂಥ ಸೈನಿಕರೊಟ್ಟಿಗೆ ರಾಮನಾಥ ಕೋವಿಂದ್​ ವಿಜಯದಶಮಿ ಆಚರಿಸಲಿದ್ದಾರೆ.

ಇದನ್ನೂ ಓದಿ: Coronavirus cases in India ಭಾರತದಲ್ಲಿ 18,987 ಹೊಸ ಕೊವಿಡ್ ಪ್ರಕರಣ ಪತ್ತೆ, 246 ಮಂದಿ ಸಾವು

Mysore Palace Ayudha Puja: ಮೈಸೂರಿನಲ್ಲಿ ಆಯುಧ ಪೂಜೆ ಸಂಭ್ರಮ, ರಾಜ ವಂಶಸ್ಥರಿಂದ ಪಟ್ಟದ ಕತ್ತಿ, ಪಲ್ಲಕ್ಕಿ ಪೂಜೆ

Follow Us
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್