AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ ಚಂದ್ರ ಬೋಸ್​ ಭಾವಚಿತ್ರ ವಿವಾದ: ರಾಜ್​ದೀಪ್​ ಸರ್​ದೇಸಾಯಿ ನಡೆಗೆ ರಾಷ್ಟ್ರಪತಿ ಕಚೇರಿ ಖಂಡನೆ

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಭಾಷ್​ ಚಂದ್ರ ಬೋಸ್​ ಭಾವಚಿತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪತ್ರಕರ್ತರ ನಡೆಯನ್ನು ಪ್ರಶ್ನಿಸಿ ರಾಷ್ಟ್ರಪತಿ ಭವನದ ಪತ್ರಿಕಾ ಕಾರ್ಯದರ್ಶಿ ಅಜಯ್​ ಕುಮಾರ್​, ಇಂಡಿಯಾ ಟುಡೆ ಸಮೂಹದ ಪ್ರಧಾನ ಸಂಪಾದಕ ಅರುಣ್​ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ಸುಭಾಷ್​ ಚಂದ್ರ ಬೋಸ್​ ಭಾವಚಿತ್ರ ವಿವಾದ: ರಾಜ್​ದೀಪ್​ ಸರ್​ದೇಸಾಯಿ ನಡೆಗೆ ರಾಷ್ಟ್ರಪತಿ ಕಚೇರಿ ಖಂಡನೆ
ರಾಜ್​ದೀಪ್​ ಸರ್​ದೇಸಾಯಿ
ರಾಜೇಶ್ ದುಗ್ಗುಮನೆ
|

Updated on:Jan 30, 2021 | 10:07 PM

Share

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇತ್ತೀಚೆಗೆ ಅನಾವರಣಗೊಂಡಿದ್ದ ಸುಭಾಷ್​ ಚಂದ್ರ ಬೋಸ್​ ಅವರ ಭಾವಚಿತ್ರ ವಿವಾದಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ರಾಷ್ಟ್ರಪತಿ ಪತ್ರಿಕಾ ಕಾರ್ಯದರ್ಶಿ ಅಜಯ್​ ಕುಮಾರ್​ ಸಿಂಗ್ ಈ ಸಂಬಂಧ ​ಇಂಡಿಯಾ ಟುಡೆ ಸಮೂಹದ ಪ್ರಧಾನ ಸಂಪಾದಕ ಅರುಣ್​ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನವರಿ 25 ರಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಬದಲಿಗೆ ಬಂಗಾಳಿ ನಟ ಪ್ರೊಸೆನ್​ಜಿತ್​​ ಚಟರ್ಜಿ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ್ದಾರೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳು ಆಕ್ಷೇಪಿಸಿದ್ದರು. ತೃಣಮೂಲ ಕಾಂಗ್ರೆಸ್ ನಾಯಕರು, ಪ್ರಮುಖ ಪತ್ರಕರ್ತರಾದ ರಾಜ್​ದೀಪ್​ ಸರ್​​ದೇಸಾಯಿ ಅವರ ಹೆಸರು ಈ ವಿಚಾರದಲ್ಲಿ ಕೇಳಿ ಬಂದಿತ್ತು. ಆದರೆ, ಪತ್ರಕರ್ತೆ ನಿಸ್ತುಲಾ ಹೆಬ್ಬಾರ್​, ಇದು ಮೂಲ ಫೋಟೋವನ್ನೇ ಬಳಕೆ ಮಾಡಿಕೊಂಡು ಚಿತ್ರಿಸಿದ ಕಲಾಕೃತಿ ಎನ್ನುವುದನ್ನು ನಿರೂಪಿಸಿದ್ದರು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಭಾಷ್​ ಚಂದ್ರ ಬೋಸ್​ ಭಾವಚಿತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪತ್ರಕರ್ತರ ನಡೆಯನ್ನು ಪ್ರಶ್ನಿಸಿ ರಾಷ್ಟ್ರಪತಿ ಭವನದ ಪತ್ರಿಕಾ ಕಾರ್ಯದರ್ಶಿ ಅಜಯ್​ ಕುಮಾರ್​, ಇಂಡಿಯಾ ಟುಡೆ ಸಮೂಹದ ಪ್ರಧಾನ ಸಂಪಾದಕ ಅರುಣ್​ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ಇಂಡಿಯಾ ಟುಡೆ ಪತ್ರಕರ್ತರು ಸತ್ಯ-ಪರಿಶೀಲನೆ ನಡೆಸಲು ಮುಂದಾಗಿಲ್ಲ ಮತ್ತು ರಾಜಕೀಯ ಲಾಭಕ್ಕಾಗಿ ಸುಳ್ಳು ಆರೋಪಗಳನ್ನು ಎಸೆಯುವವರ ಜತೆ ಸೇರಿಕೊಂಡರು.ಇಂತಹ ಬೇಜವಾಬ್ದಾರಿಯುತ ವರ್ತನೆಯು ರಾಷ್ಟ್ರಪತಿ ಭವನದ ಘನತೆಗೆ ಧಕ್ಕೆಯುಂಟು ಮಾಡಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮೇಲೆ ತಿಳಿಸಿದ ಪತ್ರಕರ್ತರು ತಮ್ಮ ಟ್ವೀಟ್ ಮಾಡಿ ನಂತರ ಅದನ್ನು ಡಿಲೀಟ್​ ಮಾಡಿದ್ದಾರೆ. ತಾವು ಮಾಡಿದ ಬ್ಲಂಡರ್​ಗೆ ಒಂದೇ ಒಂದು ಕ್ಷಮೆ ಕೂಡ ಯಾಚಿಸಿಲ್ಲ. ಈ ಘಟನೆಯಿಂದ ರಾಷ್ಟ್ರಪತಿ ಭವನಕ್ಕೆ ತೀವ್ರ ತೊಂದರೆ ಉಂಟಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ದೆಹಲಿ ಗಲಾಟೆ ಬಗ್ಗೆ ಆತುರದ ಟ್ವೀಟ್​ ಮಾಡಿದ ಪತ್ರಕರ್ತ ರಾಜ್​ದೀಪ್ ಸರ್ದೇಸಾಯಿಗೆ 2 ವಾರ ಟಿವಿ ಪರದೆಯಿಂದ ದೂರ ಉಳಿಯುವಂತೆ ನಿರ್ಬಂಧ

Published On - 10:05 pm, Sat, 30 January 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ