AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ ಚಂದ್ರ ಬೋಸ್​ ಭಾವಚಿತ್ರ ವಿವಾದ: ರಾಜ್​ದೀಪ್​ ಸರ್​ದೇಸಾಯಿ ನಡೆಗೆ ರಾಷ್ಟ್ರಪತಿ ಕಚೇರಿ ಖಂಡನೆ

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಭಾಷ್​ ಚಂದ್ರ ಬೋಸ್​ ಭಾವಚಿತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪತ್ರಕರ್ತರ ನಡೆಯನ್ನು ಪ್ರಶ್ನಿಸಿ ರಾಷ್ಟ್ರಪತಿ ಭವನದ ಪತ್ರಿಕಾ ಕಾರ್ಯದರ್ಶಿ ಅಜಯ್​ ಕುಮಾರ್​, ಇಂಡಿಯಾ ಟುಡೆ ಸಮೂಹದ ಪ್ರಧಾನ ಸಂಪಾದಕ ಅರುಣ್​ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ಸುಭಾಷ್​ ಚಂದ್ರ ಬೋಸ್​ ಭಾವಚಿತ್ರ ವಿವಾದ: ರಾಜ್​ದೀಪ್​ ಸರ್​ದೇಸಾಯಿ ನಡೆಗೆ ರಾಷ್ಟ್ರಪತಿ ಕಚೇರಿ ಖಂಡನೆ
ರಾಜ್​ದೀಪ್​ ಸರ್​ದೇಸಾಯಿ
ರಾಜೇಶ್ ದುಗ್ಗುಮನೆ
|

Updated on:Jan 30, 2021 | 10:07 PM

Share

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇತ್ತೀಚೆಗೆ ಅನಾವರಣಗೊಂಡಿದ್ದ ಸುಭಾಷ್​ ಚಂದ್ರ ಬೋಸ್​ ಅವರ ಭಾವಚಿತ್ರ ವಿವಾದಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ರಾಷ್ಟ್ರಪತಿ ಪತ್ರಿಕಾ ಕಾರ್ಯದರ್ಶಿ ಅಜಯ್​ ಕುಮಾರ್​ ಸಿಂಗ್ ಈ ಸಂಬಂಧ ​ಇಂಡಿಯಾ ಟುಡೆ ಸಮೂಹದ ಪ್ರಧಾನ ಸಂಪಾದಕ ಅರುಣ್​ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನವರಿ 25 ರಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಬದಲಿಗೆ ಬಂಗಾಳಿ ನಟ ಪ್ರೊಸೆನ್​ಜಿತ್​​ ಚಟರ್ಜಿ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ್ದಾರೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳು ಆಕ್ಷೇಪಿಸಿದ್ದರು. ತೃಣಮೂಲ ಕಾಂಗ್ರೆಸ್ ನಾಯಕರು, ಪ್ರಮುಖ ಪತ್ರಕರ್ತರಾದ ರಾಜ್​ದೀಪ್​ ಸರ್​​ದೇಸಾಯಿ ಅವರ ಹೆಸರು ಈ ವಿಚಾರದಲ್ಲಿ ಕೇಳಿ ಬಂದಿತ್ತು. ಆದರೆ, ಪತ್ರಕರ್ತೆ ನಿಸ್ತುಲಾ ಹೆಬ್ಬಾರ್​, ಇದು ಮೂಲ ಫೋಟೋವನ್ನೇ ಬಳಕೆ ಮಾಡಿಕೊಂಡು ಚಿತ್ರಿಸಿದ ಕಲಾಕೃತಿ ಎನ್ನುವುದನ್ನು ನಿರೂಪಿಸಿದ್ದರು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಭಾಷ್​ ಚಂದ್ರ ಬೋಸ್​ ಭಾವಚಿತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪತ್ರಕರ್ತರ ನಡೆಯನ್ನು ಪ್ರಶ್ನಿಸಿ ರಾಷ್ಟ್ರಪತಿ ಭವನದ ಪತ್ರಿಕಾ ಕಾರ್ಯದರ್ಶಿ ಅಜಯ್​ ಕುಮಾರ್​, ಇಂಡಿಯಾ ಟುಡೆ ಸಮೂಹದ ಪ್ರಧಾನ ಸಂಪಾದಕ ಅರುಣ್​ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ಇಂಡಿಯಾ ಟುಡೆ ಪತ್ರಕರ್ತರು ಸತ್ಯ-ಪರಿಶೀಲನೆ ನಡೆಸಲು ಮುಂದಾಗಿಲ್ಲ ಮತ್ತು ರಾಜಕೀಯ ಲಾಭಕ್ಕಾಗಿ ಸುಳ್ಳು ಆರೋಪಗಳನ್ನು ಎಸೆಯುವವರ ಜತೆ ಸೇರಿಕೊಂಡರು.ಇಂತಹ ಬೇಜವಾಬ್ದಾರಿಯುತ ವರ್ತನೆಯು ರಾಷ್ಟ್ರಪತಿ ಭವನದ ಘನತೆಗೆ ಧಕ್ಕೆಯುಂಟು ಮಾಡಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮೇಲೆ ತಿಳಿಸಿದ ಪತ್ರಕರ್ತರು ತಮ್ಮ ಟ್ವೀಟ್ ಮಾಡಿ ನಂತರ ಅದನ್ನು ಡಿಲೀಟ್​ ಮಾಡಿದ್ದಾರೆ. ತಾವು ಮಾಡಿದ ಬ್ಲಂಡರ್​ಗೆ ಒಂದೇ ಒಂದು ಕ್ಷಮೆ ಕೂಡ ಯಾಚಿಸಿಲ್ಲ. ಈ ಘಟನೆಯಿಂದ ರಾಷ್ಟ್ರಪತಿ ಭವನಕ್ಕೆ ತೀವ್ರ ತೊಂದರೆ ಉಂಟಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ದೆಹಲಿ ಗಲಾಟೆ ಬಗ್ಗೆ ಆತುರದ ಟ್ವೀಟ್​ ಮಾಡಿದ ಪತ್ರಕರ್ತ ರಾಜ್​ದೀಪ್ ಸರ್ದೇಸಾಯಿಗೆ 2 ವಾರ ಟಿವಿ ಪರದೆಯಿಂದ ದೂರ ಉಳಿಯುವಂತೆ ನಿರ್ಬಂಧ

Published On - 10:05 pm, Sat, 30 January 21

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ