AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ ಚಂದ್ರ ಬೋಸ್​ ಭಾವಚಿತ್ರ ವಿವಾದ: ರಾಜ್​ದೀಪ್​ ಸರ್​ದೇಸಾಯಿ ನಡೆಗೆ ರಾಷ್ಟ್ರಪತಿ ಕಚೇರಿ ಖಂಡನೆ

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಭಾಷ್​ ಚಂದ್ರ ಬೋಸ್​ ಭಾವಚಿತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪತ್ರಕರ್ತರ ನಡೆಯನ್ನು ಪ್ರಶ್ನಿಸಿ ರಾಷ್ಟ್ರಪತಿ ಭವನದ ಪತ್ರಿಕಾ ಕಾರ್ಯದರ್ಶಿ ಅಜಯ್​ ಕುಮಾರ್​, ಇಂಡಿಯಾ ಟುಡೆ ಸಮೂಹದ ಪ್ರಧಾನ ಸಂಪಾದಕ ಅರುಣ್​ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ಸುಭಾಷ್​ ಚಂದ್ರ ಬೋಸ್​ ಭಾವಚಿತ್ರ ವಿವಾದ: ರಾಜ್​ದೀಪ್​ ಸರ್​ದೇಸಾಯಿ ನಡೆಗೆ ರಾಷ್ಟ್ರಪತಿ ಕಚೇರಿ ಖಂಡನೆ
ರಾಜ್​ದೀಪ್​ ಸರ್​ದೇಸಾಯಿ
ರಾಜೇಶ್ ದುಗ್ಗುಮನೆ
|

Updated on:Jan 30, 2021 | 10:07 PM

Share

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇತ್ತೀಚೆಗೆ ಅನಾವರಣಗೊಂಡಿದ್ದ ಸುಭಾಷ್​ ಚಂದ್ರ ಬೋಸ್​ ಅವರ ಭಾವಚಿತ್ರ ವಿವಾದಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ರಾಷ್ಟ್ರಪತಿ ಪತ್ರಿಕಾ ಕಾರ್ಯದರ್ಶಿ ಅಜಯ್​ ಕುಮಾರ್​ ಸಿಂಗ್ ಈ ಸಂಬಂಧ ​ಇಂಡಿಯಾ ಟುಡೆ ಸಮೂಹದ ಪ್ರಧಾನ ಸಂಪಾದಕ ಅರುಣ್​ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನವರಿ 25 ರಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಬದಲಿಗೆ ಬಂಗಾಳಿ ನಟ ಪ್ರೊಸೆನ್​ಜಿತ್​​ ಚಟರ್ಜಿ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ್ದಾರೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳು ಆಕ್ಷೇಪಿಸಿದ್ದರು. ತೃಣಮೂಲ ಕಾಂಗ್ರೆಸ್ ನಾಯಕರು, ಪ್ರಮುಖ ಪತ್ರಕರ್ತರಾದ ರಾಜ್​ದೀಪ್​ ಸರ್​​ದೇಸಾಯಿ ಅವರ ಹೆಸರು ಈ ವಿಚಾರದಲ್ಲಿ ಕೇಳಿ ಬಂದಿತ್ತು. ಆದರೆ, ಪತ್ರಕರ್ತೆ ನಿಸ್ತುಲಾ ಹೆಬ್ಬಾರ್​, ಇದು ಮೂಲ ಫೋಟೋವನ್ನೇ ಬಳಕೆ ಮಾಡಿಕೊಂಡು ಚಿತ್ರಿಸಿದ ಕಲಾಕೃತಿ ಎನ್ನುವುದನ್ನು ನಿರೂಪಿಸಿದ್ದರು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಭಾಷ್​ ಚಂದ್ರ ಬೋಸ್​ ಭಾವಚಿತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪತ್ರಕರ್ತರ ನಡೆಯನ್ನು ಪ್ರಶ್ನಿಸಿ ರಾಷ್ಟ್ರಪತಿ ಭವನದ ಪತ್ರಿಕಾ ಕಾರ್ಯದರ್ಶಿ ಅಜಯ್​ ಕುಮಾರ್​, ಇಂಡಿಯಾ ಟುಡೆ ಸಮೂಹದ ಪ್ರಧಾನ ಸಂಪಾದಕ ಅರುಣ್​ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ಇಂಡಿಯಾ ಟುಡೆ ಪತ್ರಕರ್ತರು ಸತ್ಯ-ಪರಿಶೀಲನೆ ನಡೆಸಲು ಮುಂದಾಗಿಲ್ಲ ಮತ್ತು ರಾಜಕೀಯ ಲಾಭಕ್ಕಾಗಿ ಸುಳ್ಳು ಆರೋಪಗಳನ್ನು ಎಸೆಯುವವರ ಜತೆ ಸೇರಿಕೊಂಡರು.ಇಂತಹ ಬೇಜವಾಬ್ದಾರಿಯುತ ವರ್ತನೆಯು ರಾಷ್ಟ್ರಪತಿ ಭವನದ ಘನತೆಗೆ ಧಕ್ಕೆಯುಂಟು ಮಾಡಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮೇಲೆ ತಿಳಿಸಿದ ಪತ್ರಕರ್ತರು ತಮ್ಮ ಟ್ವೀಟ್ ಮಾಡಿ ನಂತರ ಅದನ್ನು ಡಿಲೀಟ್​ ಮಾಡಿದ್ದಾರೆ. ತಾವು ಮಾಡಿದ ಬ್ಲಂಡರ್​ಗೆ ಒಂದೇ ಒಂದು ಕ್ಷಮೆ ಕೂಡ ಯಾಚಿಸಿಲ್ಲ. ಈ ಘಟನೆಯಿಂದ ರಾಷ್ಟ್ರಪತಿ ಭವನಕ್ಕೆ ತೀವ್ರ ತೊಂದರೆ ಉಂಟಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ದೆಹಲಿ ಗಲಾಟೆ ಬಗ್ಗೆ ಆತುರದ ಟ್ವೀಟ್​ ಮಾಡಿದ ಪತ್ರಕರ್ತ ರಾಜ್​ದೀಪ್ ಸರ್ದೇಸಾಯಿಗೆ 2 ವಾರ ಟಿವಿ ಪರದೆಯಿಂದ ದೂರ ಉಳಿಯುವಂತೆ ನಿರ್ಬಂಧ

Published On - 10:05 pm, Sat, 30 January 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ