AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಭಾಷ್​ ಚಂದ್ರ ಬೋಸ್​ ಭಾವಚಿತ್ರ ವಿವಾದ: ರಾಜ್​ದೀಪ್​ ಸರ್​ದೇಸಾಯಿ ನಡೆಗೆ ರಾಷ್ಟ್ರಪತಿ ಕಚೇರಿ ಖಂಡನೆ

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಭಾಷ್​ ಚಂದ್ರ ಬೋಸ್​ ಭಾವಚಿತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪತ್ರಕರ್ತರ ನಡೆಯನ್ನು ಪ್ರಶ್ನಿಸಿ ರಾಷ್ಟ್ರಪತಿ ಭವನದ ಪತ್ರಿಕಾ ಕಾರ್ಯದರ್ಶಿ ಅಜಯ್​ ಕುಮಾರ್​, ಇಂಡಿಯಾ ಟುಡೆ ಸಮೂಹದ ಪ್ರಧಾನ ಸಂಪಾದಕ ಅರುಣ್​ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ಸುಭಾಷ್​ ಚಂದ್ರ ಬೋಸ್​ ಭಾವಚಿತ್ರ ವಿವಾದ: ರಾಜ್​ದೀಪ್​ ಸರ್​ದೇಸಾಯಿ ನಡೆಗೆ ರಾಷ್ಟ್ರಪತಿ ಕಚೇರಿ ಖಂಡನೆ
ರಾಜ್​ದೀಪ್​ ಸರ್​ದೇಸಾಯಿ
Follow us
ರಾಜೇಶ್ ದುಗ್ಗುಮನೆ
|

Updated on:Jan 30, 2021 | 10:07 PM

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇತ್ತೀಚೆಗೆ ಅನಾವರಣಗೊಂಡಿದ್ದ ಸುಭಾಷ್​ ಚಂದ್ರ ಬೋಸ್​ ಅವರ ಭಾವಚಿತ್ರ ವಿವಾದಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ರಾಷ್ಟ್ರಪತಿ ಪತ್ರಿಕಾ ಕಾರ್ಯದರ್ಶಿ ಅಜಯ್​ ಕುಮಾರ್​ ಸಿಂಗ್ ಈ ಸಂಬಂಧ ​ಇಂಡಿಯಾ ಟುಡೆ ಸಮೂಹದ ಪ್ರಧಾನ ಸಂಪಾದಕ ಅರುಣ್​ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನವರಿ 25 ರಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಬದಲಿಗೆ ಬಂಗಾಳಿ ನಟ ಪ್ರೊಸೆನ್​ಜಿತ್​​ ಚಟರ್ಜಿ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ್ದಾರೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳು ಆಕ್ಷೇಪಿಸಿದ್ದರು. ತೃಣಮೂಲ ಕಾಂಗ್ರೆಸ್ ನಾಯಕರು, ಪ್ರಮುಖ ಪತ್ರಕರ್ತರಾದ ರಾಜ್​ದೀಪ್​ ಸರ್​​ದೇಸಾಯಿ ಅವರ ಹೆಸರು ಈ ವಿಚಾರದಲ್ಲಿ ಕೇಳಿ ಬಂದಿತ್ತು. ಆದರೆ, ಪತ್ರಕರ್ತೆ ನಿಸ್ತುಲಾ ಹೆಬ್ಬಾರ್​, ಇದು ಮೂಲ ಫೋಟೋವನ್ನೇ ಬಳಕೆ ಮಾಡಿಕೊಂಡು ಚಿತ್ರಿಸಿದ ಕಲಾಕೃತಿ ಎನ್ನುವುದನ್ನು ನಿರೂಪಿಸಿದ್ದರು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಭಾಷ್​ ಚಂದ್ರ ಬೋಸ್​ ಭಾವಚಿತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪತ್ರಕರ್ತರ ನಡೆಯನ್ನು ಪ್ರಶ್ನಿಸಿ ರಾಷ್ಟ್ರಪತಿ ಭವನದ ಪತ್ರಿಕಾ ಕಾರ್ಯದರ್ಶಿ ಅಜಯ್​ ಕುಮಾರ್​, ಇಂಡಿಯಾ ಟುಡೆ ಸಮೂಹದ ಪ್ರಧಾನ ಸಂಪಾದಕ ಅರುಣ್​ ಪುರಿ ಅವರಿಗೆ ಪತ್ರ ಬರೆದಿದ್ದಾರೆ.

ಇಂಡಿಯಾ ಟುಡೆ ಪತ್ರಕರ್ತರು ಸತ್ಯ-ಪರಿಶೀಲನೆ ನಡೆಸಲು ಮುಂದಾಗಿಲ್ಲ ಮತ್ತು ರಾಜಕೀಯ ಲಾಭಕ್ಕಾಗಿ ಸುಳ್ಳು ಆರೋಪಗಳನ್ನು ಎಸೆಯುವವರ ಜತೆ ಸೇರಿಕೊಂಡರು.ಇಂತಹ ಬೇಜವಾಬ್ದಾರಿಯುತ ವರ್ತನೆಯು ರಾಷ್ಟ್ರಪತಿ ಭವನದ ಘನತೆಗೆ ಧಕ್ಕೆಯುಂಟು ಮಾಡಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮೇಲೆ ತಿಳಿಸಿದ ಪತ್ರಕರ್ತರು ತಮ್ಮ ಟ್ವೀಟ್ ಮಾಡಿ ನಂತರ ಅದನ್ನು ಡಿಲೀಟ್​ ಮಾಡಿದ್ದಾರೆ. ತಾವು ಮಾಡಿದ ಬ್ಲಂಡರ್​ಗೆ ಒಂದೇ ಒಂದು ಕ್ಷಮೆ ಕೂಡ ಯಾಚಿಸಿಲ್ಲ. ಈ ಘಟನೆಯಿಂದ ರಾಷ್ಟ್ರಪತಿ ಭವನಕ್ಕೆ ತೀವ್ರ ತೊಂದರೆ ಉಂಟಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ದೆಹಲಿ ಗಲಾಟೆ ಬಗ್ಗೆ ಆತುರದ ಟ್ವೀಟ್​ ಮಾಡಿದ ಪತ್ರಕರ್ತ ರಾಜ್​ದೀಪ್ ಸರ್ದೇಸಾಯಿಗೆ 2 ವಾರ ಟಿವಿ ಪರದೆಯಿಂದ ದೂರ ಉಳಿಯುವಂತೆ ನಿರ್ಬಂಧ

Published On - 10:05 pm, Sat, 30 January 21

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?