AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ನೇಮಕ; ಏಪ್ರಿಲ್​ 24ಕ್ಕೆ ಪ್ರಮಾಣವಚನ ಸ್ವೀಕಾರ

ಸುಪ್ರಿಂಕೋರ್ಟ್​ನ 48ನೇ ನ್ಯಾಯಮೂರ್ತಿಯಾಗಿ ಏಪ್ರಿಲ್​ 24ರಂದು ಪ್ರಮಾಣವಚನ ಸ್ವೀಕರಿಸಲಿರುವ ರಮಣ, 2022ರ ಆಗಸ್ಟ್​ 26ರಂದು ನಿವೃತ್ತರಾಗಲಿದ್ದಾರೆ.

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ನೇಮಕ; ಏಪ್ರಿಲ್​ 24ಕ್ಕೆ ಪ್ರಮಾಣವಚನ ಸ್ವೀಕಾರ
ನ್ಯಾಯಮೂರ್ತಿ ರಮಣ
Lakshmi Hegde
|

Updated on: Apr 06, 2021 | 11:31 AM

Share

ದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI)ಯಾಗಿ ಎನ್​.ವಿ.ರಮಣ ಹೆಸರು ಇಂದು ಅಂತಿಮಗೊಂಡಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರು ರಮಣ ಅವರನ್ನು ನೇಮಕಮಾಡಿದ್ದು, ಏಪ್ರಿಲ್​ 24ರಂದು ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಲಿದ್ದಾರೆ. ಈಗಿನ ಮುಖ್ಯನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಏಪ್ರಿಲ್​ 23ರಂದು ನಿವೃತ್ತರಾಗಲಿದ್ದಾರೆ.. ಹಾಗೇ, ಮುಂದಿನ ಸಿಜೆಐ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಬೊಬ್ಡೆಯವರೇ ಶಿಫಾರಸು ಮಾಡಿದ್ದರು.

ಸುಪ್ರಿಂಕೋರ್ಟ್​ನ 48ನೇ ನ್ಯಾಯಮೂರ್ತಿಯಾಗಿ ಏಪ್ರಿಲ್​ 24ರಂದು ಪ್ರಮಾಣವಚನ ಸ್ವೀಕರಿಸಲಿರುವ ರಮಣ, 2022ರ ಆಗಸ್ಟ್​ 26ರಂದು ನಿವೃತ್ತರಾಗಲಿದ್ದಾರೆ. ಎನ್​.ವಿ.ರಮಣ 1957ರ ಆಗಸ್ಟ್​ 27ರಂದು ಆಂಧ್ರಪ್ರದೇಶದ ಪೊನ್ನಾವರಂ ಗ್ರಾಮದಲ್ಲಿ ಜನಿಸಿದ್ದಾರೆ. 1983ರ ಫೆಬ್ರವರಿ 10ರಿಂದ ವಕೀಲಿ ವೃತ್ತಿ ಪ್ರಾರಂಭಿಸಿದ ಇವರು 2000ರ ಜೂನ್​ 27ರಂದು ಆಂಧ್ರಪ್ರದೇಶ ಹೈಕೋರ್ಟ್​​ನ ಮುಖ್ಯನ್ಯಾಯಾಧೀಶರಾಗಿ ನೇಮಕಗೊಂಡರು. 2014ರ ಫೆಬ್ರವರಿ 17ರಂದು ಸುಪ್ರಿಂಕೋರ್ಟ್ ಜಡ್ಜ್​ ಆಗಿ ನೇಮಕಗೊಂಡಿದ್ದಾರೆ. ಕಳೆದವರ್ಷ ಅಕ್ಟೋಬರ್​ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ ಮತ್ತು ಎನ್​.ವಿ.ರಮಣ ಮಧ್ಯೆ ವಿವಾದವೊಂದು ಎದ್ದಿತ್ತು. ಜಗನ್​ ಮೋಹನ್​ ರೆಡ್ಡಿಯವರು ರಮಣ ವಿರುದ್ಧ ಗಂಭೀರ ಆರೋಪ ಮಾಡಿ, ಸಿಜೆಐ ಬೋಬ್ಡೆಯವರಿಗೆ ಪತ್ರ ಬರೆದಿದ್ದರು. ಇತ್ತೀಚೆಗಷ್ಟೇ ಈ ಆರೋಪದಿಂದ ಇವರಿಗೆ ಕ್ಲೀನ್​ಚಿಟ್​ ಸಿಕ್ಕಿದೆ.

ಇದನ್ನೂ ಓದಿ:  ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

ನ್ಯಾಯಮೂರ್ತಿ ರಮಣ ವಿರುದ್ಧ ಆಂಧ್ರ ಸಿಎಂ ಸುಪ್ರೀಂಕೋರ್ಟ್​ಗೆ ನೀಡಿದ್ದ ದೂರಿನ ಅರ್ಜಿ ವಜಾ; ಗೌಪ್ಯ ವಿಚಾರಣೆ ಬಹಿರಂಗ ಪಡಿಸಲು ಸಾಧ್ಯವಿಲ್ಲವೆಂದ ಪೀಠ

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!