AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ನೇಮಕ; ಏಪ್ರಿಲ್​ 24ಕ್ಕೆ ಪ್ರಮಾಣವಚನ ಸ್ವೀಕಾರ

ಸುಪ್ರಿಂಕೋರ್ಟ್​ನ 48ನೇ ನ್ಯಾಯಮೂರ್ತಿಯಾಗಿ ಏಪ್ರಿಲ್​ 24ರಂದು ಪ್ರಮಾಣವಚನ ಸ್ವೀಕರಿಸಲಿರುವ ರಮಣ, 2022ರ ಆಗಸ್ಟ್​ 26ರಂದು ನಿವೃತ್ತರಾಗಲಿದ್ದಾರೆ.

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ನೇಮಕ; ಏಪ್ರಿಲ್​ 24ಕ್ಕೆ ಪ್ರಮಾಣವಚನ ಸ್ವೀಕಾರ
ನ್ಯಾಯಮೂರ್ತಿ ರಮಣ
Lakshmi Hegde
|

Updated on: Apr 06, 2021 | 11:31 AM

Share

ದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI)ಯಾಗಿ ಎನ್​.ವಿ.ರಮಣ ಹೆಸರು ಇಂದು ಅಂತಿಮಗೊಂಡಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರು ರಮಣ ಅವರನ್ನು ನೇಮಕಮಾಡಿದ್ದು, ಏಪ್ರಿಲ್​ 24ರಂದು ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಲಿದ್ದಾರೆ. ಈಗಿನ ಮುಖ್ಯನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಏಪ್ರಿಲ್​ 23ರಂದು ನಿವೃತ್ತರಾಗಲಿದ್ದಾರೆ.. ಹಾಗೇ, ಮುಂದಿನ ಸಿಜೆಐ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಬೊಬ್ಡೆಯವರೇ ಶಿಫಾರಸು ಮಾಡಿದ್ದರು.

ಸುಪ್ರಿಂಕೋರ್ಟ್​ನ 48ನೇ ನ್ಯಾಯಮೂರ್ತಿಯಾಗಿ ಏಪ್ರಿಲ್​ 24ರಂದು ಪ್ರಮಾಣವಚನ ಸ್ವೀಕರಿಸಲಿರುವ ರಮಣ, 2022ರ ಆಗಸ್ಟ್​ 26ರಂದು ನಿವೃತ್ತರಾಗಲಿದ್ದಾರೆ. ಎನ್​.ವಿ.ರಮಣ 1957ರ ಆಗಸ್ಟ್​ 27ರಂದು ಆಂಧ್ರಪ್ರದೇಶದ ಪೊನ್ನಾವರಂ ಗ್ರಾಮದಲ್ಲಿ ಜನಿಸಿದ್ದಾರೆ. 1983ರ ಫೆಬ್ರವರಿ 10ರಿಂದ ವಕೀಲಿ ವೃತ್ತಿ ಪ್ರಾರಂಭಿಸಿದ ಇವರು 2000ರ ಜೂನ್​ 27ರಂದು ಆಂಧ್ರಪ್ರದೇಶ ಹೈಕೋರ್ಟ್​​ನ ಮುಖ್ಯನ್ಯಾಯಾಧೀಶರಾಗಿ ನೇಮಕಗೊಂಡರು. 2014ರ ಫೆಬ್ರವರಿ 17ರಂದು ಸುಪ್ರಿಂಕೋರ್ಟ್ ಜಡ್ಜ್​ ಆಗಿ ನೇಮಕಗೊಂಡಿದ್ದಾರೆ. ಕಳೆದವರ್ಷ ಅಕ್ಟೋಬರ್​ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ ಮತ್ತು ಎನ್​.ವಿ.ರಮಣ ಮಧ್ಯೆ ವಿವಾದವೊಂದು ಎದ್ದಿತ್ತು. ಜಗನ್​ ಮೋಹನ್​ ರೆಡ್ಡಿಯವರು ರಮಣ ವಿರುದ್ಧ ಗಂಭೀರ ಆರೋಪ ಮಾಡಿ, ಸಿಜೆಐ ಬೋಬ್ಡೆಯವರಿಗೆ ಪತ್ರ ಬರೆದಿದ್ದರು. ಇತ್ತೀಚೆಗಷ್ಟೇ ಈ ಆರೋಪದಿಂದ ಇವರಿಗೆ ಕ್ಲೀನ್​ಚಿಟ್​ ಸಿಕ್ಕಿದೆ.

ಇದನ್ನೂ ಓದಿ:  ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

ನ್ಯಾಯಮೂರ್ತಿ ರಮಣ ವಿರುದ್ಧ ಆಂಧ್ರ ಸಿಎಂ ಸುಪ್ರೀಂಕೋರ್ಟ್​ಗೆ ನೀಡಿದ್ದ ದೂರಿನ ಅರ್ಜಿ ವಜಾ; ಗೌಪ್ಯ ವಿಚಾರಣೆ ಬಹಿರಂಗ ಪಡಿಸಲು ಸಾಧ್ಯವಿಲ್ಲವೆಂದ ಪೀಠ

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ