AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ನೇಮಕ; ಏಪ್ರಿಲ್​ 24ಕ್ಕೆ ಪ್ರಮಾಣವಚನ ಸ್ವೀಕಾರ

ಸುಪ್ರಿಂಕೋರ್ಟ್​ನ 48ನೇ ನ್ಯಾಯಮೂರ್ತಿಯಾಗಿ ಏಪ್ರಿಲ್​ 24ರಂದು ಪ್ರಮಾಣವಚನ ಸ್ವೀಕರಿಸಲಿರುವ ರಮಣ, 2022ರ ಆಗಸ್ಟ್​ 26ರಂದು ನಿವೃತ್ತರಾಗಲಿದ್ದಾರೆ.

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ನೇಮಕ; ಏಪ್ರಿಲ್​ 24ಕ್ಕೆ ಪ್ರಮಾಣವಚನ ಸ್ವೀಕಾರ
ನ್ಯಾಯಮೂರ್ತಿ ರಮಣ
Lakshmi Hegde
|

Updated on: Apr 06, 2021 | 11:31 AM

Share

ದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI)ಯಾಗಿ ಎನ್​.ವಿ.ರಮಣ ಹೆಸರು ಇಂದು ಅಂತಿಮಗೊಂಡಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರು ರಮಣ ಅವರನ್ನು ನೇಮಕಮಾಡಿದ್ದು, ಏಪ್ರಿಲ್​ 24ರಂದು ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಲಿದ್ದಾರೆ. ಈಗಿನ ಮುಖ್ಯನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಏಪ್ರಿಲ್​ 23ರಂದು ನಿವೃತ್ತರಾಗಲಿದ್ದಾರೆ.. ಹಾಗೇ, ಮುಂದಿನ ಸಿಜೆಐ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಬೊಬ್ಡೆಯವರೇ ಶಿಫಾರಸು ಮಾಡಿದ್ದರು.

ಸುಪ್ರಿಂಕೋರ್ಟ್​ನ 48ನೇ ನ್ಯಾಯಮೂರ್ತಿಯಾಗಿ ಏಪ್ರಿಲ್​ 24ರಂದು ಪ್ರಮಾಣವಚನ ಸ್ವೀಕರಿಸಲಿರುವ ರಮಣ, 2022ರ ಆಗಸ್ಟ್​ 26ರಂದು ನಿವೃತ್ತರಾಗಲಿದ್ದಾರೆ. ಎನ್​.ವಿ.ರಮಣ 1957ರ ಆಗಸ್ಟ್​ 27ರಂದು ಆಂಧ್ರಪ್ರದೇಶದ ಪೊನ್ನಾವರಂ ಗ್ರಾಮದಲ್ಲಿ ಜನಿಸಿದ್ದಾರೆ. 1983ರ ಫೆಬ್ರವರಿ 10ರಿಂದ ವಕೀಲಿ ವೃತ್ತಿ ಪ್ರಾರಂಭಿಸಿದ ಇವರು 2000ರ ಜೂನ್​ 27ರಂದು ಆಂಧ್ರಪ್ರದೇಶ ಹೈಕೋರ್ಟ್​​ನ ಮುಖ್ಯನ್ಯಾಯಾಧೀಶರಾಗಿ ನೇಮಕಗೊಂಡರು. 2014ರ ಫೆಬ್ರವರಿ 17ರಂದು ಸುಪ್ರಿಂಕೋರ್ಟ್ ಜಡ್ಜ್​ ಆಗಿ ನೇಮಕಗೊಂಡಿದ್ದಾರೆ. ಕಳೆದವರ್ಷ ಅಕ್ಟೋಬರ್​ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ ಮತ್ತು ಎನ್​.ವಿ.ರಮಣ ಮಧ್ಯೆ ವಿವಾದವೊಂದು ಎದ್ದಿತ್ತು. ಜಗನ್​ ಮೋಹನ್​ ರೆಡ್ಡಿಯವರು ರಮಣ ವಿರುದ್ಧ ಗಂಭೀರ ಆರೋಪ ಮಾಡಿ, ಸಿಜೆಐ ಬೋಬ್ಡೆಯವರಿಗೆ ಪತ್ರ ಬರೆದಿದ್ದರು. ಇತ್ತೀಚೆಗಷ್ಟೇ ಈ ಆರೋಪದಿಂದ ಇವರಿಗೆ ಕ್ಲೀನ್​ಚಿಟ್​ ಸಿಕ್ಕಿದೆ.

ಇದನ್ನೂ ಓದಿ:  ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

ನ್ಯಾಯಮೂರ್ತಿ ರಮಣ ವಿರುದ್ಧ ಆಂಧ್ರ ಸಿಎಂ ಸುಪ್ರೀಂಕೋರ್ಟ್​ಗೆ ನೀಡಿದ್ದ ದೂರಿನ ಅರ್ಜಿ ವಜಾ; ಗೌಪ್ಯ ವಿಚಾರಣೆ ಬಹಿರಂಗ ಪಡಿಸಲು ಸಾಧ್ಯವಿಲ್ಲವೆಂದ ಪೀಠ

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ