ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ನೇಮಕ; ಏಪ್ರಿಲ್​ 24ಕ್ಕೆ ಪ್ರಮಾಣವಚನ ಸ್ವೀಕಾರ

ಸುಪ್ರಿಂಕೋರ್ಟ್​ನ 48ನೇ ನ್ಯಾಯಮೂರ್ತಿಯಾಗಿ ಏಪ್ರಿಲ್​ 24ರಂದು ಪ್ರಮಾಣವಚನ ಸ್ವೀಕರಿಸಲಿರುವ ರಮಣ, 2022ರ ಆಗಸ್ಟ್​ 26ರಂದು ನಿವೃತ್ತರಾಗಲಿದ್ದಾರೆ.

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ನೇಮಕ; ಏಪ್ರಿಲ್​ 24ಕ್ಕೆ ಪ್ರಮಾಣವಚನ ಸ್ವೀಕಾರ
ನ್ಯಾಯಮೂರ್ತಿ ರಮಣ
Follow us
|

Updated on: Apr 06, 2021 | 11:31 AM

ದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI)ಯಾಗಿ ಎನ್​.ವಿ.ರಮಣ ಹೆಸರು ಇಂದು ಅಂತಿಮಗೊಂಡಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರು ರಮಣ ಅವರನ್ನು ನೇಮಕಮಾಡಿದ್ದು, ಏಪ್ರಿಲ್​ 24ರಂದು ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಲಿದ್ದಾರೆ. ಈಗಿನ ಮುಖ್ಯನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಏಪ್ರಿಲ್​ 23ರಂದು ನಿವೃತ್ತರಾಗಲಿದ್ದಾರೆ.. ಹಾಗೇ, ಮುಂದಿನ ಸಿಜೆಐ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಬೊಬ್ಡೆಯವರೇ ಶಿಫಾರಸು ಮಾಡಿದ್ದರು.

ಸುಪ್ರಿಂಕೋರ್ಟ್​ನ 48ನೇ ನ್ಯಾಯಮೂರ್ತಿಯಾಗಿ ಏಪ್ರಿಲ್​ 24ರಂದು ಪ್ರಮಾಣವಚನ ಸ್ವೀಕರಿಸಲಿರುವ ರಮಣ, 2022ರ ಆಗಸ್ಟ್​ 26ರಂದು ನಿವೃತ್ತರಾಗಲಿದ್ದಾರೆ. ಎನ್​.ವಿ.ರಮಣ 1957ರ ಆಗಸ್ಟ್​ 27ರಂದು ಆಂಧ್ರಪ್ರದೇಶದ ಪೊನ್ನಾವರಂ ಗ್ರಾಮದಲ್ಲಿ ಜನಿಸಿದ್ದಾರೆ. 1983ರ ಫೆಬ್ರವರಿ 10ರಿಂದ ವಕೀಲಿ ವೃತ್ತಿ ಪ್ರಾರಂಭಿಸಿದ ಇವರು 2000ರ ಜೂನ್​ 27ರಂದು ಆಂಧ್ರಪ್ರದೇಶ ಹೈಕೋರ್ಟ್​​ನ ಮುಖ್ಯನ್ಯಾಯಾಧೀಶರಾಗಿ ನೇಮಕಗೊಂಡರು. 2014ರ ಫೆಬ್ರವರಿ 17ರಂದು ಸುಪ್ರಿಂಕೋರ್ಟ್ ಜಡ್ಜ್​ ಆಗಿ ನೇಮಕಗೊಂಡಿದ್ದಾರೆ. ಕಳೆದವರ್ಷ ಅಕ್ಟೋಬರ್​ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ ಮತ್ತು ಎನ್​.ವಿ.ರಮಣ ಮಧ್ಯೆ ವಿವಾದವೊಂದು ಎದ್ದಿತ್ತು. ಜಗನ್​ ಮೋಹನ್​ ರೆಡ್ಡಿಯವರು ರಮಣ ವಿರುದ್ಧ ಗಂಭೀರ ಆರೋಪ ಮಾಡಿ, ಸಿಜೆಐ ಬೋಬ್ಡೆಯವರಿಗೆ ಪತ್ರ ಬರೆದಿದ್ದರು. ಇತ್ತೀಚೆಗಷ್ಟೇ ಈ ಆರೋಪದಿಂದ ಇವರಿಗೆ ಕ್ಲೀನ್​ಚಿಟ್​ ಸಿಕ್ಕಿದೆ.

ಇದನ್ನೂ ಓದಿ:  ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

ನ್ಯಾಯಮೂರ್ತಿ ರಮಣ ವಿರುದ್ಧ ಆಂಧ್ರ ಸಿಎಂ ಸುಪ್ರೀಂಕೋರ್ಟ್​ಗೆ ನೀಡಿದ್ದ ದೂರಿನ ಅರ್ಜಿ ವಜಾ; ಗೌಪ್ಯ ವಿಚಾರಣೆ ಬಹಿರಂಗ ಪಡಿಸಲು ಸಾಧ್ಯವಿಲ್ಲವೆಂದ ಪೀಠ

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ