AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ನೇಮಕ; ಏಪ್ರಿಲ್​ 24ಕ್ಕೆ ಪ್ರಮಾಣವಚನ ಸ್ವೀಕಾರ

ಸುಪ್ರಿಂಕೋರ್ಟ್​ನ 48ನೇ ನ್ಯಾಯಮೂರ್ತಿಯಾಗಿ ಏಪ್ರಿಲ್​ 24ರಂದು ಪ್ರಮಾಣವಚನ ಸ್ವೀಕರಿಸಲಿರುವ ರಮಣ, 2022ರ ಆಗಸ್ಟ್​ 26ರಂದು ನಿವೃತ್ತರಾಗಲಿದ್ದಾರೆ.

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ನೇಮಕ; ಏಪ್ರಿಲ್​ 24ಕ್ಕೆ ಪ್ರಮಾಣವಚನ ಸ್ವೀಕಾರ
ನ್ಯಾಯಮೂರ್ತಿ ರಮಣ
Lakshmi Hegde
|

Updated on: Apr 06, 2021 | 11:31 AM

Share

ದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI)ಯಾಗಿ ಎನ್​.ವಿ.ರಮಣ ಹೆಸರು ಇಂದು ಅಂತಿಮಗೊಂಡಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರು ರಮಣ ಅವರನ್ನು ನೇಮಕಮಾಡಿದ್ದು, ಏಪ್ರಿಲ್​ 24ರಂದು ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಲಿದ್ದಾರೆ. ಈಗಿನ ಮುಖ್ಯನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಏಪ್ರಿಲ್​ 23ರಂದು ನಿವೃತ್ತರಾಗಲಿದ್ದಾರೆ.. ಹಾಗೇ, ಮುಂದಿನ ಸಿಜೆಐ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಬೊಬ್ಡೆಯವರೇ ಶಿಫಾರಸು ಮಾಡಿದ್ದರು.

ಸುಪ್ರಿಂಕೋರ್ಟ್​ನ 48ನೇ ನ್ಯಾಯಮೂರ್ತಿಯಾಗಿ ಏಪ್ರಿಲ್​ 24ರಂದು ಪ್ರಮಾಣವಚನ ಸ್ವೀಕರಿಸಲಿರುವ ರಮಣ, 2022ರ ಆಗಸ್ಟ್​ 26ರಂದು ನಿವೃತ್ತರಾಗಲಿದ್ದಾರೆ. ಎನ್​.ವಿ.ರಮಣ 1957ರ ಆಗಸ್ಟ್​ 27ರಂದು ಆಂಧ್ರಪ್ರದೇಶದ ಪೊನ್ನಾವರಂ ಗ್ರಾಮದಲ್ಲಿ ಜನಿಸಿದ್ದಾರೆ. 1983ರ ಫೆಬ್ರವರಿ 10ರಿಂದ ವಕೀಲಿ ವೃತ್ತಿ ಪ್ರಾರಂಭಿಸಿದ ಇವರು 2000ರ ಜೂನ್​ 27ರಂದು ಆಂಧ್ರಪ್ರದೇಶ ಹೈಕೋರ್ಟ್​​ನ ಮುಖ್ಯನ್ಯಾಯಾಧೀಶರಾಗಿ ನೇಮಕಗೊಂಡರು. 2014ರ ಫೆಬ್ರವರಿ 17ರಂದು ಸುಪ್ರಿಂಕೋರ್ಟ್ ಜಡ್ಜ್​ ಆಗಿ ನೇಮಕಗೊಂಡಿದ್ದಾರೆ. ಕಳೆದವರ್ಷ ಅಕ್ಟೋಬರ್​ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ ಮತ್ತು ಎನ್​.ವಿ.ರಮಣ ಮಧ್ಯೆ ವಿವಾದವೊಂದು ಎದ್ದಿತ್ತು. ಜಗನ್​ ಮೋಹನ್​ ರೆಡ್ಡಿಯವರು ರಮಣ ವಿರುದ್ಧ ಗಂಭೀರ ಆರೋಪ ಮಾಡಿ, ಸಿಜೆಐ ಬೋಬ್ಡೆಯವರಿಗೆ ಪತ್ರ ಬರೆದಿದ್ದರು. ಇತ್ತೀಚೆಗಷ್ಟೇ ಈ ಆರೋಪದಿಂದ ಇವರಿಗೆ ಕ್ಲೀನ್​ಚಿಟ್​ ಸಿಕ್ಕಿದೆ.

ಇದನ್ನೂ ಓದಿ:  ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

ನ್ಯಾಯಮೂರ್ತಿ ರಮಣ ವಿರುದ್ಧ ಆಂಧ್ರ ಸಿಎಂ ಸುಪ್ರೀಂಕೋರ್ಟ್​ಗೆ ನೀಡಿದ್ದ ದೂರಿನ ಅರ್ಜಿ ವಜಾ; ಗೌಪ್ಯ ವಿಚಾರಣೆ ಬಹಿರಂಗ ಪಡಿಸಲು ಸಾಧ್ಯವಿಲ್ಲವೆಂದ ಪೀಠ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ