AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟೂರಿನ ಮಣ್ಣಿಗೆ ತಲೆಬಾಗಿ, ನೆಲ ಮುಟ್ಟಿ ನಮಸ್ಕರಿಸಿದ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್

ಇಂತಹಾ ಹಳ್ಳಿಯಲ್ಲಿ ಹುಟ್ಟಿದ, ಸಾಮಾನ್ಯ ಹುಡುಗನೊಬ್ಬ ದೇಶದ ಅತ್ಯುನ್ನತ ಹುದ್ದೆಗೆ ಏರುತ್ತಾನೆ ಎಂದು ನಾನು ಕನಸಿನಲ್ಲೂ ಅಂದುಕೊಂಡಿರಲಿಲ್ಲ. ನಮ್ಮ ಸಾಂವಿಧಾನಿಕ ವ್ಯವಸ್ಥೆ ಇದನ್ನು ಸಾಧ್ಯವಾಗಿಸಿದೆ ಎಂದು ಕಾನ್ಪುರದ ಜನಾಭಿನಂದನಾ ಸಮಾರಂಭದಲ್ಲಿ ರಾಮ್​ನಾಥ್ ಕೋವಿಂದ್ ತಿಳಿಸಿದ್ದಾರೆ.

ಹುಟ್ಟೂರಿನ ಮಣ್ಣಿಗೆ ತಲೆಬಾಗಿ, ನೆಲ ಮುಟ್ಟಿ ನಮಸ್ಕರಿಸಿದ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್
ರಾಮ್​ನಾಥ್ ಕೋವಿಂದ್
TV9 Web
| Updated By: ganapathi bhat|

Updated on: Jun 27, 2021 | 4:22 PM

Share

ಲಕ್ನೋ: ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ಇಂದು (ಜೂನ್ 27) ಉತ್ತರ ಪ್ರದೇಶಕ್ಕೆ ಮೂರು ದಿನಗಳ ಭೇಟಿಗಾಗಿ ಆಗಮಿಸಿದ್ದಾರೆ. ಅವರ ಪ್ರವಾಸದ ಮೊದಲ ಕಾರ್ಯಕ್ರಮವಾಗಿ ರಾಷ್ಟ್ರಪತಿಗಳು ತಮ್ಮ ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ತಮ್ಮ ಮೂಲ ಹಳ್ಳಿಯಾದ ಪರೌಂಖ್ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿನ ಪಂತ್ರಿ ಮಾತಾ ದೇವಾಲಯಕ್ಕೆ ಭೇಟಿ ನೀಡಿ, ಹಳ್ಳಿ ಜನರೊಂದಿಗೆ ಸಮಯ ಕಳೆದಿದ್ದಾರೆ. ಈ ವೇಳೆ, ಭಾವನಾತ್ಮಕ ಸನ್ನಿವೇಶಕ್ಕೆ ಅಲ್ಲಿ ನೆರೆದಿದ್ದ ಜನರು ಸಾಕ್ಷಿಯಾಗಿದ್ದಾರೆ.

ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್, ತಮ್ಮ ಹುಟ್ಟೂರಿನ ಮಣ್ಣಿಗೆ ತಲೆಬಾಗಿ, ನೆಲಕ್ಕೆ ಕೈಮುಟ್ಟಿ ನಮಸ್ಕರಿಸಿದ್ದಾರೆ. ರಾಷ್ಟ್ರಪತಿಗಳ ಭಾವನಾತ್ಮಕ ಸನ್ನಿವೇಶದ ಫೋಟೊವನ್ನು ಪ್ರೆಸಿಡೆಂಟ್ ಆಫ್ ಇಂಡಿಯಾ ಟ್ವಿಟರ್ ಖಾತೆ ಹಂಚಿಕೊಂಡಿದೆ. ತಮ್ಮ ಮೂಲ ಊರಾದ ಕಾನ್ಪುರ್​ ದೆಹತ್ ಜಿಲ್ಲೆಯ ಪರೌಂಖ್ ಎಂಬಲ್ಲಿನ ಹೆಲಿಪ್ಯಾಡ್​ನಲ್ಲಿ ಇಳಿದ ತಕ್ಷಣ, ರಾಮ್​ನಾಥ್ ಕೋವಿಂದ್ ನೆಲಮುಟ್ಟಿ ನಮಸ್ಕಾರ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೂರು ದಿನಗಳ ಭೇಟಿಗೆ ಆಗಮಿಸಿದ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್​ರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ರಾಜ್ಯಪಾಲ ಆನಂದಿಬೆನ್ ಪಟೇಲ್ ಸ್ವಾಗತಿಸಿದ್ದಾರೆ. ಈ ವೇಳೆ, ರಾಮ್​ನಾಥ್ ಕೋವಿಂದ್ ನೆಲಮುಟ್ಟಿ ಅಲ್ಲಿನ ಮಣ್ಣನ್ನು ಹಣೆಗೆ ತಿಲಕದಂತೆ ಹಚ್ಚಿಕೊಂಡಿದ್ದಾರೆ.

ಇಂತಹಾ ಹಳ್ಳಿಯಲ್ಲಿ ಹುಟ್ಟಿದ, ಸಾಮಾನ್ಯ ಹುಡುಗನೊಬ್ಬ ದೇಶದ ಅತ್ಯುನ್ನತ ಹುದ್ದೆಗೆ ಏರುತ್ತಾನೆ ಎಂದು ನಾನು ಕನಸಿನಲ್ಲೂ ಅಂದುಕೊಂಡಿರಲಿಲ್ಲ. ನಮ್ಮ ಸಾಂವಿಧಾನಿಕ ವ್ಯವಸ್ಥೆ ಇದನ್ನು ಸಾಧ್ಯವಾಗಿಸಿದೆ ಎಂದು ಕಾನ್ಪುರದ ಜನಾಭಿನಂದನಾ ಸಮಾರಂಭದಲ್ಲಿ ರಾಮ್​ನಾಥ್ ಕೋವಿಂದ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಾನು, ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ, ಸಂವಿಧಾನದ ಕರಡು ಸಮಿತಿಯ ಸದಸ್ಯರಿಗೆ ಅವರ ಸೇವೆ ಹಾಗೂ ತ್ಯಾಗಕ್ಕೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ. ತಲೆಬಾಗುತ್ತೇನೆ ಎಂದು ತಿಳಿಸಿದ್ದಾರೆ. ನಾನು ಈ ಹಂತದವರೆಗೆ ಬೆಳೆದ ಬಗ್ಗೆ ಈ ಹಳ್ಳಿಯ ಮಣ್ಣಿಗೆ ಹಾಗೂ ಜನರ ಆಶೀರ್ವಾದದಿಂದ ಎಂದು ರಾಮ್​ನಾಥ್ ಕೋವಿಂದ್ ಮಾತನಾಡಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿ ರಾಮನಾಥ ಕೋವಿಂದ್​ಗೆ ಬೈಪಾಸ್​ ಸರ್ಜರಿ; ಆರೋಗ್ಯ ಸ್ಥಿರವಾಗಿದೆ ಎಂದ ಏಮ್ಸ್ ವೈದ್ಯರು

ಸೇನಾ ಆಸ್ಪತ್ರೆಯಿಂದ ಏಮ್ಸ್​​ಗೆ ದಾಖಲಾದ ರಾಷ್ಟ್ರಪತಿ ರಾಮನಾಥ ಕೋವಿಂದ್; ಬಾಂಗ್ಲಾದೇಶದಿಂದ ಕರೆ ಮಾಡಿದ ಪ್ರಧಾನಿ ಮೋದಿ​

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!