AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀರಾಮನಿಲ್ಲದ ಅಯೋಧ್ಯೆ..ಅಯೋಧ್ಯೆಯೇ ಅಲ್ಲ’-ರಾಷ್ಟ್ರಪತಿ ರಾಮನಾಥ ಕೋವಿಂದ್

ರಾಮ ಕಥಾ ಪಾರ್ಕ್​​ನಲ್ಲಿ ರಾಮಾಯಣ ಸಮಾವೇಶ ಉದ್ಘಾಟನೆ ಮಾಡಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಜತೆಗೆ ಉತ್ತರಪ್ರದೇಶ ರಾಜ್ಯಪಾಲ ಆನಂದಿಬೆನ್​ ಪಾಟೀಲ್​ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕೂಡ ಇದ್ದರು.

‘ಶ್ರೀರಾಮನಿಲ್ಲದ ಅಯೋಧ್ಯೆ..ಅಯೋಧ್ಯೆಯೇ ಅಲ್ಲ’-ರಾಷ್ಟ್ರಪತಿ ರಾಮನಾಥ ಕೋವಿಂದ್
ಶ್ರೀರಾಮನಿಗೆ ಪೂಜೆ ಸಲ್ಲಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್​
TV9 Web
| Edited By: |

Updated on: Aug 30, 2021 | 1:34 PM

Share

ರಾಷ್ಟ್ರಪತಿ ರಾಮನಾಥ ಕೋವಿಂದ್ (President Ram Nath Kovind)​ ನಿನ್ನೆ (ಭಾನುವಾರ) ಅಯೋಧ್ಯೆಯ ರಾಮಲಲ್ಲಾ (Ram Lalla)ಗೆ ಪೂಜೆ ಸಮರ್ಪಿಸಿದ್ದಾರೆ. ಆಗಸ್ಟ್​ 29ರಂದು ಅಯೋಧ್ಯೆ ಶ್ರೀರಾಮ ಮಂದಿರ (Ayodhya Ram Temple) ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ರಾಮನಾಥ ಕೋವಿಂದ್​, ಸದ್ಯ ಅಲ್ಲೇ ಪಕ್ಕದ ಗುಡಿಯಲ್ಲಿರುವ ರಾಮ ಲಲ್ಲಾನ ದರ್ಶನ ಪಡೆದರು. ಹಾಗೇ, ಶ್ರೀರಾಮ ಎಲ್ಲರಿಗೂ ಸೇರಿದವನು..ಅವನು ಪ್ರತಿಯೊಬ್ಬರಲ್ಲೂ ಇದ್ದಾನೆ ಎಂದು ಹೇಳಿದರು.

ರಾಮ ಕಥಾ ಪಾರ್ಕ್​​ನಲ್ಲಿ ರಾಮಾಯಣ ಸಮಾವೇಶ ಉದ್ಘಾಟನೆ ಮಾಡಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಜತೆಗೆ ಉತ್ತರಪ್ರದೇಶ ರಾಜ್ಯಪಾಲ ಆನಂದಿಬೆನ್​ ಪಾಟೀಲ್​ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕೂಡ ಇದ್ದರು. ನಂತರ ಮಾತನಾಡಿದ ಅವರು, ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳ ಸತತ ಪ್ರಯತ್ನದಿಂದಾಗಿ ಅಯೋಧ್ಯೆ ಮಾನವ ಕಲ್ಯಾಣದ ಕೇಂದ್ರವಾಗಿ ರೂಪುಗೊಳ್ಳಲಿದೆ ಎಂಬ ಆಶಯ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ಸಾಮಾಜಿಕ ಸಾಮರಸ್ಯಕ್ಕೆ ಈ ನಗರ ಉದಾಹರಣೆಯಾಗಲಿ ಎಂದೂ ಹೇಳಿದರು.

ಅಯೋಧ್ಯೆ, ಭಗವಾನ್​ ಶ್ರೀರಾಮನ ಹುಟ್ಟಿದ ಸ್ಥಳ ಮತ್ತು ಅವನ ಲೀಲೆಗಳಿಗೆ ಸಾಕ್ಷಿಯಾದ ಭೂಮಿ. ರಾಮನಿಲ್ಲದ ಅಯೋಧ್ಯೆಯನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಸಂಸ್ಕೃತ ಕವಿ ಭಾಸನ ಪ್ರತಿಮಾ ನಾಟಕದಲ್ಲಿ ಶ್ರೀರಾಮ ಮತ್ತು ಅಯೋಧ್ಯೆಯ ನಡುವಿನ ಸಂಬಂಧವನ್ನು ತುಂಬ ಸುಂದರವಾಗಿ ವರ್ಣಿಸಲಾಗಿದೆ. ರಾಮನಿಲ್ಲದ ಅಯೋಧ್ಯೆ, ಅಯೋಧ್ಯೆಯೇ ಅಲ್ಲ ಎಂದು ಆ ಕವಿ ಹೇಳಿದ್ದಾರೆ ಎಂದು ರಾಮನಾಥ ಕೋವಿಂದ್​ ಹೇಳಿದರು. ಹಾಗೇ, ರಾಮಾಯಣ ಸಮಾವೇಶವನ್ನು ಆಯೋಜಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಅವರ ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಜೀವನ ಮೌಲ್ಯಗಳನ್ನು ಸಾರುವ ರಾಮಾಯಣ ಹೆಚ್ಚೆಚ್ಚು ಜನರಿಗೆ ತಿಳಿಯಬೇಕು ಎಂದೂ ಅಭಿಪ್ರಾಯಪಟ್ಟರು.

ಇದನ್ನೂ ಓದಿ: Viral Video: ಹಾವೇ ಹೇರ್​ ಬ್ಯಾಂಡ್ ಆಯ್ತು!; ಶಾಪಿಂಗ್​ ಮಾಲ್​ನಲ್ಲಿ ಯುವತಿಯ ತಲೆ ನೋಡಿ ಓಡಿದ ಜನ

1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭಿಸಬೇಕು; ರಾಜ್ಯ ಸರ್ಕಾರಕ್ಕೆ ಖಾಸಗಿ ಶಾಲಾ ಒಕ್ಕೂಟದಿಂದ ಒತ್ತಾಯ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!