AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀರಾಮನಿಲ್ಲದ ಅಯೋಧ್ಯೆ..ಅಯೋಧ್ಯೆಯೇ ಅಲ್ಲ’-ರಾಷ್ಟ್ರಪತಿ ರಾಮನಾಥ ಕೋವಿಂದ್

ರಾಮ ಕಥಾ ಪಾರ್ಕ್​​ನಲ್ಲಿ ರಾಮಾಯಣ ಸಮಾವೇಶ ಉದ್ಘಾಟನೆ ಮಾಡಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಜತೆಗೆ ಉತ್ತರಪ್ರದೇಶ ರಾಜ್ಯಪಾಲ ಆನಂದಿಬೆನ್​ ಪಾಟೀಲ್​ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕೂಡ ಇದ್ದರು.

‘ಶ್ರೀರಾಮನಿಲ್ಲದ ಅಯೋಧ್ಯೆ..ಅಯೋಧ್ಯೆಯೇ ಅಲ್ಲ’-ರಾಷ್ಟ್ರಪತಿ ರಾಮನಾಥ ಕೋವಿಂದ್
ಶ್ರೀರಾಮನಿಗೆ ಪೂಜೆ ಸಲ್ಲಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್​
TV9 Web
| Edited By: |

Updated on: Aug 30, 2021 | 1:34 PM

Share

ರಾಷ್ಟ್ರಪತಿ ರಾಮನಾಥ ಕೋವಿಂದ್ (President Ram Nath Kovind)​ ನಿನ್ನೆ (ಭಾನುವಾರ) ಅಯೋಧ್ಯೆಯ ರಾಮಲಲ್ಲಾ (Ram Lalla)ಗೆ ಪೂಜೆ ಸಮರ್ಪಿಸಿದ್ದಾರೆ. ಆಗಸ್ಟ್​ 29ರಂದು ಅಯೋಧ್ಯೆ ಶ್ರೀರಾಮ ಮಂದಿರ (Ayodhya Ram Temple) ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ರಾಮನಾಥ ಕೋವಿಂದ್​, ಸದ್ಯ ಅಲ್ಲೇ ಪಕ್ಕದ ಗುಡಿಯಲ್ಲಿರುವ ರಾಮ ಲಲ್ಲಾನ ದರ್ಶನ ಪಡೆದರು. ಹಾಗೇ, ಶ್ರೀರಾಮ ಎಲ್ಲರಿಗೂ ಸೇರಿದವನು..ಅವನು ಪ್ರತಿಯೊಬ್ಬರಲ್ಲೂ ಇದ್ದಾನೆ ಎಂದು ಹೇಳಿದರು.

ರಾಮ ಕಥಾ ಪಾರ್ಕ್​​ನಲ್ಲಿ ರಾಮಾಯಣ ಸಮಾವೇಶ ಉದ್ಘಾಟನೆ ಮಾಡಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಜತೆಗೆ ಉತ್ತರಪ್ರದೇಶ ರಾಜ್ಯಪಾಲ ಆನಂದಿಬೆನ್​ ಪಾಟೀಲ್​ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕೂಡ ಇದ್ದರು. ನಂತರ ಮಾತನಾಡಿದ ಅವರು, ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳ ಸತತ ಪ್ರಯತ್ನದಿಂದಾಗಿ ಅಯೋಧ್ಯೆ ಮಾನವ ಕಲ್ಯಾಣದ ಕೇಂದ್ರವಾಗಿ ರೂಪುಗೊಳ್ಳಲಿದೆ ಎಂಬ ಆಶಯ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ಸಾಮಾಜಿಕ ಸಾಮರಸ್ಯಕ್ಕೆ ಈ ನಗರ ಉದಾಹರಣೆಯಾಗಲಿ ಎಂದೂ ಹೇಳಿದರು.

ಅಯೋಧ್ಯೆ, ಭಗವಾನ್​ ಶ್ರೀರಾಮನ ಹುಟ್ಟಿದ ಸ್ಥಳ ಮತ್ತು ಅವನ ಲೀಲೆಗಳಿಗೆ ಸಾಕ್ಷಿಯಾದ ಭೂಮಿ. ರಾಮನಿಲ್ಲದ ಅಯೋಧ್ಯೆಯನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಸಂಸ್ಕೃತ ಕವಿ ಭಾಸನ ಪ್ರತಿಮಾ ನಾಟಕದಲ್ಲಿ ಶ್ರೀರಾಮ ಮತ್ತು ಅಯೋಧ್ಯೆಯ ನಡುವಿನ ಸಂಬಂಧವನ್ನು ತುಂಬ ಸುಂದರವಾಗಿ ವರ್ಣಿಸಲಾಗಿದೆ. ರಾಮನಿಲ್ಲದ ಅಯೋಧ್ಯೆ, ಅಯೋಧ್ಯೆಯೇ ಅಲ್ಲ ಎಂದು ಆ ಕವಿ ಹೇಳಿದ್ದಾರೆ ಎಂದು ರಾಮನಾಥ ಕೋವಿಂದ್​ ಹೇಳಿದರು. ಹಾಗೇ, ರಾಮಾಯಣ ಸಮಾವೇಶವನ್ನು ಆಯೋಜಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಅವರ ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಜೀವನ ಮೌಲ್ಯಗಳನ್ನು ಸಾರುವ ರಾಮಾಯಣ ಹೆಚ್ಚೆಚ್ಚು ಜನರಿಗೆ ತಿಳಿಯಬೇಕು ಎಂದೂ ಅಭಿಪ್ರಾಯಪಟ್ಟರು.

ಇದನ್ನೂ ಓದಿ: Viral Video: ಹಾವೇ ಹೇರ್​ ಬ್ಯಾಂಡ್ ಆಯ್ತು!; ಶಾಪಿಂಗ್​ ಮಾಲ್​ನಲ್ಲಿ ಯುವತಿಯ ತಲೆ ನೋಡಿ ಓಡಿದ ಜನ

1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭಿಸಬೇಕು; ರಾಜ್ಯ ಸರ್ಕಾರಕ್ಕೆ ಖಾಸಗಿ ಶಾಲಾ ಒಕ್ಕೂಟದಿಂದ ಒತ್ತಾಯ

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!