AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀರಾಮನಿಲ್ಲದ ಅಯೋಧ್ಯೆ..ಅಯೋಧ್ಯೆಯೇ ಅಲ್ಲ’-ರಾಷ್ಟ್ರಪತಿ ರಾಮನಾಥ ಕೋವಿಂದ್

ರಾಮ ಕಥಾ ಪಾರ್ಕ್​​ನಲ್ಲಿ ರಾಮಾಯಣ ಸಮಾವೇಶ ಉದ್ಘಾಟನೆ ಮಾಡಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಜತೆಗೆ ಉತ್ತರಪ್ರದೇಶ ರಾಜ್ಯಪಾಲ ಆನಂದಿಬೆನ್​ ಪಾಟೀಲ್​ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕೂಡ ಇದ್ದರು.

‘ಶ್ರೀರಾಮನಿಲ್ಲದ ಅಯೋಧ್ಯೆ..ಅಯೋಧ್ಯೆಯೇ ಅಲ್ಲ’-ರಾಷ್ಟ್ರಪತಿ ರಾಮನಾಥ ಕೋವಿಂದ್
ಶ್ರೀರಾಮನಿಗೆ ಪೂಜೆ ಸಲ್ಲಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್​
TV9 Web
| Edited By: |

Updated on: Aug 30, 2021 | 1:34 PM

Share

ರಾಷ್ಟ್ರಪತಿ ರಾಮನಾಥ ಕೋವಿಂದ್ (President Ram Nath Kovind)​ ನಿನ್ನೆ (ಭಾನುವಾರ) ಅಯೋಧ್ಯೆಯ ರಾಮಲಲ್ಲಾ (Ram Lalla)ಗೆ ಪೂಜೆ ಸಮರ್ಪಿಸಿದ್ದಾರೆ. ಆಗಸ್ಟ್​ 29ರಂದು ಅಯೋಧ್ಯೆ ಶ್ರೀರಾಮ ಮಂದಿರ (Ayodhya Ram Temple) ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ರಾಮನಾಥ ಕೋವಿಂದ್​, ಸದ್ಯ ಅಲ್ಲೇ ಪಕ್ಕದ ಗುಡಿಯಲ್ಲಿರುವ ರಾಮ ಲಲ್ಲಾನ ದರ್ಶನ ಪಡೆದರು. ಹಾಗೇ, ಶ್ರೀರಾಮ ಎಲ್ಲರಿಗೂ ಸೇರಿದವನು..ಅವನು ಪ್ರತಿಯೊಬ್ಬರಲ್ಲೂ ಇದ್ದಾನೆ ಎಂದು ಹೇಳಿದರು.

ರಾಮ ಕಥಾ ಪಾರ್ಕ್​​ನಲ್ಲಿ ರಾಮಾಯಣ ಸಮಾವೇಶ ಉದ್ಘಾಟನೆ ಮಾಡಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಜತೆಗೆ ಉತ್ತರಪ್ರದೇಶ ರಾಜ್ಯಪಾಲ ಆನಂದಿಬೆನ್​ ಪಾಟೀಲ್​ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕೂಡ ಇದ್ದರು. ನಂತರ ಮಾತನಾಡಿದ ಅವರು, ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳ ಸತತ ಪ್ರಯತ್ನದಿಂದಾಗಿ ಅಯೋಧ್ಯೆ ಮಾನವ ಕಲ್ಯಾಣದ ಕೇಂದ್ರವಾಗಿ ರೂಪುಗೊಳ್ಳಲಿದೆ ಎಂಬ ಆಶಯ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ಸಾಮಾಜಿಕ ಸಾಮರಸ್ಯಕ್ಕೆ ಈ ನಗರ ಉದಾಹರಣೆಯಾಗಲಿ ಎಂದೂ ಹೇಳಿದರು.

ಅಯೋಧ್ಯೆ, ಭಗವಾನ್​ ಶ್ರೀರಾಮನ ಹುಟ್ಟಿದ ಸ್ಥಳ ಮತ್ತು ಅವನ ಲೀಲೆಗಳಿಗೆ ಸಾಕ್ಷಿಯಾದ ಭೂಮಿ. ರಾಮನಿಲ್ಲದ ಅಯೋಧ್ಯೆಯನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಸಂಸ್ಕೃತ ಕವಿ ಭಾಸನ ಪ್ರತಿಮಾ ನಾಟಕದಲ್ಲಿ ಶ್ರೀರಾಮ ಮತ್ತು ಅಯೋಧ್ಯೆಯ ನಡುವಿನ ಸಂಬಂಧವನ್ನು ತುಂಬ ಸುಂದರವಾಗಿ ವರ್ಣಿಸಲಾಗಿದೆ. ರಾಮನಿಲ್ಲದ ಅಯೋಧ್ಯೆ, ಅಯೋಧ್ಯೆಯೇ ಅಲ್ಲ ಎಂದು ಆ ಕವಿ ಹೇಳಿದ್ದಾರೆ ಎಂದು ರಾಮನಾಥ ಕೋವಿಂದ್​ ಹೇಳಿದರು. ಹಾಗೇ, ರಾಮಾಯಣ ಸಮಾವೇಶವನ್ನು ಆಯೋಜಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮತ್ತು ಅವರ ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಜೀವನ ಮೌಲ್ಯಗಳನ್ನು ಸಾರುವ ರಾಮಾಯಣ ಹೆಚ್ಚೆಚ್ಚು ಜನರಿಗೆ ತಿಳಿಯಬೇಕು ಎಂದೂ ಅಭಿಪ್ರಾಯಪಟ್ಟರು.

ಇದನ್ನೂ ಓದಿ: Viral Video: ಹಾವೇ ಹೇರ್​ ಬ್ಯಾಂಡ್ ಆಯ್ತು!; ಶಾಪಿಂಗ್​ ಮಾಲ್​ನಲ್ಲಿ ಯುವತಿಯ ತಲೆ ನೋಡಿ ಓಡಿದ ಜನ

1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭಿಸಬೇಕು; ರಾಜ್ಯ ಸರ್ಕಾರಕ್ಕೆ ಖಾಸಗಿ ಶಾಲಾ ಒಕ್ಕೂಟದಿಂದ ಒತ್ತಾಯ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್