AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಗಿಲ್​ ದಿವಸ್​ ಆಚರಣೆಗಾಗಿ ಜಮ್ಮು-ಕಾಶ್ಮೀರ, ಲಡಾಖ್​ಗೆ ತೆರಳಲಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್​ 

Kargil Vijay Diwas: ಭಾರತ 1999ರ ಜುಲೈ 26ರಂದು ಪಾಕ್ ವಿರುದ್ಧ​ ಕಾರ್ಗಿಲ್​ ಯುದ್ಧವನ್ನು ಗೆದ್ದಿದೆ. ಅಂದು ಭಾರತದ ಅದೆಷ್ಟೋ ವೀರಯೋಧರು ಹುತಾತ್ಮರಾಗಿದ್ದಾರೆ. ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಈ ಕಾರ್ಗಿಲ್​ ದಿವಸ್ ಆಚರಿಸಲಾಗುತ್ತದೆ.

ಕಾರ್ಗಿಲ್​ ದಿವಸ್​ ಆಚರಣೆಗಾಗಿ ಜಮ್ಮು-ಕಾಶ್ಮೀರ, ಲಡಾಖ್​ಗೆ ತೆರಳಲಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್​ 
ರಾಮನಾಥ ಕೋವಿಂದ್​
TV9 Web
| Edited By: |

Updated on:Jul 18, 2021 | 2:42 PM

Share

ಜುಲೈ 26ರಂದು ಕಾರ್ಗಿಲ್​ ದಿವಸ್​ ಆಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ (Ram Nath Kovind)​ ಅವರು ಬರುವ ವಾರ ಮೂರು ದಿನಗಳ ಕಾಲ ಜಮ್ಮು-ಕಾಶ್ಮೀರ ಮತ್ತು ಲಡಾಖ್​ಗೆ ಭೇಟಿ ಕೊಡಲಿದ್ದಾರೆ. ಅವರು ಜುಲೈ 25ರಂದು ಜಮ್ಮುಕಾಶ್ಮೀರ (Jammu-Kashmir) ಕ್ಕೆ ತೆರಳಿ, ಮರುದಿನ ಕಾರ್ಗಿಲ್​ ದಿವಸ್(Kargil Diwas)​ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಮೂಲಗಳು ತಿಳಿಸಿವೆ. ರಾಷ್ಟ್ರಪತಿಯವರು ತಮ್ಮ ಭೇಟಿ ಸಮಯದಲ್ಲಿ ಕಾರ್ಗಿಲ್​ ಯುದ್ಧದ ಸ್ಮಾರಕಕ್ಕೆ ಭೇಟಿ ಕೊಡುವ ಸಾಧ್ಯತೆ ಇದೆ. ಆದರೆ ಅವರ ಪ್ರವಾಸದ ಸಂಪೂರ್ಣ ಯೋಜನೆಯ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎನ್ನಲಾಗಿದೆ.

ಭಾರತ 1999ರ ಜುಲೈ 26ರಂದು ಪಾಕ್ ವಿರುದ್ಧ​ ಕಾರ್ಗಿಲ್​ ಯುದ್ಧವನ್ನು ಗೆದ್ದಿದೆ. ಅಂದು ಭಾರತದ ಅದೆಷ್ಟೋ ವೀರಯೋಧರು ಹುತಾತ್ಮರಾಗಿದ್ದಾರೆ. ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಮತ್ತು ವಿಜಯದ ಸಂಭ್ರಮ ನೆನಪಿಸಿಕೊಳ್ಳುವ ನಿಮಿತ್ತ ಪ್ರತಿವರ್ಷವೂ ಜುಲೈ 26ರಂದು ಕಾರ್ಗಿಲ್​ ದಿವಸ್​ ಆಚರಿಸುತ್ತದೆ. ಹಾಗೇ ಈ ಬಾರಿ ಆಪರೇಶನ್​ ವಿಜಯ್​ (Operation Vijay)ದ 22ನೇ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ.

ಪಾಕಿಸ್ತಾನ ಸೈನಿಕರು ಮತ್ತು ನುಸುಳುಕೋರರಿಂದ ಆಕ್ರಮಿಸಲ್ಪಟ್ಟಿದ್ದ ಕಾರ್ಗಿಲ್ ವಲಯದಲ್ಲಿ ಭಾರತೀಯ ಯೋಧರು ಆಪರೇಶನ್​ ವಿಜಯ್​ ನಡೆಸಿದ ಬಳಿಕ ಎರಡೂ ದೇಶಗಳ ನಡುವೆ ಯುದ್ಧ ನಡೆದಿತ್ತು. 1999ರ ಮೇ ತಿಂಗಳಿನಿಂದಲೂ 1999ರ ಜುಲೈ 26ರವರೆಗೆ ಯುದ್ಧ ನಡೆದು, ಅಂತಿಮವಾಗಿ ವಿಜಯ ಭಾರತಕ್ಕೆ ದಕ್ಕಿತ್ತು. ಈಗಲೂ ಸಹ ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಸದಾ ಕಾಲುಕೆರೆದುಕೊಂಡು ಬರುತ್ತಲೇ ಇರುತ್ತದೆ. 2019ರಲ್ಲಿ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದಾಗಿನಿಂದ ಪಾಕ್​ ಮತ್ತಷ್ಟು ಕಿಡಿಕಾರುತ್ತಿದೆ.

ಇದನ್ನೂ ಓದಿ: Viral Video: ವಿದೇಶಿ ಮಗುವಿನ ಬಾಯಲ್ಲಿ ನಮಸ್ತೇ ಇಂಡಿಯಾ! ವಿಡಿಯೋ ನೋಡಿ ದೃಷ್ಟಿ ತೆಗೆದ ಭಾರತೀಯರು

President Kovind to visit Jammu Kashmir and Ladakh to celebrate Kargil Diwas

Published On - 2:39 pm, Sun, 18 July 21

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ