AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2022: ರಾಜಪಥ್​​ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್​ರಿಂದ ಧ್ವಜಾರೋಹಣ: ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ರಾಜಪಥ್​​ನಲ್ಲಿ ಧ್ವಜಾರೋಹಣದ ಬಳಿಕ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಮ್ಮು-ಕಾಶ್ಮೀರ ಪೊಲೀಸ್ ಎಎಸ್​ಐ ಬಾಬು ರಾಮ್​ ಅವರಿಗೆ ಮರಣೋತ್ತರ ಅಶೋಕ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು. ಬಾಬು ರಾಮ್​ ಪತ್ನಿ ಮತ್ತು ಪುತ್ರ ಪ್ರಶಸ್ತಿ ಸ್ವೀಕಾರ ಮಾಡಿದ್ದಾರೆ.

Republic Day 2022: ರಾಜಪಥ್​​ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್​ರಿಂದ ಧ್ವಜಾರೋಹಣ: ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ
ರಾಜಪಥ್​​ನಲ್ಲಿ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್​
TV9 Web
| Updated By: Lakshmi Hegde|

Updated on:Jan 26, 2022 | 10:46 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi), ರಾಷ್ಟ್ರಪತಿ ರಾಮನಾಥ ಕೋವಿಂದ್(President Ram Nath Kovind)​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಹಾಗೂ ಇತರ ಗಣ್ಯರು ರಾಜಪಥ(Rajpath)ಕ್ಕೆ ತಲುಪಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಧ್ವಜಾರೋಹಣ ಮಾಡಿದರು. ಇನ್ನೇನು ಕೆಲವೇ ಕ್ಷಣಗಳಲ್ಲಿ ಗಣರಾಜ್ಯೋತ್ಸವ ಪಥ ಸಂಚಲನ (Republic Day Parade) ನಡೆಯಲಿದೆ. ಇನ್ನು ರಾಜಪಥಕ್ಕೆ ಆಗಮಿಸುವುದಕ್ಕೂ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ಅಲ್ಲಿ ದೇಶಕ್ಕಾಗಿ ಹೋರಾಟ ಮಾಡಿ, ಮಡಿದ ವೀರ ಯೋಧರಿಗೆ ಗೌರವ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಯವರಿಗೆ, ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಸಾಥ್​ ನೀಡಿದ್ದಾರೆ. ಹಾಗೇ, ಇಲ್ಲಿರುವ ವಿಸಿಟರ್ಸ್​ ಪುಸ್ತಕದಲ್ಲಿ ಪ್ರಧಾನಮಂತ್ರಿ ಸಹಿ ಮಾಡಿದ್ದಾರೆ.

ರಾಜಪಥ್​ಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದರು. ರಾಮನಾಥ್ ಕೋವಿಂದ್​ ಪತ್ನಿ ಸವಿತಾ ಕೋವಿಂದ್ ಕೂಡ ಆಗಮಿಸಿದ್ದಾರೆ.  10.30ಯಿಂದ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು,  ಭಾರತದ ಮಿಲಿಟರಿ ಶಕ್ತಿ ಮತ್ತು ಸಾಂಸ್ಕೃತಿಕ ವೈವಿದ್ಯತೆಗಳ ಪ್ರದರ್ಶನ ನಡೆಯಲಿದೆ. ಹಾಗೇ, ಭಾರತಕ್ಕೆ ಸ್ವಾತಂತ್ರ್ಯ ಬಂದು 75ವರ್ಷ ಆದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಆಜಾದಿ ಕಾ ಅಮೃತಮಹೋತ್ಸವದ ಭಾಗವಾಗಿ ಈ ಬಾರಿ ಗಣರಾಜ್ಯೋತ್ಸವದಲ್ಲಿ ಹಲವು ಕಾರ್ಯಕ್ರಮಗಳನ್ನು ಸೇರಿಸಲಾಗಿದೆ.

ರಾಜಪಥ್​​ನಲ್ಲಿ ಧ್ವಜಾರೋಹಣದ ಬಳಿಕ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಮ್ಮು-ಕಾಶ್ಮೀರ ಪೊಲೀಸ್ ಎಎಸ್​ಐ ಬಾಬು ರಾಮ್​ ಅವರಿಗೆ ಮರಣೋತ್ತರ ಅಶೋಕ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು. ಬಾಬು ರಾಮ್​ ಪರವಾಗಿ ಅವರ ಪತ್ನಿ ರೀನಾ ರಾಣಿ ಮತ್ತು ಪುತ್ರ ಮಣಿಕ್​ ಪ್ರಶಸ್ತಿ ಸ್ವೀಕರಿಸಿದ್ದಾರೆ. ಬಾಬು ರಾಮ್​ 2020ರಲ್ಲಿ ಶ್ರೀನಗರದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಟದಲ್ಲಿ ಅಸಾಧಾರಣ ಶೌರ್ಯ ತೋರಿಸಿದ್ದರು. ಮೂವರು ಉಗ್ರರನ್ನು ಹೊಡೆದುರುಳಿಸಿದ್ದರು.

ಇದನ್ನೂ ಓದಿ: ಹೊಸ 13 ಜಿಲ್ಲೆಗಳ ರಚನೆಗೆ ಆಂಧ್ರಪ್ರದೇಶ ಸಚಿವ ಸಂಪುಟ ಅನುಮತಿ, ಜಿಲ್ಲೆಗಳ ಸಂಖ್ಯೆ 26ಕ್ಕೇರಿಸಿದ ಸರ್ಕಾರ

Published On - 10:35 am, Wed, 26 January 22