AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

75ನೇ ಸ್ವಾತಂತ್ರ್ಯೋತ್ಸವ: ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ರಾಮನಾಥ ಕೋವಿಂದ್​

Independence Day: 75ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಮಾರ್ಚ್​ 12ರಂದು ಪ್ರಧಾನಿ ನರೇಂದ್ರ ಮೋದಿಯವರು ಆಜಾದಿ ಕಾ ಅಮೃತಮಹೋತ್ಸವ್​ದ ಕಾರ್ಯಕ್ರಮಗಳ ಸರಣಿಗೆ ಚಾಲನೆ ನೀಡಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವ: ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ರಾಮನಾಥ ಕೋವಿಂದ್​
ರಾಷ್ಟ್ರಪತಿ ರಾಮನಾಥ್ ಕೋವಿಂದ್
TV9 Web
| Edited By: |

Updated on:Aug 14, 2021 | 2:51 PM

Share

75ನೇ ಸ್ವಾತಂತ್ರ್ಯೋತ್ಸವ (Independence Day-2021)ದ ನಿಮಿತ್ತ ಇಂದು ರಾಷ್ಟ್ರಪತಿ (President Of India) ರಾಮನಾಥ ಕೋವಿಂದ್ (Ram Nath Kovind)  ಅವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ರಾಷ್ಟ್ರಪತಿ ಭಾಷಣ ಇಂದು ಸಂಜೆ 7ಗಂಟೆಯಿಂದ ದೂರದರ್ಶನ ಹಿಂದಿಯಲ್ಲಿ ಪ್ರಸಾರವಾಗಲಿದೆ. ಭಾಷಣದ ಇಂಗ್ಲಿಷ್ ಆವೃತ್ತಿ ಕೂಡ ಸಿಗಲಿದೆ. ಇನ್ನುಳಿದಂತೆ ಆಲ್​ ಇಂಡಿಯಾ ರೇಡಿಯೋ (AIR)ದ ಎಲ್ಲ ರಾಷ್ಟ್ರೀಯ ನೆಟ್​ವರ್ಕ್​ಗಳಲ್ಲೂ ಪ್ರಸಾರಗೊಳ್ಳಲಿದೆ. ರಾಷ್ಟ್ರಪತಿಯವರು ಹಿಂದಿಯಲ್ಲೇ ಮಾತನಾಡಲಿದ್ದು, ಅದು ಏಳುಗಂಟೆಯಿಂದ ಪ್ರಸಾರಗೊಳ್ಳಲಿದೆ. ಬಳಿಕ ರಾತ್ರಿ 9.30ರಿಂದ ಎಲ್ಲ ಪ್ರಾದೇಶಿಕ ಚಾನಲ್​ಗಳಲ್ಲಿ, ಆಯಾ ಸ್ಥಳೀಯ ಭಾಷೆಗಳಲ್ಲಿ ಪ್ರಸಾರಗೊಳ್ಳಲಿದೆ.

ಪ್ರಸಕ್ತ ವರ್ಷದ ಸ್ವಾತಂತ್ರ್ಯ ದಿನಾಚರಣೆ ಭಾರತಕ್ಕೆ ವಿಶೇಷ. ಕಾರಣ ಇದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ (75ನೇ ವರ್ಷ). 75ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಮಾರ್ಚ್​ 12ರಂದು ಪ್ರಧಾನಿ ನರೇಂದ್ರ ಮೋದಿಯವರು ಆಜಾದಿ ಕಾ ಅಮೃತಮಹೋತ್ಸವ್​ದ ಕಾರ್ಯಕ್ರಮಗಳ ಸರಣಿಗೆ ಚಾಲನೆ ನೀಡಿದ್ದಾರೆ. ಇದು 2023ರ ಸ್ವಾತಂತ್ರ್ಯೋತ್ಸವದವರೆಗೂ ಮುಂದುವರಿಯಲಿದೆ.

ಇನ್ನು ನಾಳೆ ಮುಂಜಾನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿಸಿ ಮಾತನಾಡುವರು. ಈ ಹಿನ್ನೆಲೆಯಲ್ಲಿ ಕೆಂಪುಕೋಟೆ ಸೇರಿ ದೇಶದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಬಿಗಿ ಭದ್ರತೆ ಕಲ್ಪಿಸಲಾಗಿದೆ. ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಮೇಲ್​ ಬಂದ ಹಿನ್ನೆಲೆಯಲ್ಲಿ ಅಲ್ಲಿ ಕೂಡ ರಕ್ಷಣಾ ಪಡೆಗಳ ಭದ್ರತೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಬಿಡುಗಡೆಗೆ ಮೂರು ದಿನವಿರುವಾಗ ಬಹುನಿರೀಕ್ಷಿತ ಮೋಟೋ ಎಡ್ಜ್ 20 ಫೋನಿನ ಬೆಲೆ ಬಹಿರಂಗ

Published On - 2:51 pm, Sat, 14 August 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು