AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

75ನೇ ಸ್ವಾತಂತ್ರ್ಯೋತ್ಸವ: ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ರಾಮನಾಥ ಕೋವಿಂದ್​

Independence Day: 75ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಮಾರ್ಚ್​ 12ರಂದು ಪ್ರಧಾನಿ ನರೇಂದ್ರ ಮೋದಿಯವರು ಆಜಾದಿ ಕಾ ಅಮೃತಮಹೋತ್ಸವ್​ದ ಕಾರ್ಯಕ್ರಮಗಳ ಸರಣಿಗೆ ಚಾಲನೆ ನೀಡಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವ: ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ರಾಮನಾಥ ಕೋವಿಂದ್​
ರಾಷ್ಟ್ರಪತಿ ರಾಮನಾಥ್ ಕೋವಿಂದ್
TV9 Web
| Edited By: |

Updated on:Aug 14, 2021 | 2:51 PM

Share

75ನೇ ಸ್ವಾತಂತ್ರ್ಯೋತ್ಸವ (Independence Day-2021)ದ ನಿಮಿತ್ತ ಇಂದು ರಾಷ್ಟ್ರಪತಿ (President Of India) ರಾಮನಾಥ ಕೋವಿಂದ್ (Ram Nath Kovind)  ಅವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ರಾಷ್ಟ್ರಪತಿ ಭಾಷಣ ಇಂದು ಸಂಜೆ 7ಗಂಟೆಯಿಂದ ದೂರದರ್ಶನ ಹಿಂದಿಯಲ್ಲಿ ಪ್ರಸಾರವಾಗಲಿದೆ. ಭಾಷಣದ ಇಂಗ್ಲಿಷ್ ಆವೃತ್ತಿ ಕೂಡ ಸಿಗಲಿದೆ. ಇನ್ನುಳಿದಂತೆ ಆಲ್​ ಇಂಡಿಯಾ ರೇಡಿಯೋ (AIR)ದ ಎಲ್ಲ ರಾಷ್ಟ್ರೀಯ ನೆಟ್​ವರ್ಕ್​ಗಳಲ್ಲೂ ಪ್ರಸಾರಗೊಳ್ಳಲಿದೆ. ರಾಷ್ಟ್ರಪತಿಯವರು ಹಿಂದಿಯಲ್ಲೇ ಮಾತನಾಡಲಿದ್ದು, ಅದು ಏಳುಗಂಟೆಯಿಂದ ಪ್ರಸಾರಗೊಳ್ಳಲಿದೆ. ಬಳಿಕ ರಾತ್ರಿ 9.30ರಿಂದ ಎಲ್ಲ ಪ್ರಾದೇಶಿಕ ಚಾನಲ್​ಗಳಲ್ಲಿ, ಆಯಾ ಸ್ಥಳೀಯ ಭಾಷೆಗಳಲ್ಲಿ ಪ್ರಸಾರಗೊಳ್ಳಲಿದೆ.

ಪ್ರಸಕ್ತ ವರ್ಷದ ಸ್ವಾತಂತ್ರ್ಯ ದಿನಾಚರಣೆ ಭಾರತಕ್ಕೆ ವಿಶೇಷ. ಕಾರಣ ಇದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ (75ನೇ ವರ್ಷ). 75ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಮಾರ್ಚ್​ 12ರಂದು ಪ್ರಧಾನಿ ನರೇಂದ್ರ ಮೋದಿಯವರು ಆಜಾದಿ ಕಾ ಅಮೃತಮಹೋತ್ಸವ್​ದ ಕಾರ್ಯಕ್ರಮಗಳ ಸರಣಿಗೆ ಚಾಲನೆ ನೀಡಿದ್ದಾರೆ. ಇದು 2023ರ ಸ್ವಾತಂತ್ರ್ಯೋತ್ಸವದವರೆಗೂ ಮುಂದುವರಿಯಲಿದೆ.

ಇನ್ನು ನಾಳೆ ಮುಂಜಾನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿಸಿ ಮಾತನಾಡುವರು. ಈ ಹಿನ್ನೆಲೆಯಲ್ಲಿ ಕೆಂಪುಕೋಟೆ ಸೇರಿ ದೇಶದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಬಿಗಿ ಭದ್ರತೆ ಕಲ್ಪಿಸಲಾಗಿದೆ. ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಮೇಲ್​ ಬಂದ ಹಿನ್ನೆಲೆಯಲ್ಲಿ ಅಲ್ಲಿ ಕೂಡ ರಕ್ಷಣಾ ಪಡೆಗಳ ಭದ್ರತೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಬಿಡುಗಡೆಗೆ ಮೂರು ದಿನವಿರುವಾಗ ಬಹುನಿರೀಕ್ಷಿತ ಮೋಟೋ ಎಡ್ಜ್ 20 ಫೋನಿನ ಬೆಲೆ ಬಹಿರಂಗ

Published On - 2:51 pm, Sat, 14 August 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ