AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75ನೇ ಸ್ವಾತಂತ್ರ್ಯೋತ್ಸವ: ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ರಾಮನಾಥ ಕೋವಿಂದ್​

Independence Day: 75ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಮಾರ್ಚ್​ 12ರಂದು ಪ್ರಧಾನಿ ನರೇಂದ್ರ ಮೋದಿಯವರು ಆಜಾದಿ ಕಾ ಅಮೃತಮಹೋತ್ಸವ್​ದ ಕಾರ್ಯಕ್ರಮಗಳ ಸರಣಿಗೆ ಚಾಲನೆ ನೀಡಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವ: ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ರಾಮನಾಥ ಕೋವಿಂದ್​
ರಾಷ್ಟ್ರಪತಿ ರಾಮನಾಥ್ ಕೋವಿಂದ್
TV9 Web
| Edited By: |

Updated on:Aug 14, 2021 | 2:51 PM

Share

75ನೇ ಸ್ವಾತಂತ್ರ್ಯೋತ್ಸವ (Independence Day-2021)ದ ನಿಮಿತ್ತ ಇಂದು ರಾಷ್ಟ್ರಪತಿ (President Of India) ರಾಮನಾಥ ಕೋವಿಂದ್ (Ram Nath Kovind)  ಅವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ರಾಷ್ಟ್ರಪತಿ ಭಾಷಣ ಇಂದು ಸಂಜೆ 7ಗಂಟೆಯಿಂದ ದೂರದರ್ಶನ ಹಿಂದಿಯಲ್ಲಿ ಪ್ರಸಾರವಾಗಲಿದೆ. ಭಾಷಣದ ಇಂಗ್ಲಿಷ್ ಆವೃತ್ತಿ ಕೂಡ ಸಿಗಲಿದೆ. ಇನ್ನುಳಿದಂತೆ ಆಲ್​ ಇಂಡಿಯಾ ರೇಡಿಯೋ (AIR)ದ ಎಲ್ಲ ರಾಷ್ಟ್ರೀಯ ನೆಟ್​ವರ್ಕ್​ಗಳಲ್ಲೂ ಪ್ರಸಾರಗೊಳ್ಳಲಿದೆ. ರಾಷ್ಟ್ರಪತಿಯವರು ಹಿಂದಿಯಲ್ಲೇ ಮಾತನಾಡಲಿದ್ದು, ಅದು ಏಳುಗಂಟೆಯಿಂದ ಪ್ರಸಾರಗೊಳ್ಳಲಿದೆ. ಬಳಿಕ ರಾತ್ರಿ 9.30ರಿಂದ ಎಲ್ಲ ಪ್ರಾದೇಶಿಕ ಚಾನಲ್​ಗಳಲ್ಲಿ, ಆಯಾ ಸ್ಥಳೀಯ ಭಾಷೆಗಳಲ್ಲಿ ಪ್ರಸಾರಗೊಳ್ಳಲಿದೆ.

ಪ್ರಸಕ್ತ ವರ್ಷದ ಸ್ವಾತಂತ್ರ್ಯ ದಿನಾಚರಣೆ ಭಾರತಕ್ಕೆ ವಿಶೇಷ. ಕಾರಣ ಇದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ (75ನೇ ವರ್ಷ). 75ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ಮಾರ್ಚ್​ 12ರಂದು ಪ್ರಧಾನಿ ನರೇಂದ್ರ ಮೋದಿಯವರು ಆಜಾದಿ ಕಾ ಅಮೃತಮಹೋತ್ಸವ್​ದ ಕಾರ್ಯಕ್ರಮಗಳ ಸರಣಿಗೆ ಚಾಲನೆ ನೀಡಿದ್ದಾರೆ. ಇದು 2023ರ ಸ್ವಾತಂತ್ರ್ಯೋತ್ಸವದವರೆಗೂ ಮುಂದುವರಿಯಲಿದೆ.

ಇನ್ನು ನಾಳೆ ಮುಂಜಾನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜಾರೋಹಣ ಮಾಡಿ, ದೇಶವನ್ನುದ್ದೇಶಿಸಿ ಮಾತನಾಡುವರು. ಈ ಹಿನ್ನೆಲೆಯಲ್ಲಿ ಕೆಂಪುಕೋಟೆ ಸೇರಿ ದೇಶದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಬಿಗಿ ಭದ್ರತೆ ಕಲ್ಪಿಸಲಾಗಿದೆ. ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಮೇಲ್​ ಬಂದ ಹಿನ್ನೆಲೆಯಲ್ಲಿ ಅಲ್ಲಿ ಕೂಡ ರಕ್ಷಣಾ ಪಡೆಗಳ ಭದ್ರತೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಬಿಡುಗಡೆಗೆ ಮೂರು ದಿನವಿರುವಾಗ ಬಹುನಿರೀಕ್ಷಿತ ಮೋಟೋ ಎಡ್ಜ್ 20 ಫೋನಿನ ಬೆಲೆ ಬಹಿರಂಗ

Published On - 2:51 pm, Sat, 14 August 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು