AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Temple Construction Fund ಮಂದಿರ ನಿರ್ಮಾಣಕ್ಕೆ 500100 ರೂ. ದೇಣಿಗೆ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಇಂದಿನಿಂದ ಆರಂಭವಾದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಅಭಿಯಾನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವ್ರಾಜ್ ಸಿಂಗ್ ಚೌವ್ಹಾಣ್ ಸೇರಿ ಹಲವರು ದೇಣಿಗೆ ನೀಡಿದ್ದಾರೆ. ಈ ಅಭಿಯಾನ ಫೆಬ್ರವರಿ 27 ರವರೆಗೆ ನಡೆಯಲಿದೆ.

Ram Temple Construction Fund ಮಂದಿರ ನಿರ್ಮಾಣಕ್ಕೆ 500100 ರೂ. ದೇಣಿಗೆ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ರಾಷ್ಟ್ರಪತಿ ರಾಮನಾಥ್ ಕೋವಿಂದ್ (ಸಂಗ್ರಹ ಚಿತ್ರ)
guruganesh bhat
|

Updated on: Jan 15, 2021 | 6:08 PM

Share

ದೆಹಲಿ: ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವೈಯಕ್ತಿಕವಾಗಿ ಐದು ಲಕ್ಷ ನೂರು ರೂಪಾಯಿ ದೇಣಿಗೆ ನೀಡಿದ್ದಾರೆ. ಇಂದಿನಿಂದ ಆರಂಭವಾದ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಕ್ಕೆ ದೇಶದ 4 ಲಕ್ಷ ಹಳ್ಳಿಗಳಿಂದ ದೇಣಿಗೆ ಸಂಗ್ರಹಿಸಲಾಗುತ್ತಿದ್ದು, ಫೆಬ್ರವರಿ 27 ರವರೆಗೆ ಈ ಅಭಿಯಾನ ಮುಂದುವರೆಯಲಿದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನ ಸಹ ಅಧ್ಯಕ್ಷ ಗೋವಿಂದ್ ದೇವ್ ಗಿರಿಜಿ ಮಹಾರಾಜ್, ವಿಶ್ವ ಹಿಂದೂ ಪರಿಷತ್​ನ ಕಾರ್ಯನಿರತ ಅಧ್ಯಕ್ಷ ಅಲೋಕ್ ಕುಮಾರ್, ರಾಮ ಮಂದಿರ ನಿರ್ಮಾಣ ಸಮಿತಿಯ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಮತ್ತು ಆರ್​ಎಸ್​ಎಸ್​ ಮುಖ್ಯಸ್ಥ ಕುಲ್​ಭೂಷಣ್ ಅಹುಜಾ ಅವರ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್​ರನ್ನು ಭೇಟಿಯಾಗಿದ್ದರು.

ರಾಷ್ಟ್ರಪತಿ ದೇಶದ ಮೊದಲ ಪ್ರಜೆಯಾಗಿದ್ದು, ಅವರಿಂದಲೇ ದೇಣಿಗೆ ಸಂಗ್ರಹ ಆರಂಭಿಸಲು ಇಚ್ಛಿಸಿ ಭೇಟಿಯಾದೆವು ಎಂದು ವಿಶ್ವ ಹಿಂದೂ ಪರಿಷತ್​ನ ಅಲೋಕ್ ಕುಮಾರ್ ತಿಳಿಸಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೀಡಿದ ಚೆಕ್​ನ್ನು ಪ್ರದರ್ಶಿಸುತ್ತಿರುವ ವಿಹಿಂಪ ಪ್ರಮುಖರು (ಚಿತ್ರ ಸೌಜನ್ಯ: ಟ್ವಿಟ್ಟರ್)

ರಾಮ ಮಂದಿರವಷ್ಟೇ ಅಲ್ಲ, ರಾಷ್ಟ್ರೀಯ ಮಂದಿರ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವ್ರಾಜ್ ಸಿಂಗ್ ಚೌವ್ಹಾಣ್ ಕೂಡ ರಾಮ ಮಂದಿರ ನಿರ್ಮಾಣಕ್ಕೆ 1 ಲಕ್ಷ ದೇಣಿಗೆ ನೀಡಿದ್ದಾರೆ. ‘ನನ್ನ ಕುಟುಂಬ ಸಹ ರಾಮ ಮಂದಿರ ನಿರ್ಮಾಣದಲ್ಲಿ ಪಾಲ್ಗೊಳ್ಳಲಿದೆ. ಇದು ಕೇವಲ ರಾಮ ಮಂದಿರವಷ್ಟೇ ಅಲ್ಲ, ರಾಷ್ಟ್ರೀಯ ದೇವಾಲಯ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಬಿಹಾರದ ಮಾಜಿ ಉಪ ಮುಖ್ಯಮಂತ್ರಿ, ರಾಜ್ಯಸಭಾ ಸಂಸದ ಸುಶಿಲ್ ಕುಮಾರ್ ಮೋದಿ ರಾಮ ಮಂದಿರ ನಿರ್ಮಾಣ ದೇಣಿಗೆ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ‘ಇತರ ಧರ್ಮೀಯರು ಸಹ ರಾಮ ಮಂದಿರ ನಿರ್ಮಾಣದಲ್ಲಿ ಪಾಲ್ಗೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ. ಮಸೀದಿ ನಿರ್ಮಾಣದಲ್ಲಿ ಮುಸ್ಲಿಮರು ಹೇಗೆ ಮುನ್ನೆಲೆಯಲ್ಲಿ ಪಾಲ್ಗೊಳ್ಳುವಂತೆಯೇ, ರಾಮ ಮಂದಿರ ನಿರ್ಮಾಣದಲ್ಲಿ ಹಿಂದೂಗಳು ಮುನ್ನೆಲೆಯಲ್ಲಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಕಡಲತೀರದಲ್ಲಿ ಜಾಗಿಂಗ್ ಮಾಡಿದ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ