Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Temple Construction Fund ಮಂದಿರ ನಿರ್ಮಾಣಕ್ಕೆ 500100 ರೂ. ದೇಣಿಗೆ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಇಂದಿನಿಂದ ಆರಂಭವಾದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಅಭಿಯಾನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವ್ರಾಜ್ ಸಿಂಗ್ ಚೌವ್ಹಾಣ್ ಸೇರಿ ಹಲವರು ದೇಣಿಗೆ ನೀಡಿದ್ದಾರೆ. ಈ ಅಭಿಯಾನ ಫೆಬ್ರವರಿ 27 ರವರೆಗೆ ನಡೆಯಲಿದೆ.

Ram Temple Construction Fund ಮಂದಿರ ನಿರ್ಮಾಣಕ್ಕೆ 500100 ರೂ. ದೇಣಿಗೆ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ರಾಷ್ಟ್ರಪತಿ ರಾಮನಾಥ್ ಕೋವಿಂದ್ (ಸಂಗ್ರಹ ಚಿತ್ರ)
Follow us
guruganesh bhat
|

Updated on: Jan 15, 2021 | 6:08 PM

ದೆಹಲಿ: ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವೈಯಕ್ತಿಕವಾಗಿ ಐದು ಲಕ್ಷ ನೂರು ರೂಪಾಯಿ ದೇಣಿಗೆ ನೀಡಿದ್ದಾರೆ. ಇಂದಿನಿಂದ ಆರಂಭವಾದ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಕ್ಕೆ ದೇಶದ 4 ಲಕ್ಷ ಹಳ್ಳಿಗಳಿಂದ ದೇಣಿಗೆ ಸಂಗ್ರಹಿಸಲಾಗುತ್ತಿದ್ದು, ಫೆಬ್ರವರಿ 27 ರವರೆಗೆ ಈ ಅಭಿಯಾನ ಮುಂದುವರೆಯಲಿದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನ ಸಹ ಅಧ್ಯಕ್ಷ ಗೋವಿಂದ್ ದೇವ್ ಗಿರಿಜಿ ಮಹಾರಾಜ್, ವಿಶ್ವ ಹಿಂದೂ ಪರಿಷತ್​ನ ಕಾರ್ಯನಿರತ ಅಧ್ಯಕ್ಷ ಅಲೋಕ್ ಕುಮಾರ್, ರಾಮ ಮಂದಿರ ನಿರ್ಮಾಣ ಸಮಿತಿಯ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಮತ್ತು ಆರ್​ಎಸ್​ಎಸ್​ ಮುಖ್ಯಸ್ಥ ಕುಲ್​ಭೂಷಣ್ ಅಹುಜಾ ಅವರ ನಿಯೋಗ ರಾಷ್ಟ್ರಪತಿ ರಾಮನಾಥ್ ಕೋವಿಂದ್​ರನ್ನು ಭೇಟಿಯಾಗಿದ್ದರು.

ರಾಷ್ಟ್ರಪತಿ ದೇಶದ ಮೊದಲ ಪ್ರಜೆಯಾಗಿದ್ದು, ಅವರಿಂದಲೇ ದೇಣಿಗೆ ಸಂಗ್ರಹ ಆರಂಭಿಸಲು ಇಚ್ಛಿಸಿ ಭೇಟಿಯಾದೆವು ಎಂದು ವಿಶ್ವ ಹಿಂದೂ ಪರಿಷತ್​ನ ಅಲೋಕ್ ಕುಮಾರ್ ತಿಳಿಸಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೀಡಿದ ಚೆಕ್​ನ್ನು ಪ್ರದರ್ಶಿಸುತ್ತಿರುವ ವಿಹಿಂಪ ಪ್ರಮುಖರು (ಚಿತ್ರ ಸೌಜನ್ಯ: ಟ್ವಿಟ್ಟರ್)

ರಾಮ ಮಂದಿರವಷ್ಟೇ ಅಲ್ಲ, ರಾಷ್ಟ್ರೀಯ ಮಂದಿರ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವ್ರಾಜ್ ಸಿಂಗ್ ಚೌವ್ಹಾಣ್ ಕೂಡ ರಾಮ ಮಂದಿರ ನಿರ್ಮಾಣಕ್ಕೆ 1 ಲಕ್ಷ ದೇಣಿಗೆ ನೀಡಿದ್ದಾರೆ. ‘ನನ್ನ ಕುಟುಂಬ ಸಹ ರಾಮ ಮಂದಿರ ನಿರ್ಮಾಣದಲ್ಲಿ ಪಾಲ್ಗೊಳ್ಳಲಿದೆ. ಇದು ಕೇವಲ ರಾಮ ಮಂದಿರವಷ್ಟೇ ಅಲ್ಲ, ರಾಷ್ಟ್ರೀಯ ದೇವಾಲಯ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಬಿಹಾರದ ಮಾಜಿ ಉಪ ಮುಖ್ಯಮಂತ್ರಿ, ರಾಜ್ಯಸಭಾ ಸಂಸದ ಸುಶಿಲ್ ಕುಮಾರ್ ಮೋದಿ ರಾಮ ಮಂದಿರ ನಿರ್ಮಾಣ ದೇಣಿಗೆ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ‘ಇತರ ಧರ್ಮೀಯರು ಸಹ ರಾಮ ಮಂದಿರ ನಿರ್ಮಾಣದಲ್ಲಿ ಪಾಲ್ಗೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ. ಮಸೀದಿ ನಿರ್ಮಾಣದಲ್ಲಿ ಮುಸ್ಲಿಮರು ಹೇಗೆ ಮುನ್ನೆಲೆಯಲ್ಲಿ ಪಾಲ್ಗೊಳ್ಳುವಂತೆಯೇ, ರಾಮ ಮಂದಿರ ನಿರ್ಮಾಣದಲ್ಲಿ ಹಿಂದೂಗಳು ಮುನ್ನೆಲೆಯಲ್ಲಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಕಡಲತೀರದಲ್ಲಿ ಜಾಗಿಂಗ್ ಮಾಡಿದ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ