AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Presidential Poll 2022: ಮೊದಲ ದಿನ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, 1 ತಿರಸ್ಕೃತ

ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆ(Presidential Poll)ಗೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಒಬ್ಬರು ತಿರಸ್ಕೃತಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Presidential Poll 2022: ಮೊದಲ ದಿನ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, 1 ತಿರಸ್ಕೃತ
Rashtrapati Bhavan
Follow us
TV9 Web
| Updated By: ನಯನಾ ರಾಜೀವ್

Updated on:Jun 16, 2022 | 1:13 PM

ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆ(Presidential Poll)ಗೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಒಬ್ಬರು ತಿರಸ್ಕೃತಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸರಿಯಾದ ದಾಖಲೆಗಳನ್ನು ಪ್ರಸ್ತುತಪಡಿಸದ ಕಾರಣ ಒಬ್ಬರ ನಾಮಪತ್ರವನ್ನು ತಿರಸ್ಕೃತಗೊಳಿಸಲಾಗಿದೆ. ರಾಷ್ಟ್ರಪತಿ ಚುನಾವಣೆಯು ಜುಲೈ 18 ರಂದು ನಡೆಯಲಿದ್ದು, ನಾಮಪತ್ರ(Nomination) ಸಲ್ಲಿಸಲು ಜೂನ್ 29ರವರೆಗೆ ಸಮಯಾವಕಾಶ ನೀಡಲಾಗಿದೆ.

ಬಿಹಾರದ ಸಾರನ್​ನಿಂದ ಲಾಲೂಪ್ರಸಾದ್ ಯಾದವ್ ನಾಮಪತ್ರ ಸಲ್ಲಿಸಿದ್ದಾರೆ. ದೆಹಲಿ, ಮಹಾರಾಷ್ಟ್ರ, ಬಿಹಾರ, ತಮಿಳುನಾಡು ಹಾಗೂ ಆಂಧ್ರಪ್ರದೇಶದಿಂದ ನಾಮಪತ್ರಗಳು ಸಲ್ಲಿಕೆಯಾಗಿವೆ.ಅಭ್ಯರ್ಥಿಗಳು 15,000 ರೂ.ಗಳನ್ನು ಠೇವಣಿಯನ್ನಾಗಿ ಇರಿಸಿದ್ದಾರೆ. ಚುನಾವಣೆಗೆ ಅಭ್ಯರ್ಥಿಯ ನಾಮನಿರ್ದೇಶನ ಪತ್ರವನ್ನು ನಿಗದಿತ ನಮೂನೆಯಲ್ಲಿ ಮಾಡಬೇಕು ಮತ್ತು ಕನಿಷ್ಠ 50 ಮತದಾರರು ಪ್ರತಿಪಾದಕರಾಗಿ ಮತ್ತು ಕನಿಷ್ಠ 50 ಮತದಾರರು ದ್ವಿತೀಯಕರಾಗಿ ಚಂದಾದಾರರಾಗಿರಬೇಕು.

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಜೂನ್ 15 ರಂದು ದೆಹಲಿಯಲ್ಲಿ ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆಗಾಗಿ ವಿರೋಧಪಕ್ಷಗಳ ಸಭೆ ಕರೆದಿದ್ದರು.

ಸಭೆಯಲ್ಲಿ ಹಲವು ಪಕ್ಷಗಳ ಮನವಿಯನ್ನು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ತಿರಸ್ಕರಿಸಿದ್ದಾರೆ. ಮಮತಾ ಬ್ಯಾನರ್ಜಿಯವರು ಶರದ್ ಪವಾರ್ ಅವರ ಹೆಸರನ್ನು ಪ್ರಸ್ತಾಪಿಸಿದರೂ ಪವಾರ್ ನಿರಾಕರಿಸಿದರು.

ಜೂನ್ 21 ರಂದು ಮತ್ತೆ ತಾತ್ಕಾಲಿಕ ಸಭೆ ನಡೆಯಲಿದ್ದು, ಮಮತಾ ಬ್ಯಾನರ್ಜಿ, ಶರದ್ ಪವಾರ್ ಮತ್ತು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯದಲ್ಲಿ ಒಮ್ಮತಕ್ಕೆ ಬರಲು ಇತರ ಪಕ್ಷಗಳೊಂದಿಗೆ ಸಮಾಲೋಚಿಸಲು ನೇತೃತ್ವವಹಿಸಲಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:13 pm, Thu, 16 June 22

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ