AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಜಾದಿ ಕಾ ಅಮೃತ್ ಮಹೋತ್ಸವ್ ಸಮಾರೋಪದೊಂದಿಗೆ ‘ಮೇರಿ ಮಾಟಿ ಮೇರಾ ದೇಶ್ ಅಭಿಯಾನ’ಕ್ಕೆ ಚಾಲನೆ; ದೇಶದ ಹುತಾತ್ಮರಿಗೆ ನಮನ

ಪ್ರಧಾನಿ ನರೇಂದ್ರ ಮೋದಿಯವರ ಪ್ರಕಾರ, ಮೇರಿ ಮಾಟಿ ಮೇರಾ ದೇಶ್ ಅಭಿಯಾನವು ನಮ್ಮ ದೇಶದ ಹುತಾತ್ಮರ ಬಗ್ಗೆ ಕೇಂದ್ರೀಕೃತವಾಗಿರುವ ವಿವಿಧ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ. ಈ ಕಾರ್ಯಕ್ರಮಗಳನ್ನು ದೇಶದಾದ್ಯಂತ ಆಯೋಜಿಸಲಾಗುವುದು.

ಆಜಾದಿ ಕಾ ಅಮೃತ್ ಮಹೋತ್ಸವ್ ಸಮಾರೋಪದೊಂದಿಗೆ 'ಮೇರಿ ಮಾಟಿ ಮೇರಾ ದೇಶ್ ಅಭಿಯಾನ'ಕ್ಕೆ ಚಾಲನೆ; ದೇಶದ ಹುತಾತ್ಮರಿಗೆ ನಮನ
ಮೇರಿ ಮಾಟಿ ಮೇರಾ ದೇಶ್ ಸುದ್ದಿಗೋಷ್ಠಿ
ರಶ್ಮಿ ಕಲ್ಲಕಟ್ಟ
|

Updated on:Aug 03, 2023 | 6:10 PM

Share

ದೆಹಲಿ ಆಗಸ್ಟ್ 03: ಸ್ವಾತಂತ್ರ್ಯ ದಿನಕ್ಕೆ (Independence Day) ಇನ್ನು ಉಳಿದಿರುವುದು 12 ದಿನಗಳು. 75 ವರ್ಷಗಳ ಸ್ವಾತಂತ್ರ್ಯ ಮತ್ತು ಅದರ ಜನರ ಭವ್ಯ ಇತಿಹಾಸವನ್ನು ಆಚರಿಸಲು ಮತ್ತು ಸ್ಮರಿಸಲು ಭಾರತ ಸರ್ಕಾರವು ಪ್ರಾರಂಭಿಸಿದ ಅಮೃತ ಮಹೋತ್ಸವದ ಜತೆಗೇ 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಮೇರಿ ಮಾಟಿ ಮೇರಾ ದೇಶ್ (Meri Maati Mera Desh) ಎಂಬ ಅಭಿಯಾನವನ್ನು ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಪ್ರಕಾರ, ಅಭಿಯಾನವು ನಮ್ಮ ದೇಶದ ಹುತಾತ್ಮರ ಬಗ್ಗೆ ಕೇಂದ್ರೀಕೃತವಾಗಿರುವ ವಿವಿಧ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ. ಈ ಕಾರ್ಯಕ್ರಮಗಳನ್ನು ದೇಶದಾದ್ಯಂತ ಆಯೋಜಿಸಲಾಗುವುದು.

ಇತ್ತೀಚಿನ ಮನ್ ಕಿ ಬಾತ್‌ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈಗ ನಡೆಯುತ್ತಿರುವ ಅಮೃತ್ ಮಹೋತ್ಸವದ ಆಚರಣೆಗಳೊಂದಿಗೆ ಹುತಾತ್ಮರಾದ ವೀರ ಪುರುಷ ಮತ್ತು ಮಹಿಳೆಯರನ್ನು ಗೌರವಿಸುವ ದ ‘ಮೇರಿ ಮಾಟಿ ಮೇರಾ ದೇಶ್’ ಅಭಿಯಾನವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಈ ಅಭಿಯಾನದ ಭಾಗವಾಗಿ, ನಮ್ಮ ಅಮರ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರದಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅವರ ಸ್ಮರಣೆಯನ್ನು ಅಜರಾಮರಗೊಳಿಸಲು, ದೇಶದಾದ್ಯಂತ ಲಕ್ಷಾಂತರ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಶಾಸನಗಳನ್ನು ಸ್ಥಾಪಿಸಲಾಗುವುದು.

ಈ ಅಭಿಯಾನವು ದೇಶಾದ್ಯಂತ ‘ಅಮೃತ ಕಲಶ ಯಾತ್ರೆ’ಗೆ ಸಾಕ್ಷಿಯಾಗಲಿದೆ, ಇದು ಭಾರತದ ಮೂಲೆ ಮೂಲೆಯಿಂದ ದೆಹಲಿಗೆ 7500 ಕಲಶಗಳಲ್ಲಿ ಮಣ್ಣನ್ನು ಸಾಗಿಸುತ್ತದೆ. ಈ ಪ್ರಯಾಣದಲ್ಲಿ ಮಣ್ಣಿನ ಜೊತೆಗೆ ದೇಶದ ವಿವಿಧ ಪ್ರದೇಶಗಳ ಸಸಿಗಳನ್ನೂ ಒಯ್ಯಲಾಗುವುದು. ಈ ಎರಡೂ ಅಂಶಗಳನ್ನು ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ‘ಅಮೃತ ವಾಟಿಕಾ’ ರಚಿಸಲು ಬಳಸಲಾಗುತ್ತದೆ, ಇದು ‘ಏಕ್ ಭಾರತ್ ಶ್ರೇಷ್ಠ ಭಾರತ’ದ ಭವ್ಯ ಸಂಕೇತವಾಗಿ ಕಾರ್ಯನಿರ್ವಹಿಸುತ್ತದೆ.

ಮೇರಿ ಮಾಟಿ ಮೇರಾ ದೇಶ್ ಮತ್ತು ಹರ್ ಘರ್ ತಿರಂಗ ಅಭಿಯಾನದ ಕುರಿತು ನಡೆಯುವ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಮತ್ತು ಪ್ರಸಾರ ಕಾರ್ಯದರ್ಶಿ ಅಪೂರ್ವ ಚಂದ್ರ, ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಗೋವಿಂದ್ ಮೋಹನ್, ಯುವ ವ್ಯವಹಾರ ಮತ್ತು ಕ್ರೀಡೆ ಕಾರ್ಯದರ್ಶಿ, ಶ್ರೀಮತಿ ಮೀತಾ ರಾಜೀವ್ ಲೋಚನ್, ಪ್ರಸಾರ ಭಾರತಿ ಸಿಇಒ ಗೌರವ್ ದ್ವಿವೇದಿ ಕೂಡ ಉಪಸ್ಥಿತರಿದ್ದರು.

ಸುದ್ದಿಗೋಷ್ಠಿಯ ಮುಖ್ಯಾಂಶಗಳು

ಸುದ್ದಿಗೋಷ್ಠಿಯಲ್ಲ್ ಮಾತನಾಡಿದ ಗೋವಿಂದ್ ಮೋಹನ್, 75ನೇ ಸ್ವಾತಂತ್ರ್ಯೋತ್ಸವದ ಅದ್ಭುತ ಕಾರ್ಯಕ್ರಮವಾಗಿತ್ತು ಆಜಾದಿ ಕಾ ಅಮೃತ್ ಮಹೋತ್ಸವ್. ಭಾರತದಾದ್ಯಂತ ಅಷ್ಟೇ ಅಲ್ಲ ವಿಶ್ವದಾದ್ಯಂತ ಇದನ್ನು ಆಚರಿಸಲಾಗಿತ್ತು.  ಇದರ ಸಮಾರೋಪ ಕಾರ್ಯಕ್ರಮವಾಗಿ ಮೇರಿ ಮಾಟಿ ಮೇರಾ ದೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಭಾರತದ ಜನರು ದೇಶದ ಮಣ್ಣಿನ ಜತೆ ಗಾಢ ಸಂಬಂಧವನ್ನು ಹೊಂದಿದ್ದಾರೆ.ಈ ಕಾರ್ಯಕ್ರಮದ ಟ್ಯಾಗ್​​ಲೈನ್  ‘ಹೇ ಮಿಟ್ಟಿ ಕಾ ನಮನ್, ವೀರೋಂಕೋ ವಂದನ್’.  ದೇಶದ ಮಣ್ಣು ವೀರರ ಭೂಮಿ. ಇದು ನಮ್ಮನ್ನು ಒಗ್ಗಟ್ಟಾಗಿ ನಿಲ್ಲುವಂತೆ ಮಾಡಿದೆ. ನಮ್ಮ ದೇಶಕ್ಕಾಗಿ ಪ್ರಾಣ ತೆತ್ತ ವೀರರಿಗೆ ನಮನ ಮಾಡುವ ಕಾರ್ಯಕ್ರಮವಾಗಿದೆ ಇದು. ಇದು ಎರಡು ಹಂತದಲ್ಲಿ ನಡೆಯುತ್ತದೆ. ಇದು ಗ್ರಾಮ ಮತ್ತು ನಗರದಲ್ಲಿ ನಡೆಯಲಿದ್ದು, ಅಮೃತ್ ಕಲಶ್ ಯಾತ್ರ ಮೂಲಕ ದೇಶದ ಮೂಲೆ ಮೂಲೆಯಿಂದ ಮಣ್ಣುಗಳನ್ನು ದೆಹಲಿಗೆ ತರಲಾಗುವುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Thu, 3 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ