AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ ಸರ್ಕಾರದ ವಿರುದ್ಧ ಆಕ್ರೋಶ; ಕೇದಾರನಾಥ ದೇಗುಲದ ಹೊರಗೆ ತಲೆಕೆಳಗಾಗಿ ನಿಂತು ಪ್ರತಿಭಟನೆ ನಡೆಸುತ್ತಿರುವ ಪುರೋಹಿತ

Char Dham: ನಾನು ಹೀಗೆ ಶೀರ್ಷಾಸನದಲ್ಲಿ ನಿಂತು ಏಳುದಿನಗಳ ಕಾಲ ಪ್ರತಿಭಟನೆ ನಡೆಸುತ್ತೇನೆ. ಅಷ್ಟಾದರೂ ಸರ್ಕಾರ ಈ ಬೋರ್ಡ್​​ನ್ನು ವಿಸರ್ಜಿಸದೆ ಇದ್ದರೆ ತೀವ್ರಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳುತ್ತೇನೆ ಎಂದು ಆಚಾರ್ಯ ಸಂತೋಷ ತ್ರಿವೇದಿ ಹೇಳಿದ್ದಾರೆ.

ಉತ್ತರಾಖಂಡ ಸರ್ಕಾರದ ವಿರುದ್ಧ ಆಕ್ರೋಶ; ಕೇದಾರನಾಥ ದೇಗುಲದ ಹೊರಗೆ ತಲೆಕೆಳಗಾಗಿ ನಿಂತು ಪ್ರತಿಭಟನೆ ನಡೆಸುತ್ತಿರುವ ಪುರೋಹಿತ
ದೇಗುಲದ ಎದುರು ಶೀರ್ಷಾಸನದಲ್ಲಿ ನಿಂತು ಪ್ರತಿಭಟನೆ ನಡೆಸುತ್ತಿರುವ ಅರ್ಚಕ
TV9 Web
| Edited By: |

Updated on:Jun 16, 2021 | 2:50 PM

Share

ಡೆಹ್ರಾಡೂನ್​: ಕೇದಾರನಾಥ ದೇವಸ್ಥಾನದ ಎದುರು ಅರ್ಚಕ ಆಚಾರ್ಯ ಸಂತೋಷ ತ್ರಿವೇದಿ ತಲೆಕೆಳಗಾಗಿ ನಿಂತು (ಶೀರ್ಷಾಸನ) ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಉತ್ತರಾಖಂಡ ಸರ್ಕಾರ ಚಾರ್ ಧಾಮ್​ ದೇವಸ್ಥಾನಮ್​ ನಿರ್ವಹಣಾ ಮಂಡಳಿಯನ್ನು ರಚಿಸಿದೆ. ಈ ಬೋರ್ಡ್​​ನ್ನು ಕೂಡಲೇ ರದ್ದುಗೊಳಿಸಬೇಕು. ಇಲ್ಲದಿದ್ದರೆ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತೇನೆ ಎಂದೂ ಎಚ್ಚರಿಕೆ ನೀಡಿದ್ದಾರೆ.

ನಾನು ಹೀಗೆ ಶೀರ್ಷಾಸನದಲ್ಲಿ ನಿಂತು ಏಳುದಿನಗಳ ಕಾಲ ಪ್ರತಿಭಟನೆ ನಡೆಸುತ್ತೇನೆ. ಅಷ್ಟಾದರೂ ಸರ್ಕಾರ ಈ ಬೋರ್ಡ್​​ನ್ನು ವಿಸರ್ಜಿಸದೆ ಇದ್ದರೆ ತೀವ್ರಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳುತ್ತೇನೆ ಎಂದು ಆಚಾರ್ಯ ಸಂತೋಷ ತ್ರಿವೇದಿ ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.

ಚಾರ್​ಧಾಮ್​ ನಿರ್ವಹಣಾ ಮಂಡಳಿ ರಚನೆ ಆದಾಗಿನಿಂದಲೂ ಕೇವಲ ಇವರೊಬ್ಬರಲೇ ಅಲ್ಲದೆ, ಉಳಿದ ಕೆಲವು ಪುರೋಹಿತರೂ ಸೇರಿ ಕೇದಾರನಾಥ ದೇಗುಲದ ಹೊರಗೆ ಮೌನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಡಳಿ ರಚನೆ ಮಾಡುವ ಮೂಲಕ ನಮ್ಮ ಹಕ್ಕುಗಳನ್ನು ನಿರ್ಲಕ್ಷಿಸಲಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಬೋರ್ಡ್​​ನ್ನು ವಿಸರ್ಜಿಸುವವರೆಗೂ ನಮ್ಮ ಹೋರಾಟ ಕೈಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ.

ಭರವಸೆ ಈಡೇರಿಸದ ಸಿಎಂ ! ಇನ್ನು ಪುರೋಹಿತವರ್ಗದ ಪ್ರತಿಭಟನೆ ಉತ್ತರಾಖಂಡ ಮುಖ್ಯಮಂತ್ರಿ ತೀರಥ್​ ಸಿಂಗ್​ ರಾವತ್​ ಗಮನಕ್ಕೂ ಬಂದಿದೆ. ಮಂಡಳಿ ರಚನೆ ಬಗ್ಗೆ ಮರುಪರಿಶೀಲನೆ ಮಾಡುವುದಾಗಿ ಹೇಳಿದ್ದ ತೀರಥ್​ ಸಿಂಗ್​ ರಾವತ್​ ಅದನ್ನು ಈಡೇರಿಸಲಿಲ್ಲ. ಅದರ ಬದಲು ನಿರ್ವಹಣಾ ಮಂಡಳಿಯನ್ನು ಇನ್ನಷ್ಟು ವಿಸ್ತರಿಸಲಾಗಿದೆ. ಇದು ನಮಗೆ ಇನ್ನಷ್ಟು ಅಸಮಾಧಾನ ಉಂಟು ಮಾಡಿದೆ ಎಂದು ಅರ್ಚಕರು ಹೇಳಿಕೊಂಡಿದ್ದಾರೆ.

ನಮ್ಮ ಸಮುದಾಯ ಈಗ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿದೆ. ಈ ಬಗ್ಗೆ ಸರ್ಕಾರ ಶೀಘ್ರವೇ ನಿರ್ಧಾರ ಕೈಗೊಳ್ಳದೆ ಇದ್ದರೆ ಇನ್ನಷ್ಟು ತೀವ್ರ ಚಳವಳಿ ನಡೆಸುತ್ತೇವೆ ಎಂದು ಕೇದಾರನಾಥ ತೀರ್ಥ ಪುರೋಹಿತ ಸಮಾಜದ ಸದಸ್ಯರಾದ ಅಂಕಿತ್​ ಸೆಮ್​ವಾಲ್​ ತಿಳಿಸಿದ್ದಾರೆ. ಹಾಗೇ ಯಮುನೋತ್ರಿ, ಗಂಗೋತ್ರಿ, ಬದರೀನಾಥ್​, ಕೇದಾರನಾಥ್​​ಗಳು ಸೇರಿ ಚಾರ್​ಧಾಮ್ ಎನ್ನಿಸಿಕೊಂಡಿದ್ದು, ಇಲ್ಲಿನ​ ಯಾತ್ರೆಗೆ ಜೂ.15ರಿಂದ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಭಾರತದ ಕಂಪೆನಿಗಳ ಆದಾಯದಲ್ಲಿ ಶೇ 78ರಷ್ಟು ದೇಶೀ ಮಾರುಕಟ್ಟೆಯಿಂದಲೇ; ಯಾವ ದೇಶದಲ್ಲಿ ಇದು ಹೆಚ್ಚು, ಎಲ್ಲಿ ಕಮ್ಮಿ?

Priest protests in Shirshasana outside the Kedarnath Shrine against state government of Uttarkhand

Published On - 2:48 pm, Wed, 16 June 21

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ