AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Smuggling Case: ಕೇರಳ ಚಿನ್ನ ಸಾಗಣೆ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ ಜೈಲಿನಿಂದ ಬಿಡುಗಡೆ

ನವೆಂಬರ್​ 2ರಂದು ಸ್ವಪ್ನ ಸುರೇಶ್​ಗೆ ಮಾತ್ರವಲ್ಲ, ಅವರೊಂದಿಗೆ ಉಳಿದ ಏಳುಮಂದಿಗೆ ಕೂಡ ಜಾಮೀನು ಸಿಕ್ಕಿದೆ.  ಆದರೆ ಎನ್​ಐಎ ಪ್ರಕರಣ ಬಾಕಿ ಇದ್ದುದರಿಂದ ಸ್ವಪ್ನಾ ಜೈಲಿನಲ್ಲಿಯೇ ಉಳಿಯುವಂತಾಗಿತ್ತು.

Gold Smuggling Case: ಕೇರಳ ಚಿನ್ನ ಸಾಗಣೆ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ ಜೈಲಿನಿಂದ ಬಿಡುಗಡೆ
ಸ್ವಪ್ನಾ ಸುರೇಶ್​
TV9 Web
| Updated By: Lakshmi Hegde|

Updated on: Nov 06, 2021 | 12:42 PM

Share

ದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಕೇರಳ ಏರ್​ಪೋರ್ಟ್​ ಚಿನ್ನಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ.  ಸುಮಾರು 16 ತಿಂಗಳ ನಂತರ ಸ್ವಪ್ನಾ ಸುರೇಶ್​ ಜೈಲಿನಿಂದ ಹೊರಬರುತ್ತಿದ್ದಾರೆ. ಸ್ವಪ್ನಾ ಸುರೇಶ್​​ರಿಗೆ ನವೆಂಬರ್​ 2ರಂದು ಕೇರಳ ಹೈಕೋರ್ಟ್​ ಜಾಮೀನು ನೀಡಿತ್ತು. 25 ಲಕ್ಷ ರೂ.ಬಾಂಡ್​​ ಮತ್ತು 2 ಶ್ಯೂರಿಟಿಗಳೊಂದಿಗೆ ಜಾಮೀನು ನೀಡಲಾಗಿತ್ತು. 

ಇನ್ನು ನವೆಂಬರ್​ 2ರಂದು ಸ್ವಪ್ನ ಸುರೇಶ್​ಗೆ ಮಾತ್ರವಲ್ಲ, ಅವರೊಂದಿಗೆ ಉಳಿದ ಏಳುಮಂದಿಗೆ ಕೂಡ ಜಾಮೀನು ಸಿಕ್ಕಿದೆ.  ಆದರೆ ಎನ್​ಐಎ ಪ್ರಕರಣ ಬಾಕಿ ಇದ್ದುದರಿಂದ ಸ್ವಪ್ನಾ ಜೈಲಿನಲ್ಲಿಯೇ ಉಳಿಯುವಂತಾಗಿತ್ತು. ನ್ಯಾಯಮೂರ್ತಿಗಳಾದ ಕೆ.ವಿನೋದ್ ಚಂದ್ರನ್ ಮತ್ತು ಸಿ.ಜಯಚಂದ್ರನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಪ್ರಕರಣದ ವಿಚಾರಣೆ ನಡೆಸಿತ್ತು.

ಈ ಹಿಂದೆ ಯುಎಇ ಕಾನ್ಸುಲೇಟ್‌ನಲ್ಲಿ ಕೆಲಸ ಮಾಡಿದ್ದ ಸ್ವಪ್ನಾ ಸುರೇಶ್ ಮತ್ತು ಆಕೆಯ ಸಹಚರ ಸಂದೀಪ್ ನಾಯರ್ ಬಂಧನಕ್ಕೀಡಾಗಿದ್ದರು. ರಾಜತಾಂತ್ರಿಕ ಮಾರ್ಗಗಳ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಕ್ಕಾಗಿ ಮತ್ತು ವಿದೇಶಗಳಿಂದ ಹೆಚ್ಚಿನ ಪ್ರಮಾಣದ ಚಿನ್ನವನ್ನು ಅಕ್ರಮವಾಗಿ ಸಾಗಿಸುವುದಕ್ಕಾಗಿ ಈ ಬಂಧನ ನಡೆದಿತ್ತು. ತಿರುವನಂತಪುರಂನಲ್ಲಿರುವ ಯುಎಇ ಕಾನ್ಸುಲೇಟ್‌ಗೆ ರವಾನಿಸಲಾದ ರಾಜತಾಂತ್ರಿಕ ಸರಕುಗಳ ಮೂಲಕ 30 ಕಿಲೋಗ್ರಾಂಗಳಷ್ಟು ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪ ಅವರ ಮೇಲಿತ್ತು. ಇಂದು ಸ್ವಪ್ನಾ ಸುರೇಶ್​​ರನ್ನು ಜೈಲಿನಿಂದ ಕರೆತರಲು ಅವರ ತಾಯಿಯೇ ಅಲ್ಲಿಗೆ ಹೋಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಯುಎಸ್​ನಲ್ಲಿ 2-18 ವರ್ಷದವರಿಗೆ ಕೊವ್ಯಾಕ್ಸಿನ್​ ಲಸಿಕೆ ತುರ್ತು ಬಳಕೆಗೆ ಅನುಮತಿ ಕೋರಿದ ಒಕುಜೆನ್​ ಕಂಪನಿ

AQI: ದೆಹಲಿಯಲ್ಲಿ 5 ವರ್ಷದಲ್ಲೇ ಅತಿಹೆಚ್ಚು ವಾಯುಮಾಲಿನ್ಯ; ಬೆಂಗಳೂರಿನ ವಾಯುಗುಣಮಟ್ಟ ಹೇಗಿದೆ? ಇಲ್ಲಿದೆ ವಿವರ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು