AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Smuggling Case: ಕೇರಳ ಚಿನ್ನ ಸಾಗಣೆ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ ಜೈಲಿನಿಂದ ಬಿಡುಗಡೆ

ನವೆಂಬರ್​ 2ರಂದು ಸ್ವಪ್ನ ಸುರೇಶ್​ಗೆ ಮಾತ್ರವಲ್ಲ, ಅವರೊಂದಿಗೆ ಉಳಿದ ಏಳುಮಂದಿಗೆ ಕೂಡ ಜಾಮೀನು ಸಿಕ್ಕಿದೆ.  ಆದರೆ ಎನ್​ಐಎ ಪ್ರಕರಣ ಬಾಕಿ ಇದ್ದುದರಿಂದ ಸ್ವಪ್ನಾ ಜೈಲಿನಲ್ಲಿಯೇ ಉಳಿಯುವಂತಾಗಿತ್ತು.

Gold Smuggling Case: ಕೇರಳ ಚಿನ್ನ ಸಾಗಣೆ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ ಜೈಲಿನಿಂದ ಬಿಡುಗಡೆ
ಸ್ವಪ್ನಾ ಸುರೇಶ್​
TV9 Web
| Edited By: |

Updated on: Nov 06, 2021 | 12:42 PM

Share

ದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಕೇರಳ ಏರ್​ಪೋರ್ಟ್​ ಚಿನ್ನಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ.  ಸುಮಾರು 16 ತಿಂಗಳ ನಂತರ ಸ್ವಪ್ನಾ ಸುರೇಶ್​ ಜೈಲಿನಿಂದ ಹೊರಬರುತ್ತಿದ್ದಾರೆ. ಸ್ವಪ್ನಾ ಸುರೇಶ್​​ರಿಗೆ ನವೆಂಬರ್​ 2ರಂದು ಕೇರಳ ಹೈಕೋರ್ಟ್​ ಜಾಮೀನು ನೀಡಿತ್ತು. 25 ಲಕ್ಷ ರೂ.ಬಾಂಡ್​​ ಮತ್ತು 2 ಶ್ಯೂರಿಟಿಗಳೊಂದಿಗೆ ಜಾಮೀನು ನೀಡಲಾಗಿತ್ತು. 

ಇನ್ನು ನವೆಂಬರ್​ 2ರಂದು ಸ್ವಪ್ನ ಸುರೇಶ್​ಗೆ ಮಾತ್ರವಲ್ಲ, ಅವರೊಂದಿಗೆ ಉಳಿದ ಏಳುಮಂದಿಗೆ ಕೂಡ ಜಾಮೀನು ಸಿಕ್ಕಿದೆ.  ಆದರೆ ಎನ್​ಐಎ ಪ್ರಕರಣ ಬಾಕಿ ಇದ್ದುದರಿಂದ ಸ್ವಪ್ನಾ ಜೈಲಿನಲ್ಲಿಯೇ ಉಳಿಯುವಂತಾಗಿತ್ತು. ನ್ಯಾಯಮೂರ್ತಿಗಳಾದ ಕೆ.ವಿನೋದ್ ಚಂದ್ರನ್ ಮತ್ತು ಸಿ.ಜಯಚಂದ್ರನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಪ್ರಕರಣದ ವಿಚಾರಣೆ ನಡೆಸಿತ್ತು.

ಈ ಹಿಂದೆ ಯುಎಇ ಕಾನ್ಸುಲೇಟ್‌ನಲ್ಲಿ ಕೆಲಸ ಮಾಡಿದ್ದ ಸ್ವಪ್ನಾ ಸುರೇಶ್ ಮತ್ತು ಆಕೆಯ ಸಹಚರ ಸಂದೀಪ್ ನಾಯರ್ ಬಂಧನಕ್ಕೀಡಾಗಿದ್ದರು. ರಾಜತಾಂತ್ರಿಕ ಮಾರ್ಗಗಳ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಕ್ಕಾಗಿ ಮತ್ತು ವಿದೇಶಗಳಿಂದ ಹೆಚ್ಚಿನ ಪ್ರಮಾಣದ ಚಿನ್ನವನ್ನು ಅಕ್ರಮವಾಗಿ ಸಾಗಿಸುವುದಕ್ಕಾಗಿ ಈ ಬಂಧನ ನಡೆದಿತ್ತು. ತಿರುವನಂತಪುರಂನಲ್ಲಿರುವ ಯುಎಇ ಕಾನ್ಸುಲೇಟ್‌ಗೆ ರವಾನಿಸಲಾದ ರಾಜತಾಂತ್ರಿಕ ಸರಕುಗಳ ಮೂಲಕ 30 ಕಿಲೋಗ್ರಾಂಗಳಷ್ಟು ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪ ಅವರ ಮೇಲಿತ್ತು. ಇಂದು ಸ್ವಪ್ನಾ ಸುರೇಶ್​​ರನ್ನು ಜೈಲಿನಿಂದ ಕರೆತರಲು ಅವರ ತಾಯಿಯೇ ಅಲ್ಲಿಗೆ ಹೋಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಯುಎಸ್​ನಲ್ಲಿ 2-18 ವರ್ಷದವರಿಗೆ ಕೊವ್ಯಾಕ್ಸಿನ್​ ಲಸಿಕೆ ತುರ್ತು ಬಳಕೆಗೆ ಅನುಮತಿ ಕೋರಿದ ಒಕುಜೆನ್​ ಕಂಪನಿ

AQI: ದೆಹಲಿಯಲ್ಲಿ 5 ವರ್ಷದಲ್ಲೇ ಅತಿಹೆಚ್ಚು ವಾಯುಮಾಲಿನ್ಯ; ಬೆಂಗಳೂರಿನ ವಾಯುಗುಣಮಟ್ಟ ಹೇಗಿದೆ? ಇಲ್ಲಿದೆ ವಿವರ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?