AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Smuggling Case: ಕೇರಳ ಚಿನ್ನ ಸಾಗಣೆ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ ಜೈಲಿನಿಂದ ಬಿಡುಗಡೆ

ನವೆಂಬರ್​ 2ರಂದು ಸ್ವಪ್ನ ಸುರೇಶ್​ಗೆ ಮಾತ್ರವಲ್ಲ, ಅವರೊಂದಿಗೆ ಉಳಿದ ಏಳುಮಂದಿಗೆ ಕೂಡ ಜಾಮೀನು ಸಿಕ್ಕಿದೆ.  ಆದರೆ ಎನ್​ಐಎ ಪ್ರಕರಣ ಬಾಕಿ ಇದ್ದುದರಿಂದ ಸ್ವಪ್ನಾ ಜೈಲಿನಲ್ಲಿಯೇ ಉಳಿಯುವಂತಾಗಿತ್ತು.

Gold Smuggling Case: ಕೇರಳ ಚಿನ್ನ ಸಾಗಣೆ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ ಜೈಲಿನಿಂದ ಬಿಡುಗಡೆ
ಸ್ವಪ್ನಾ ಸುರೇಶ್​
TV9 Web
| Edited By: |

Updated on: Nov 06, 2021 | 12:42 PM

Share

ದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಕೇರಳ ಏರ್​ಪೋರ್ಟ್​ ಚಿನ್ನಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ.  ಸುಮಾರು 16 ತಿಂಗಳ ನಂತರ ಸ್ವಪ್ನಾ ಸುರೇಶ್​ ಜೈಲಿನಿಂದ ಹೊರಬರುತ್ತಿದ್ದಾರೆ. ಸ್ವಪ್ನಾ ಸುರೇಶ್​​ರಿಗೆ ನವೆಂಬರ್​ 2ರಂದು ಕೇರಳ ಹೈಕೋರ್ಟ್​ ಜಾಮೀನು ನೀಡಿತ್ತು. 25 ಲಕ್ಷ ರೂ.ಬಾಂಡ್​​ ಮತ್ತು 2 ಶ್ಯೂರಿಟಿಗಳೊಂದಿಗೆ ಜಾಮೀನು ನೀಡಲಾಗಿತ್ತು. 

ಇನ್ನು ನವೆಂಬರ್​ 2ರಂದು ಸ್ವಪ್ನ ಸುರೇಶ್​ಗೆ ಮಾತ್ರವಲ್ಲ, ಅವರೊಂದಿಗೆ ಉಳಿದ ಏಳುಮಂದಿಗೆ ಕೂಡ ಜಾಮೀನು ಸಿಕ್ಕಿದೆ.  ಆದರೆ ಎನ್​ಐಎ ಪ್ರಕರಣ ಬಾಕಿ ಇದ್ದುದರಿಂದ ಸ್ವಪ್ನಾ ಜೈಲಿನಲ್ಲಿಯೇ ಉಳಿಯುವಂತಾಗಿತ್ತು. ನ್ಯಾಯಮೂರ್ತಿಗಳಾದ ಕೆ.ವಿನೋದ್ ಚಂದ್ರನ್ ಮತ್ತು ಸಿ.ಜಯಚಂದ್ರನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಪ್ರಕರಣದ ವಿಚಾರಣೆ ನಡೆಸಿತ್ತು.

ಈ ಹಿಂದೆ ಯುಎಇ ಕಾನ್ಸುಲೇಟ್‌ನಲ್ಲಿ ಕೆಲಸ ಮಾಡಿದ್ದ ಸ್ವಪ್ನಾ ಸುರೇಶ್ ಮತ್ತು ಆಕೆಯ ಸಹಚರ ಸಂದೀಪ್ ನಾಯರ್ ಬಂಧನಕ್ಕೀಡಾಗಿದ್ದರು. ರಾಜತಾಂತ್ರಿಕ ಮಾರ್ಗಗಳ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಕ್ಕಾಗಿ ಮತ್ತು ವಿದೇಶಗಳಿಂದ ಹೆಚ್ಚಿನ ಪ್ರಮಾಣದ ಚಿನ್ನವನ್ನು ಅಕ್ರಮವಾಗಿ ಸಾಗಿಸುವುದಕ್ಕಾಗಿ ಈ ಬಂಧನ ನಡೆದಿತ್ತು. ತಿರುವನಂತಪುರಂನಲ್ಲಿರುವ ಯುಎಇ ಕಾನ್ಸುಲೇಟ್‌ಗೆ ರವಾನಿಸಲಾದ ರಾಜತಾಂತ್ರಿಕ ಸರಕುಗಳ ಮೂಲಕ 30 ಕಿಲೋಗ್ರಾಂಗಳಷ್ಟು ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪ ಅವರ ಮೇಲಿತ್ತು. ಇಂದು ಸ್ವಪ್ನಾ ಸುರೇಶ್​​ರನ್ನು ಜೈಲಿನಿಂದ ಕರೆತರಲು ಅವರ ತಾಯಿಯೇ ಅಲ್ಲಿಗೆ ಹೋಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಯುಎಸ್​ನಲ್ಲಿ 2-18 ವರ್ಷದವರಿಗೆ ಕೊವ್ಯಾಕ್ಸಿನ್​ ಲಸಿಕೆ ತುರ್ತು ಬಳಕೆಗೆ ಅನುಮತಿ ಕೋರಿದ ಒಕುಜೆನ್​ ಕಂಪನಿ

AQI: ದೆಹಲಿಯಲ್ಲಿ 5 ವರ್ಷದಲ್ಲೇ ಅತಿಹೆಚ್ಚು ವಾಯುಮಾಲಿನ್ಯ; ಬೆಂಗಳೂರಿನ ವಾಯುಗುಣಮಟ್ಟ ಹೇಗಿದೆ? ಇಲ್ಲಿದೆ ವಿವರ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು