AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ಅಧ್ಯಕ್ಷ ರಾಜಪಕ್ಷ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ

ಕೋವಿಡ್-19ರ ಸವಾಲು ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಎರಡೂ ದೇಶಗಳ ಹಿರಿಯ ಅಧಿಕಾರಿಗಳ ನಡುವೆ ನಿಯಮಿತ ಸಂಪರ್ಕ ಸಾಧ್ಯವಾಗುವಂತೆ ಮಾಡುವ ವ್ಯವಸ್ಥೆ ರೂಪಿಸಲು ಈ ವೇಳೆ ಇಬ್ಬರೂ ನಾಯಕರು ಸಮ್ಮತಿಸಿದರು ಎಂದು ಪ್ರಧಾನಿ ಕಾರ್ಯಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಶ್ರೀಲಂಕಾ ಅಧ್ಯಕ್ಷ ರಾಜಪಕ್ಷ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ
ಶ್ರೀಲಂಕಾ ಅಧ್ಯಕ್ಷ ಗೋಟಬಾಯ ರಾಜಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 14, 2021 | 2:56 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಗೊಟಬಾಯ ರಾಜಪಕ್ಷ ಶನಿವಾರ ದೂರವಾಣಿ ಮಾತುಕತೆ ಮೂಲಕ ಎರಡೂ ದೇಶಗಳ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದ್ದಾರೆ. ಕೋವಿಡ್-19ರ ಸವಾಲು ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಎರಡೂ ದೇಶಗಳ ಹಿರಿಯ ಅಧಿಕಾರಿಗಳ ನಡುವೆ ನಿಯಮಿತ ಸಂಪರ್ಕ ಸಾಧ್ಯವಾಗುವಂತೆ ಮಾಡುವ ವ್ಯವಸ್ಥೆ ರೂಪಿಸಲು ಈ ವೇಳೆ ಇಬ್ಬರೂ ನಾಯಕರು ಸಮ್ಮತಿಸಿದರು ಎಂದು ಪ್ರಧಾನಿ ಕಾರ್ಯಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಎರಡೂ ದೇಶಗಳ ನಡುವಣ ಸಂಬಂಧಗಳಲ್ಲಿ ಈಚೆಗೆ ನಡೆದ ಪ್ರಮುಖ ಬೆಳವಣಿಗೆಳು ಮತ್ತು ಹಾಲಿ ಚಾಲ್ತಿಯಲ್ಲಿರುವ ವಿವಿಧ ಯೋಜನೆಗಳ ಬಗ್ಗೆಯೂ ಎರಡೂ ದೇಶಗಳ ಮುಖ್ಯಸ್ಥರು ಮಾತನಾಡಿದರು ಎಂದು ಹೇಳಿಕೆ ತಿಳಿಸಿದೆ. ‘ಶ್ರೀಲಂಕಾದ ಅಧ್ಯಕ್ಷ ಗೊಟಬಾಯ ಅವರೊಂದಿಗೆ ದೂರವಾಣಿ ಸಂಭಾಷಣೆ ಮೂಲಕ ಕೋವಿಡ್-19ರ ಹಿನ್ನೆಲೆಯಲ್ಲಿ ದ್ವಿಪಕ್ಷೀಯ ಹಾಗೂ ಬಹುಪಕ್ಷೀಯ ಸಹಕಾರ ಬಗ್ಗೆ ಚರ್ಚಿಸಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

‘ನೆರೆಹೊರೆಯವರಿಗೆ ಮೊದಲ ಆದ್ಯತೆ’ ಎಂಬ ಭಾರತದ ನೀತಿಗೆ ಶ್ರೀಲಂಕಾ ಎಷ್ಟು ಮುಖ್ಯ ಎಂಬ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಈ ಸಂದರ್ಭ ಶ್ರೀಲಂಕಾ ಅಧ್ಯಕ್ಷರಿಗೆ ವಿವರಿಸಿದರು ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.

ಚೀನಾ ಮತ್ತು ಭಾರತದ ಸಂಬಂಧಗಳು ಬದಲಾದ ಹಿನ್ನೆಲೆಯಲ್ಲಿ ಹಿಂದೂ ಮಹಾಸಾಗರದಲ್ಲಿ ಪಾರಮ್ಯ ಉಳಿಸಿಕೊಳ್ಳಲು ಎರಡೂ ದೇಶಗಳು ಶ್ರೀಲಂಕಾವನ್ನು ಓಲೈಸುತ್ತಿವೆ. ಶ್ರೀಲಂಕಾಕ್ಕೆ ಚೀನಾ ದೊಡ್ಡಮೊತ್ತದ ಸಾಲ ನೀಡಿ ಒಂದು ಬಂದರನ್ನು ಗುತ್ತಿಗೆಗೆ ಪಡೆದುಕೊಂಡಿದೆ. ಭಾರತವೂ ಶ್ರೀಲಂಕಾದಲ್ಲಿ ಬಂದರು ಅಭಿವೃದ್ಧಿಪಡಿಸುತ್ತಿದೆ.

ಚೀನಾದ ಪಾರಮ್ಯಕ್ಕೆ ಕಡಿವಾಣ ಹಾಕಲೆಂದು ಭಾರತ, ಜಪಾನ್, ಆಸ್ಟ್ರೇಲಿಯಾ ಹಾಗೂ ಅಮೆರಿಕ ದೇಶಗಳು ಜತೆಗೂಡಿ ರಚಿಸಿಕೊಂಡಿರುವ ಕ್ವಾಡ್​ ಒಕ್ಕೂಟದ ಹಲವು ಚಟುವಟಿಕೆಗಳಿಗೂ ಹಿಂದೂ ಮಹಾಸಾಗರವು ವೇದಿಕೆಯಾಗಲಿದೆ. ಈ ಹಿನ್ನೆಲೆಯಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಷ ನಡುವೆ ನಡೆದ ಸಂಭಾಷಣೆ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: Viral Video | ಶ್ರೀಲಂಕಾ ಕ್ರಿಕೆಟಿಗನ ವಿಚಿತ್ರ ಬೌಲಿಂಗ್​ ಶೈಲಿ, ಎದುರಾಳಿ ತಂಡದ ಬ್ಯಾಟ್ಸ್​ಮನ್​ ಜೊತೆ ಕಾಮೆಂಟೇಟರ್ಸ್​ಗೂ ಶಾಕ್​..!

Published On - 2:54 pm, Sun, 14 March 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ