AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ಅಧ್ಯಕ್ಷ ರಾಜಪಕ್ಷ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ

ಕೋವಿಡ್-19ರ ಸವಾಲು ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಎರಡೂ ದೇಶಗಳ ಹಿರಿಯ ಅಧಿಕಾರಿಗಳ ನಡುವೆ ನಿಯಮಿತ ಸಂಪರ್ಕ ಸಾಧ್ಯವಾಗುವಂತೆ ಮಾಡುವ ವ್ಯವಸ್ಥೆ ರೂಪಿಸಲು ಈ ವೇಳೆ ಇಬ್ಬರೂ ನಾಯಕರು ಸಮ್ಮತಿಸಿದರು ಎಂದು ಪ್ರಧಾನಿ ಕಾರ್ಯಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಶ್ರೀಲಂಕಾ ಅಧ್ಯಕ್ಷ ರಾಜಪಕ್ಷ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ
ಶ್ರೀಲಂಕಾ ಅಧ್ಯಕ್ಷ ಗೋಟಬಾಯ ರಾಜಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 14, 2021 | 2:56 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಗೊಟಬಾಯ ರಾಜಪಕ್ಷ ಶನಿವಾರ ದೂರವಾಣಿ ಮಾತುಕತೆ ಮೂಲಕ ಎರಡೂ ದೇಶಗಳ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದ್ದಾರೆ. ಕೋವಿಡ್-19ರ ಸವಾಲು ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಎರಡೂ ದೇಶಗಳ ಹಿರಿಯ ಅಧಿಕಾರಿಗಳ ನಡುವೆ ನಿಯಮಿತ ಸಂಪರ್ಕ ಸಾಧ್ಯವಾಗುವಂತೆ ಮಾಡುವ ವ್ಯವಸ್ಥೆ ರೂಪಿಸಲು ಈ ವೇಳೆ ಇಬ್ಬರೂ ನಾಯಕರು ಸಮ್ಮತಿಸಿದರು ಎಂದು ಪ್ರಧಾನಿ ಕಾರ್ಯಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಎರಡೂ ದೇಶಗಳ ನಡುವಣ ಸಂಬಂಧಗಳಲ್ಲಿ ಈಚೆಗೆ ನಡೆದ ಪ್ರಮುಖ ಬೆಳವಣಿಗೆಳು ಮತ್ತು ಹಾಲಿ ಚಾಲ್ತಿಯಲ್ಲಿರುವ ವಿವಿಧ ಯೋಜನೆಗಳ ಬಗ್ಗೆಯೂ ಎರಡೂ ದೇಶಗಳ ಮುಖ್ಯಸ್ಥರು ಮಾತನಾಡಿದರು ಎಂದು ಹೇಳಿಕೆ ತಿಳಿಸಿದೆ. ‘ಶ್ರೀಲಂಕಾದ ಅಧ್ಯಕ್ಷ ಗೊಟಬಾಯ ಅವರೊಂದಿಗೆ ದೂರವಾಣಿ ಸಂಭಾಷಣೆ ಮೂಲಕ ಕೋವಿಡ್-19ರ ಹಿನ್ನೆಲೆಯಲ್ಲಿ ದ್ವಿಪಕ್ಷೀಯ ಹಾಗೂ ಬಹುಪಕ್ಷೀಯ ಸಹಕಾರ ಬಗ್ಗೆ ಚರ್ಚಿಸಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

‘ನೆರೆಹೊರೆಯವರಿಗೆ ಮೊದಲ ಆದ್ಯತೆ’ ಎಂಬ ಭಾರತದ ನೀತಿಗೆ ಶ್ರೀಲಂಕಾ ಎಷ್ಟು ಮುಖ್ಯ ಎಂಬ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಈ ಸಂದರ್ಭ ಶ್ರೀಲಂಕಾ ಅಧ್ಯಕ್ಷರಿಗೆ ವಿವರಿಸಿದರು ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.

ಚೀನಾ ಮತ್ತು ಭಾರತದ ಸಂಬಂಧಗಳು ಬದಲಾದ ಹಿನ್ನೆಲೆಯಲ್ಲಿ ಹಿಂದೂ ಮಹಾಸಾಗರದಲ್ಲಿ ಪಾರಮ್ಯ ಉಳಿಸಿಕೊಳ್ಳಲು ಎರಡೂ ದೇಶಗಳು ಶ್ರೀಲಂಕಾವನ್ನು ಓಲೈಸುತ್ತಿವೆ. ಶ್ರೀಲಂಕಾಕ್ಕೆ ಚೀನಾ ದೊಡ್ಡಮೊತ್ತದ ಸಾಲ ನೀಡಿ ಒಂದು ಬಂದರನ್ನು ಗುತ್ತಿಗೆಗೆ ಪಡೆದುಕೊಂಡಿದೆ. ಭಾರತವೂ ಶ್ರೀಲಂಕಾದಲ್ಲಿ ಬಂದರು ಅಭಿವೃದ್ಧಿಪಡಿಸುತ್ತಿದೆ.

ಚೀನಾದ ಪಾರಮ್ಯಕ್ಕೆ ಕಡಿವಾಣ ಹಾಕಲೆಂದು ಭಾರತ, ಜಪಾನ್, ಆಸ್ಟ್ರೇಲಿಯಾ ಹಾಗೂ ಅಮೆರಿಕ ದೇಶಗಳು ಜತೆಗೂಡಿ ರಚಿಸಿಕೊಂಡಿರುವ ಕ್ವಾಡ್​ ಒಕ್ಕೂಟದ ಹಲವು ಚಟುವಟಿಕೆಗಳಿಗೂ ಹಿಂದೂ ಮಹಾಸಾಗರವು ವೇದಿಕೆಯಾಗಲಿದೆ. ಈ ಹಿನ್ನೆಲೆಯಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಷ ನಡುವೆ ನಡೆದ ಸಂಭಾಷಣೆ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: Viral Video | ಶ್ರೀಲಂಕಾ ಕ್ರಿಕೆಟಿಗನ ವಿಚಿತ್ರ ಬೌಲಿಂಗ್​ ಶೈಲಿ, ಎದುರಾಳಿ ತಂಡದ ಬ್ಯಾಟ್ಸ್​ಮನ್​ ಜೊತೆ ಕಾಮೆಂಟೇಟರ್ಸ್​ಗೂ ಶಾಕ್​..!

Published On - 2:54 pm, Sun, 14 March 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ