AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ರಾಷ್ಟ್ರೀಯ ಕುಡಗೋಲು-ಕಣ ರಕ್ತಹೀನತೆ ನಿವಾರಣೆ ಮಿಷನ್‌ಗೆ ಪ್ರಧಾನಿ ಚಾಲನೆ, ಪಕಾರಿಯಾ ಗ್ರಾಮಕ್ಕೆ ಭೇಟಿ

National Sickle Cell Anemia: ಪ್ರಧಾನಿ ಮೋದಿ ಅವರು ಇಂದು (ಜುಲೈ 1) ಕುಡಗೋಲು ಕಣ ರಕ್ತಹೀನತೆ ನಿರ್ಮೂಲನೆ (Sickle cell anemia) ಮಿಷನ್​​ನ್ನು ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಉದ್ಘಾಟನೆ ಮಾಡಲಿದ್ದು, ಈ ಕಾರ್ಯಕ್ರಮದಲ್ಲಿ ಮೋದಿ ಅವರು ಕುಡಗೋಲು ಕೋಶ ಜೆನೆಟಿಕ್ ಸ್ಟೇಟಸ್ ಕಾರ್ಡ್‌ಗಳನ್ನು ವಿತರಿಸಲಿದ್ದಾರೆ

Narendra Modi: ರಾಷ್ಟ್ರೀಯ ಕುಡಗೋಲು-ಕಣ ರಕ್ತಹೀನತೆ ನಿವಾರಣೆ ಮಿಷನ್‌ಗೆ ಪ್ರಧಾನಿ ಚಾಲನೆ, ಪಕಾರಿಯಾ ಗ್ರಾಮಕ್ಕೆ ಭೇಟಿ
ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Jul 01, 2023 | 2:26 PM

Share

ಭೋಪಾಲ್: ಪ್ರಧಾನಿ ಮೋದಿ (Narendra Modi) ಅವರು ಇಂದು (ಜುಲೈ 1) ಕುಡಗೋಲು-ಕಣ ರಕ್ತಹೀನತೆ ನಿರ್ಮೂಲನೆ (Sickle cell anemia) ಮಿಷನ್​​ನ್ನು ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಉದ್ಘಾಟನೆ ಮಾಡಲಿದ್ದು, ಈ ಕಾರ್ಯಕ್ರಮದಲ್ಲಿ ಮೋದಿ ಅವರು ಕುಡಗೋಲು ಕೋಶ ಜೆನೆಟಿಕ್ ಸ್ಟೇಟಸ್ ಕಾರ್ಡ್‌ಗಳನ್ನು ವಿತರಿಸಲಿದ್ದಾರೆ ಎಂದು ಶುಕ್ರವಾರ ಹೊರಡಿಸಿದ ಅಧಿಕೃತ ಪ್ರಕಟಣೆ ತಿಳಿಸಿದೆ. ವಿಶೇಷವಾಗಿ ಬುಡಕಟ್ಟು ಜನಸಂಖ್ಯೆಯಲ್ಲಿ ಕುಡಗೋಲು ಕಣ ಕಾಯಿಲೆಯಿಂದ ಬಳಲುತ್ತಿದ್ದು ತುರ್ತು ಆರೋಗ್ಯ ಸವಾಲುಗಳನ್ನು ಪರಿಹರಿಸುವುದು ಈ ಮಿಷನ್‌ ಪ್ರಮುಖ ಉದ್ದೇಶವಾಗಿದೆ.

ಕುಡಗೋಲು-ಕಣ ರಕ್ತಹೀನತೆಯು (ಸಿಕಲ್‌ ಸೆಲ್‌ ಅನೀಮಿಯಾ) ಹಿಮೋಗ್ಲೋಬಿನ್ S ಎಂಬ ದೋಷಯುಕ್ತ ಜೀನ್‌ನಿಂದ ಉಂಟಾಗುತ್ತದೆ, ಇದು ಕೆಂಪು ರಕ್ತ ಕಣಗಳು ಗಟ್ಟಿಯಾಗಲು ಮತ್ತು ಕುಡಗೋಲು ಆಕಾರವನ್ನು ಹೆಚ್ಚು ಮಾಡುತ್ತದೆ. ರಕ್ತದ ಹರಿವನ್ನು ತಡೆಯುತ್ತದೆ ಮತ್ತು ಅಂಗ ಹಾನಿಯ ಅಪಾಯವನ್ನು ಹೆಚ್ಚಿಸುತ್ತದೆ.

ಈ ಯೋಜನೆಯನ್ನು 2047ರ ವೇಳೆಗೆ ಈ ಕುಡಗೋಲು ಕೋಶ ರೋಗವನ್ನು ತೊಡೆದುಹಾಕಲು ಕೇಂದ್ರದ ಪ್ರಯತ್ನವನ್ನು ಕೇಂದ್ರ ಮಾಡುತ್ತಿದೆ. ಇದೀಗ ಇದು ಈ ರೋಗವನ್ನು ನಿರ್ಮೂನೆ ಮಾಡಲು ಪ್ರಮುಖ ಹಂತವಾಗಿದೆ. ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಒಡಿಶಾ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಅಸ್ಸಾಂ, ಉತ್ತರ ಪ್ರದೇಶ, ಕೇರಳ, ಬಿಹಾರ ಮತ್ತು ಉತ್ತರಾಖಂಡ್ 17 ಹೆಚ್ಚು ಕೇಂದ್ರೀಕೃತ ರಾಜ್ಯಗಳಲ್ಲಿಯೂ ಈ ಕಾರ್ಯಕ್ರಮವನ್ನು ತರಲಾಗುವುದು ಎಂದು ಹೇಳಿದೆ.

ಇದನ್ನೂ ಓದಿ: National Sickle Cell Anemia Elimination Program: 2047ರ ವೇಳೆಗೆ ಸಿಕಲ್‌ ಸೆಲ್‌ ಅನೀಮಿಯಾ ಮುಕ್ತವಾಗಬೇಕು ಭಾರತ, ಪ್ರಧಾನಿ ಮೋದಿ ಇಂದು ಆರೋಗ್ಯ ಮಿಷನ್​​ಗೆ ಚಾಲನೆ

ಮಧ್ಯಪ್ರದೇಶದಲ್ಲಿ ಸರಿಸುಮಾರು 3.57 ಕೋಟಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಕಾರ್ಡ್‌ಗಳ ವಿತರಣೆಯನ್ನು ಮೋದಿ ಮಾಡಿದ್ದಾರೆ. ಆಯುಷ್ಮಾನ್ ಕಾರ್ಡ್ ವಿತರಣಾ ಅಭಿಯಾನದ ಮೂಲಕ 100% ಆರೋಗ್ಯ ಸಾಧಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯು ಪ್ರತಿಯೊಬ್ಬ ಫಲಾನುಭವಿಯನ್ನು ತಲುಪುವ ಪ್ರಧಾನಮಂತ್ರಿಯವರ ದೃಷ್ಟಿಯನ್ನು ಸಾಕಾರಗೊಳಿಸುವತ್ತ ಒಂದು ಹೆಜ್ಜೆಯಾಗಿದೆ ಎಂದು ಕೇಂದ್ರ ಹೇಳಿದೆ.

ಜೊತೆಗೆ, ಪ್ರಧಾನಮಂತ್ರಿ ಅವರು ಜಿಲ್ಲೆಯ ಪಕಾರಿಯಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಬುಡಕಟ್ಟು ಮುಖಂಡರು, ಸ್ವ-ಸಹಾಯ ಗುಂಪುಗಳು, PESA (ಪರಿಶಿಷ್ಟ ಪ್ರದೇಶಗಳಿಗೆ ಪಂಚಾಯತ್ ವಿಸ್ತರಣೆ ಕಾಯ್ದೆ) ಸಮಿತಿ ನಾಯಕರು ಮತ್ತು ಗ್ರಾಮ ಮಟ್ಟದ ಫುಟ್ಬಾಲ್ ಕ್ಲಬ್‌ಗಳ ನಾಯಕರನ್ನು ಭೇಟಿ ಮಾಡಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:22 pm, Sat, 1 July 23

Follow Us
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ಬಬಲಾದಿ ಮಠದ ಕಾಲಜ್ಞಾನ ನಿಜವಾಯಿತೇ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?