AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ರಾಷ್ಟ್ರೀಯ ಕುಡಗೋಲು-ಕಣ ರಕ್ತಹೀನತೆ ನಿವಾರಣೆ ಮಿಷನ್‌ಗೆ ಪ್ರಧಾನಿ ಚಾಲನೆ, ಪಕಾರಿಯಾ ಗ್ರಾಮಕ್ಕೆ ಭೇಟಿ

National Sickle Cell Anemia: ಪ್ರಧಾನಿ ಮೋದಿ ಅವರು ಇಂದು (ಜುಲೈ 1) ಕುಡಗೋಲು ಕಣ ರಕ್ತಹೀನತೆ ನಿರ್ಮೂಲನೆ (Sickle cell anemia) ಮಿಷನ್​​ನ್ನು ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಉದ್ಘಾಟನೆ ಮಾಡಲಿದ್ದು, ಈ ಕಾರ್ಯಕ್ರಮದಲ್ಲಿ ಮೋದಿ ಅವರು ಕುಡಗೋಲು ಕೋಶ ಜೆನೆಟಿಕ್ ಸ್ಟೇಟಸ್ ಕಾರ್ಡ್‌ಗಳನ್ನು ವಿತರಿಸಲಿದ್ದಾರೆ

Narendra Modi: ರಾಷ್ಟ್ರೀಯ ಕುಡಗೋಲು-ಕಣ ರಕ್ತಹೀನತೆ ನಿವಾರಣೆ ಮಿಷನ್‌ಗೆ ಪ್ರಧಾನಿ ಚಾಲನೆ, ಪಕಾರಿಯಾ ಗ್ರಾಮಕ್ಕೆ ಭೇಟಿ
ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on:Jul 01, 2023 | 2:26 PM

Share

ಭೋಪಾಲ್: ಪ್ರಧಾನಿ ಮೋದಿ (Narendra Modi) ಅವರು ಇಂದು (ಜುಲೈ 1) ಕುಡಗೋಲು-ಕಣ ರಕ್ತಹೀನತೆ ನಿರ್ಮೂಲನೆ (Sickle cell anemia) ಮಿಷನ್​​ನ್ನು ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಉದ್ಘಾಟನೆ ಮಾಡಲಿದ್ದು, ಈ ಕಾರ್ಯಕ್ರಮದಲ್ಲಿ ಮೋದಿ ಅವರು ಕುಡಗೋಲು ಕೋಶ ಜೆನೆಟಿಕ್ ಸ್ಟೇಟಸ್ ಕಾರ್ಡ್‌ಗಳನ್ನು ವಿತರಿಸಲಿದ್ದಾರೆ ಎಂದು ಶುಕ್ರವಾರ ಹೊರಡಿಸಿದ ಅಧಿಕೃತ ಪ್ರಕಟಣೆ ತಿಳಿಸಿದೆ. ವಿಶೇಷವಾಗಿ ಬುಡಕಟ್ಟು ಜನಸಂಖ್ಯೆಯಲ್ಲಿ ಕುಡಗೋಲು ಕಣ ಕಾಯಿಲೆಯಿಂದ ಬಳಲುತ್ತಿದ್ದು ತುರ್ತು ಆರೋಗ್ಯ ಸವಾಲುಗಳನ್ನು ಪರಿಹರಿಸುವುದು ಈ ಮಿಷನ್‌ ಪ್ರಮುಖ ಉದ್ದೇಶವಾಗಿದೆ.

ಕುಡಗೋಲು-ಕಣ ರಕ್ತಹೀನತೆಯು (ಸಿಕಲ್‌ ಸೆಲ್‌ ಅನೀಮಿಯಾ) ಹಿಮೋಗ್ಲೋಬಿನ್ S ಎಂಬ ದೋಷಯುಕ್ತ ಜೀನ್‌ನಿಂದ ಉಂಟಾಗುತ್ತದೆ, ಇದು ಕೆಂಪು ರಕ್ತ ಕಣಗಳು ಗಟ್ಟಿಯಾಗಲು ಮತ್ತು ಕುಡಗೋಲು ಆಕಾರವನ್ನು ಹೆಚ್ಚು ಮಾಡುತ್ತದೆ. ರಕ್ತದ ಹರಿವನ್ನು ತಡೆಯುತ್ತದೆ ಮತ್ತು ಅಂಗ ಹಾನಿಯ ಅಪಾಯವನ್ನು ಹೆಚ್ಚಿಸುತ್ತದೆ.

ಈ ಯೋಜನೆಯನ್ನು 2047ರ ವೇಳೆಗೆ ಈ ಕುಡಗೋಲು ಕೋಶ ರೋಗವನ್ನು ತೊಡೆದುಹಾಕಲು ಕೇಂದ್ರದ ಪ್ರಯತ್ನವನ್ನು ಕೇಂದ್ರ ಮಾಡುತ್ತಿದೆ. ಇದೀಗ ಇದು ಈ ರೋಗವನ್ನು ನಿರ್ಮೂನೆ ಮಾಡಲು ಪ್ರಮುಖ ಹಂತವಾಗಿದೆ. ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಒಡಿಶಾ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಅಸ್ಸಾಂ, ಉತ್ತರ ಪ್ರದೇಶ, ಕೇರಳ, ಬಿಹಾರ ಮತ್ತು ಉತ್ತರಾಖಂಡ್ 17 ಹೆಚ್ಚು ಕೇಂದ್ರೀಕೃತ ರಾಜ್ಯಗಳಲ್ಲಿಯೂ ಈ ಕಾರ್ಯಕ್ರಮವನ್ನು ತರಲಾಗುವುದು ಎಂದು ಹೇಳಿದೆ.

ಇದನ್ನೂ ಓದಿ: National Sickle Cell Anemia Elimination Program: 2047ರ ವೇಳೆಗೆ ಸಿಕಲ್‌ ಸೆಲ್‌ ಅನೀಮಿಯಾ ಮುಕ್ತವಾಗಬೇಕು ಭಾರತ, ಪ್ರಧಾನಿ ಮೋದಿ ಇಂದು ಆರೋಗ್ಯ ಮಿಷನ್​​ಗೆ ಚಾಲನೆ

ಮಧ್ಯಪ್ರದೇಶದಲ್ಲಿ ಸರಿಸುಮಾರು 3.57 ಕೋಟಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಕಾರ್ಡ್‌ಗಳ ವಿತರಣೆಯನ್ನು ಮೋದಿ ಮಾಡಿದ್ದಾರೆ. ಆಯುಷ್ಮಾನ್ ಕಾರ್ಡ್ ವಿತರಣಾ ಅಭಿಯಾನದ ಮೂಲಕ 100% ಆರೋಗ್ಯ ಸಾಧಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯು ಪ್ರತಿಯೊಬ್ಬ ಫಲಾನುಭವಿಯನ್ನು ತಲುಪುವ ಪ್ರಧಾನಮಂತ್ರಿಯವರ ದೃಷ್ಟಿಯನ್ನು ಸಾಕಾರಗೊಳಿಸುವತ್ತ ಒಂದು ಹೆಜ್ಜೆಯಾಗಿದೆ ಎಂದು ಕೇಂದ್ರ ಹೇಳಿದೆ.

ಜೊತೆಗೆ, ಪ್ರಧಾನಮಂತ್ರಿ ಅವರು ಜಿಲ್ಲೆಯ ಪಕಾರಿಯಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಬುಡಕಟ್ಟು ಮುಖಂಡರು, ಸ್ವ-ಸಹಾಯ ಗುಂಪುಗಳು, PESA (ಪರಿಶಿಷ್ಟ ಪ್ರದೇಶಗಳಿಗೆ ಪಂಚಾಯತ್ ವಿಸ್ತರಣೆ ಕಾಯ್ದೆ) ಸಮಿತಿ ನಾಯಕರು ಮತ್ತು ಗ್ರಾಮ ಮಟ್ಟದ ಫುಟ್ಬಾಲ್ ಕ್ಲಬ್‌ಗಳ ನಾಯಕರನ್ನು ಭೇಟಿ ಮಾಡಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:22 pm, Sat, 1 July 23

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್