Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಜನ ಸ್ವಾವಲಂಬಿಗಳಾಗಬೇಕಾದ ಅನಿವಾರ್ಯತೆ ಇದೆ -ಪ್ರಧಾನಿ ಮೋದಿ

[lazy-load-videos-and-sticky-control id=”7C9cvnvAbfg”] ದೆಹಲಿ: ಈ ಬಾರಿಯ ಮನ್​ ಕೀ ಬಾತ್ ಕಾರ್ಯಕ್ರಮವನ್ನ ಪ್ರಧಾನಿ ಮೋದಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸುವ ಮೂಲಕ ಪ್ರಾರಂಭಿಸಿದರು. ಇಂದು ಕಾರ್ಗಿಲ್ ವಿಜಯ್ ದಿವಸ್ ಆಚರಣೆಯ ಹಿನ್ನೆಲೆಯಲ್ಲಿ ಇಡೀ ದೇಶ ಅಂದಿನ ಗೆಲುವನ್ನು ಸಂಭ್ರಮಿಸುತ್ತಿದೆ. ಕಾರ್ಗಿಲ್ ಯುದ್ಧದಲ್ಲಿ ಭಾರತ ಗೆದ್ದು ತನ್ನ ಶಕ್ತಿ ಮತ್ತು ಸಾಮಥ್ರ್ಯ ತೋರಿಸಿತ್ತು. ನಮ್ಮ ವೀರ ಯೋಧರು ಪಾಕಿಸ್ತಾನವನ್ನ ಧ್ವಂಸ ಮಾಡಿದ್ದು ಈ ಘಟನೆಗೆ ಇಡೀ ವಿಶ್ವವೇ ಸಾಕ್ಷಿಯಾಗಿತು ಎಂದು ಪ್ರಧಾನಿ ಯೋಧರನ್ನು ಕೊಂಡಾಡಿದರು. ಜೊತೆಗೆ, […]

ದೇಶದ ಜನ ಸ್ವಾವಲಂಬಿಗಳಾಗಬೇಕಾದ ಅನಿವಾರ್ಯತೆ ಇದೆ -ಪ್ರಧಾನಿ ಮೋದಿ
Follow us
KUSHAL V
| Updated By:

Updated on:Jul 26, 2020 | 4:16 PM

[lazy-load-videos-and-sticky-control id=”7C9cvnvAbfg”]

ದೆಹಲಿ: ಈ ಬಾರಿಯ ಮನ್​ ಕೀ ಬಾತ್ ಕಾರ್ಯಕ್ರಮವನ್ನ ಪ್ರಧಾನಿ ಮೋದಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸುವ ಮೂಲಕ ಪ್ರಾರಂಭಿಸಿದರು.

ಇಂದು ಕಾರ್ಗಿಲ್ ವಿಜಯ್ ದಿವಸ್ ಆಚರಣೆಯ ಹಿನ್ನೆಲೆಯಲ್ಲಿ ಇಡೀ ದೇಶ ಅಂದಿನ ಗೆಲುವನ್ನು ಸಂಭ್ರಮಿಸುತ್ತಿದೆ. ಕಾರ್ಗಿಲ್ ಯುದ್ಧದಲ್ಲಿ ಭಾರತ ಗೆದ್ದು ತನ್ನ ಶಕ್ತಿ ಮತ್ತು ಸಾಮಥ್ರ್ಯ ತೋರಿಸಿತ್ತು. ನಮ್ಮ ವೀರ ಯೋಧರು ಪಾಕಿಸ್ತಾನವನ್ನ ಧ್ವಂಸ ಮಾಡಿದ್ದು ಈ ಘಟನೆಗೆ ಇಡೀ ವಿಶ್ವವೇ ಸಾಕ್ಷಿಯಾಗಿತು ಎಂದು ಪ್ರಧಾನಿ ಯೋಧರನ್ನು ಕೊಂಡಾಡಿದರು. ಜೊತೆಗೆ, ಕಾರ್ಗಿಲ್​ ವಿಜಯವನ್ನು ಭಾರತೀಯರು ಎಂದೂ ಮರೆಯಲ್ಲ. ಆದರೆ, ಭಾರತ ಎಂದಿಗೂ ಶಾಂತಿ ಬಯಸುವ ದೇಶ ಎಂಬ ಮಾತುಗಳನ್ನು ಸಹ ಹೇಳಿದರು.

‘ಕೊರೊನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ’ ಇನ್ನು ಕೊರೊನಾ ಬಗ್ಗೆ ಉಲ್ಲೇಖಿಸಿದ ಮೋದಿ ಕೊರೊನಾ ವಿರುದ್ಧದ ಅಭಿಯಾನ ಮುಂದುವರಿಸೋಣ. ಕೊರೊನಾ ವಿರುದ್ಧ ಇಡೀ ದೇಶವೇ ಹೋರಾಡುತ್ತಿದೆ. ಹೀಗಾಗಿ, ಸಾಮಾಜಿಕ ಅಂತರ ಮತ್ತು ಮಾಸ್ಕ್​ ಧರಿಸಿ ಹೋರಾಟ ಮುಂದುವರಿಸೋಣ ಎಂದು ಜನರನ್ನ ಹುರದುಂಬಿಸಿದರು. ಕೊರೊನಾ ವಾರಿಯರ್ಸ್​ಗೆ ಕೃತಜ್ಞತೆ ಸಲ್ಲಿಸಿದ ಮೋದಿ ಸಂಕಷ್ಟದಲ್ಲಿ ಬಡವರ ನೆರವಿಗೆ ಬಂದವರ ಸ್ಮರಿಸಿಕೊಂಡರು. ಕೊರೊನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ. ಆಗಲೇ, ಸೋಂಕನ್ನು ನಿಯಂತ್ರಿಸುವಲ್ಲಿ ದೇಶ ಯಶಸ್ವಿಯಾಗುತ್ತಿದೆ.

‘ದೇಶದ ಜನ ಸ್ವಾವಲಂಬಿಗಳಾಗಬೇಕಾದ ಅನಿವಾರ್ಯತೆ ಇದೆ’ ದೇಶದ ಜನರಿಗೆ ರಕ್ಷಾ ಬಂಧನದ ಶುಭಾಶಯಗಳು ತಿಳಿಸಿದ ಪ್ರಧಾನಿ ಇಂದು ದೇಶದ ಜನರು ಸ್ವಾವಲಂಬಿಗಳಾಗಬೇಕಾದ ಅನಿವಾರ್ಯತೆ ಇದೆ. ಜೊತೆಗೆ, ಭಾರತ ವೇಗವಾಗಿ ಬದಲಾಗುತ್ತಿದೆ ಹಾಗೂ ಅಭಿವೃದ್ಧಿ ಕಾಣುತ್ತಿದೆ. ಹಾಗಾಗಿ, ದೇಶ ಕಟ್ಟುವಲ್ಲಿ ಯುವಕರು ತಮ್ಮನ್ನು ಮತ್ತಷ್ಟು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳ ಜೊತೆ ಆನ್​ಲೈನ್ ಶಿಕ್ಷಣದ ಬಗ್ಗೆ ಚರ್ಚೆ ತಮ್ಮ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಆನ್​ಲೈನ್ ಶಿಕ್ಷಣದ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ ಮಾಡಿದರು. ವಿವಿಧ ರಾಜ್ಯಗಳ ವಿದ್ಯಾರ್ಥಿಗಳ ಜೊತೆ ಮಾತನಾಡಿದ ಪ್ರಧಾನಿ ಪರೀಕ್ಷಾ ಪೂರ್ವ ಸಿದ್ಧತೆಯ ಬಗ್ಗೆಯೂ ವಿಚಾರಿಸಿದರು.

Published On - 12:00 pm, Sun, 26 July 20

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್