AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ.25ರಂದು ದೆಹಲಿ ಕನ್ನಡ ಸಂಘದ ಕಾರ್ಯಕ್ರಮ ಉದ್ಘಾಟಿಸಲಿರುವ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಕೂಡ ಭಾಗಿ

ಫೆಬ್ರವರಿ 25 ರಂದು ನವದೆಹಲಿಯಲ್ಲಿ ನಡೆಯಲಿರುವ ದೆಹಲಿ ಕನ್ನಡ ಸಂಘದ ಕಾರ್ಯಕ್ರಮದಲ್ಲಿ ಪಿಎಂ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.

ಫೆ.25ರಂದು ದೆಹಲಿ ಕನ್ನಡ ಸಂಘದ ಕಾರ್ಯಕ್ರಮ ಉದ್ಘಾಟಿಸಲಿರುವ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಕೂಡ ಭಾಗಿ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Feb 23, 2023 | 1:17 PM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ರಾಜಕೀಯ ಪಕ್ಷಗಳು ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರಕ್ಕಿಳಿದಿವೆ. ಸದ್ಯ ಹೊರರಾಜ್ಯದ ಕನ್ನಡಿಗರ ಮತಗಳ ಮೇಲೆಯೂ ಬಿಜೆಪಿ ಪರೋಕ್ಷವಾಗಿ ಗಾಳ ಹಾಕಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿ ಕನ್ನಡ ಸಂಘದ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಫೆಬ್ರವರಿ 25 ರಂದು ನವದೆಹಲಿಯಲ್ಲಿ ನಡೆಯಲಿರುವ ದೆಹಲಿ ಕನ್ನಡ ಸಂಘದ ಕಾರ್ಯಕ್ರಮದಲ್ಲಿ ಪಿಎಂ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲು ಫೆ. 25 ರಂದು ಮಧ್ಯಾಹ್ನ ಬೆಂಗಳೂರಿನಿಂದ ದೆಹಲಿಗೆ ತೆರಳಲಿದ್ದಾರೆ. ಫೆಬ್ರವರಿ 25 ರ ಸಂಜೆ 4 ಗಂಟೆಗೆ ಸಮಾರಂಭ ನಡೆಯಲಿದೆ.

ಇದನ್ನೂ ಓದಿ:PM Kisan Yojana: ಬೆಳಗಾವಿಯಲ್ಲಿ ಪ್ರಧಾನಿ ಮೋದಿಯಿಂದ ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ 13ನೇ ಕಂತು ವಿತರಣೆ: ಸಚಿವೆ ಶೋಭಾ ಕರಂದ್ಲಾಜೆ ಪ್ರಕಟ

ಬೆಳಗಾವಿ ನಗರಕ್ಕೆ ಫೆ.27ರಂದು ಪ್ರಧಾನಿ ಮೋದಿ ಭೇಟಿ

ಫೆ.27ರಂದು ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಬೆಳಗಾವಿಯಲ್ಲಿ ಭಾರೀ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಹಾಗೂ ಬೆಳಗಾವಿಯಲ್ಲಿ ಮೋದಿ ರೋಡ್ ಶೋಗೆ ಬಿಜೆಪಿ ನಾಯಕರು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಬೆಳಗಾವಿ ಉತ್ತರ, ದಕ್ಷಿಣ ಕ್ಷೇತ್ರದಲ್ಲಿ 8 ಕಿ.ಮೀ. ರೋಡ್​ ಶೋಗೆ ಪ್ಲ್ಯಾನ್ ಆಗಿದ್ದು ರೋಡ್​ ಶೋ ಮಾರ್ಗ, ಹೆಲಿಪ್ಯಾಡ್​​​, ಕಾರ್ಯಕ್ರಮದ ಸ್ಥಳ ಸೇರಿದಂತೆ ಬೆಳಗಾವಿ ನಗರದಲ್ಲಿ ಬಿಜೆಪಿ ನಾಯಕರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೋದಿ ಭೇಟಿ ಬೆಳಗಾವಿ ಜಿಲ್ಲೆ ಬಿಜೆಪಿಗೆ ಹೊಸ ಚೈತನ್ಯ ನೀಡಲಿದೆ. ಫೆ.27ರಂದು ಕಿಸಾನ್ ಸಮ್ಮಾನ್​​ ಯೋಜನೆಯ ಕಂತಿನ ಹಣ ಬಿಡುಗಡೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:13 pm, Thu, 23 February 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ