AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಕಾಶಿಗೆ ಭೇಟಿ ನೀಡಲು 10 ಕಾರಣ ಹೇಳಿದ ಪ್ರಧಾನಿ ಮೋದಿ

ಕಾಶಿಯು ಎಲ್ಲರ ಆಗಮನಕ್ಕೆ ಕಾಯುತ್ತಿದೆ. ಅನೇಕ ಜನರು ಇಲ್ಲಿಗೆ ಭೇಟಿ ನೀಡಲು ಕಾಯುತ್ತಿದ್ದಾರೆ. ಒಮದು ಬಾರಿ ಭೇಟಿ ನೀಡಿದರೆ, ನಿಮ್ಮನ್ನು ಮಂತ್ರಮುಗ್ಧಗೊಳಿಸುತ್ತದೆ ಎಂದು ಮೋದಿ ಅವರು ಟ್ವೀಟ್ ಅನ್ನು ಹಂಚಿಕೊಂಡಿದ್ದಾರೆ.

Narendra Modi: ಕಾಶಿಗೆ ಭೇಟಿ ನೀಡಲು 10 ಕಾರಣ ಹೇಳಿದ ಪ್ರಧಾನಿ ಮೋದಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Apr 15, 2023 | 3:20 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಟ್ವಿಟರ್​​ನಲ್ಲಿ ತಮ್ಮ ಲೋಕಸಭೆ ಕ್ಷೇತ್ರವಾದ ವಾರಣಾಸಿ ಬಗ್ಗೆ ಹಾಡಿಹೊಗಲಿದ್ದಾರೆ. ಇದರ ಜತೆಗೆ ಮೋದಿ ಅವರು ಉತ್ತರ ಪ್ರದೇಶದ ಪ್ರಮುಖ ಧಾರ್ಮಿಕ ನಗರಕ್ಕೆ ಭೇಟಿ ನೀಡಲು 10 ಕಾರಣಗಳ ಇದೆ ಎಂದು ಹೇಳಿದ್ದಾರೆ. ಇಲ್ಲಿನ ಅದ್ಭುತ ಧಾರ್ಮಿಕ ಆಚರಣೆ ಮತ್ತು ಸುಂದರ ನಗರಗಳು, ಆಚರಣೆ ಬಗ್ಗೆ ಮಾತನಾಡಿದ್ದಾರೆ. ಈ ನಗರಗಳು ನಮ್ಮನ್ನು ಖಂಡಿತ ಮೋಡಿ ಮಾಡುತ್ತದೆ ಎಂದು ಪ್ರಧಾನಿ ಹೇಳಿದರು. ಕಾಶಿಯು ಎಲ್ಲರ ಆಗಮನಕ್ಕೆ ಕಾಯುತ್ತಿದೆ. ಅನೇಕ ಜನರು ಇಲ್ಲಿಗೆ ಭೇಟಿ ನೀಡಲು ಕಾಯುತ್ತಿದ್ದಾರೆ. ಒಮದು ಬಾರಿ ಭೇಟಿ ನೀಡಿದರೆ, ನಿಮ್ಮನ್ನು ಮಂತ್ರಮುಗ್ಧಗೊಳಿಸುತ್ತದೆ ಎಂದು ಮೋದಿ ಅವರು ಟ್ವೀಟ್ ಅನ್ನು ಹಂಚಿಕೊಂಡಿದ್ದಾರೆ. ಇದರ ಜತೆಗೆ ನಿಮ್ಮ ಜೀವನದಲ್ಲಿ ಒಮ್ಮೆಯಾದರು, ನೀವು ಕಾಶಿಗೆ ಈ 10 ಕಾರಣಕ್ಕಾಗಿ ಭೇಟಿ ಮಾಡಬೇಕು. ಈ ಬಗ್ಗೆ ವರ್ಟಿಗೋ ವಾರಿಯರ್ ಟ್ವಿಟರ್​ನಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದನ್ನು ಮೋದಿ ರೀ ಟ್ವೀಟ್​ ಮಾಡಿದ್ದಾರೆ. 

ಕಾಶಿಗೆ ಭೇಟಿ ನೀಡಲು 10 ಕಾರಣ ಇಲ್ಲಿದೆ ಪಟ್ಟಿ

1. ಶ್ರೀ ಕಾಶಿ ವಿಶ್ವನಾಥ ಜ್ಯೋತಿರ್ಲಿಂಗ

2. ಗಂಗಾ ಆರತಿ

3. ಗಂಗಾ ಘಟ್ಟಗಳು

4. ಗಂಗಾ ಸ್ನಾನ

5. ಸಂಕಷ್ಟ ಮೋಚನ್ ಹನುಮಾನ್ ಮಂದಿರ

6. ಗಂಗಾ ನದಿಯಲ್ಲಿ ದೋಣಿ ವಿಹಾರ

7. ಕಾಶಿ ಕಾ ಚಾತ್

8. ಗೋಡೋಲಿಯಾ ಕಾ ಮೀತಾ ಪಾನ್

9. ಮಲೈಯೋ

10. ಕುಲ್ಲಾಡ್ ಚಾಯ್

ಮೈಕ್ರೋಬ್ಲಾಗಿಂಗ್ ಸೈಟ್‌ನಲ್ಲಿ ಈ ಬಗ್ಗೆ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ಈ ಕುರಿತು ಬಳಕೆದಾರರು ಈ ಪ್ರದೇಶಗಳಿಗೆ ಭೇಟಿ ನೀಡಿದ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಒಬ್ಬ ಬಳಕೆದಾರ ಇತಿಹಾಸಕ್ಕಿಂತ ಹಳೆಯದು, ಸಂಪ್ರದಾಯಕ್ಕಿಂತ ಹಳೆಯದು, ದಂತಕಥೆಗಿಂತಲೂ ಹಳೆಯದು. ಉಳಿದಿರುವ ವಿಶ್ವದ ಅತ್ಯಂತ ಹಳೆಯ ನಗರಗಳಲ್ಲಿ ಒಂದಾಗಿದೆ. ಮಹಾದೇವ್ ಕಿ ನಾಗರಿ, ನಮ್ಮ ಕಾಶಿ, ಎಂದು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Narendra Modi in Karnataka: ಕರ್ನಾಟಕದಲ್ಲಿ ಮೋದಿ ಮೋಡಿ; ಚಿತ್ರಗಳಲ್ಲಿ ನೋಡಿ

ಕಾಶಿಯು ಭೇಟಿ ನೀಡುವ ಪ್ರತಿಯೊಬ್ಬರನ್ನು ಮಂತ್ರಮುಗ್ಧಗೊಳಿಸುತ್ತದೆ. ಇದು ಬಹಳ ಪ್ರಭಾವ ಹೊಂದಿರುವ ನಗರ. ಅದುವೇ ದೇವರ ವಿಶ್ವನಾಥನ ಶಕ್ತಿಯಾಗಿರಲಿ, ದೇವಿ ಅನ್ನಪೂರ್ಣೆಯ ಕರುಣೆಯಾಗಿರಲಿ, ಶಕ್ತಿಶಾಲಿ ಗಂಗೆಯಾಗಿರಲಿ. ಇದು ಈ ನಗರದ ಕಂಪನಗಳು. ಕಾಶಿಗೆ ಹೋಗಲು ಯಾವಾಗಲೂ ಸಂತೋಷವಾಗುತ್ತದೆ ಎಂದು ಇನ್ನೊಬ್ಬ ಬಳಕೆದಾರ ಕಮೆಂಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಮಾರ್ಚ್ 24ರಂದು ವಾರಣಾಸಿಗೆ ಭೇಟಿ ನೀಡಿದರು, ಅಲ್ಲಿ ಅವರು ಭಾರತದ ಮೊದಲ ನಗರದ ರೋಪ್‌ವೇ ಸೇರಿದಂತೆ ಶಂಕುಸ್ಥಾಪನೆ ಮಾಡಿದರು ಮತ್ತು 1,780 ಕೋಟಿ ರೂ.ಗೂ ಹೆಚ್ಚು ಮೌಲ್ಯದ 28 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ