AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಇಂದು (ಮೇ 29) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್(Vande Bharat Express) ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು.

ಅಕ್ಷಯ್​ ಪಲ್ಲಮಜಲು​​
|

Updated on:May 29, 2023 | 1:12 PM

Share

ಇಂದು (ಮೇ 29) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್(Vande Bharat Express) ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ ಅತ್ಯಾಧುನಿಕ ರೈಲು, ವೇಗ, ಸೌಕರ್ಯ ಮತ್ತು ವರ್ಧಿತ ಸಂಪರ್ಕವನ್ನು ಒದಗಿಸುವ ಜತೆಗೆ ನಮ್ಮ ಬದ್ಧತೆಯನ್ನು ಸಾಕಾರಗೊಳಿಸುತ್ತದೆ ಎಂದು ಪ್ರಧಾನಿ ಮೋದಿ ಭಾನುವಾರ ಟ್ವೀಟ್ ಮಾಡಿದ್ದಾರೆ. ಇದು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಮತ್ತು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ಕೃಷ್ಟಗೊಳಿಸುತ್ತದೆ ಎಂದು ಹೇಳಿದ್ದಾರೆ.

ಈ ರೈಲು ವಾರದಲ್ಲಿ ಆರು ದಿನಗಳು ಚಲಿಸುತ್ತದೆ ಮತ್ತು ಆರು ನಿಲ್ದಾಣಗಳಲ್ಲಿ ನಿಲ್ಲುತ್ತದೆ. ನ್ಯೂ ಅಲಿಪುರ್ದೂರ್, ಕೊಕ್ರಜಾರ್, ನ್ಯೂ ಬೊಂಗೈಗಾಂವ್ ಮತ್ತು ಕಾಮಾಖ್ಯ, ಹಾಗೆಯೇ ನ್ಯೂ ಜಲ್ಪೈಗುರಿ ಮತ್ತು ಗುವಾಹಟಿಯಲ್ಲಿ ಜಂಕ್ಷನ್‌ಗಳ್ಲಿ ಇವುಗಳ ಸೇವೆ ಇದೆ.

ಇದನ್ನು ಓದಿ: Kerala Vande Bharat Express : ಕೇರಳದ ಮೊದಲ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಪ್ರಧಾನಿ ಮೋದಿ ಚಾಲನೆ

ರೈಲು ನ್ಯೂ ಜಲ್ಪೈಗುರಿಯಿಂದ ಬೆಳಿಗ್ಗೆ 6.10 ಕ್ಕೆ ಹೊರಟು ಮಧ್ಯಾಹ್ನ ಗುವಾಹಟಿಗೆ ತಲುಪುತ್ತದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಗುವಾಹಟಿಯಿಂದ ಸಂಜೆ 4.30 ಕ್ಕೆ ಹೊರಟು ನ್ಯೂ ಜಲ್ಪೈಗುರಿಗೆ ರಾತ್ರಿ 10.20ರ ಸುಮಾರಿಗೆ ತಲುಪಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:00 pm, Mon, 29 May 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ