AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರಮಿಸಿದ ಕಾರ್ಮಿಕರಿಗೆ ಪುಷ್ಪವೃಷ್ಟಿ ಮಾಡಿದ ಪ್ರಧಾನಿ ಮೋದಿ

ರಾಮಮಂದಿರದ ನಿರ್ಮಾಣಕ್ಕೆ ಶ್ರಮಿಸಿದ ಕಾರ್ಮಿಕರನ್ನು ಮರೆಯುವಂತಿಲ್ಲ. ಈ ಸುಂದರ ರಾಮಮಂದಿರ ನಿರ್ಮಾಣಕ್ಕೆ ಶ್ರಮಿಸಿದ ಎಲ್ಲ ಕಾರ್ಮಿಕರಿಗೂ ಪ್ರಧಾನಿ ಮೋದಿ ಅವರು ಪುಷ್ಪವೃಷ್ಟಿ ಮಾಡುವ ಮೂಲಕ ಅವರಿಗೆ ಧನ್ಯವಾದ ತಿಳಿಸಿದರು. ರಾಮನ ಎಲ್ಲ ಕೆಲಸದಲ್ಲೂ ಭಾಗವಹಿಸಿದ ಕಾರ್ಮಿಕರಿಗೆ ಮೋದಿ ಕೃತಜ್ಞತೆ ತಿಳಿಸಿದರು.

ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರಮಿಸಿದ ಕಾರ್ಮಿಕರಿಗೆ ಪುಷ್ಪವೃಷ್ಟಿ ಮಾಡಿದ ಪ್ರಧಾನಿ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Jan 22, 2024 | 4:56 PM

Share

ಅಯೋಧ್ಯೆ, ಜ.22: ಇಂದು ರಾಮ ಭಕ್ತರಿಗೆ ಪರಪುಣ್ಯ ಕಾಲ, 500 ವರ್ಷಗಳ ನಿರಂತರ ಹೋರಾಟ ಹಾಗೂ ಶ್ರಮದ ಫಲವಾಗಿ ಇಂದು ಅಯೋಧ್ಯೆ ರಾಮಮಂದಿರದಲ್ಲಿ (Ram Temple)  ರಾಮ ಲಲ್ಲಾನ ಪ್ರಾಣ ಪ್ರತಿಷ್ಠಪಾನೆಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ, ಹಿಂದೂ ಧಾರ್ಮಿಕ ವಿಧಿವಿಧಾನದಂತೆ ಬಾಲರಾಮ ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾರೆ. ಇದರ ನಡುವೆ ರಾಮಮಂದಿರದ ನಿರ್ಮಾಣಕ್ಕೆ ಶ್ರಮಿಸಿದ ಕಾರ್ಮಿಕರನ್ನು ಮರೆಯುವಂತಿಲ್ಲ. ಈ ಸುಂದರ ರಾಮಮಂದಿರ ನಿರ್ಮಾಣಕ್ಕೆ ಶ್ರಮಿಸಿದ ಎಲ್ಲ ಕಾರ್ಮಿಕರಿಗೂ ಪ್ರಧಾನಿ ಮೋದಿ ಅವರು ಪುಷ್ಪವೃಷ್ಟಿ ಮಾಡುವ ಮೂಲಕ ಅವರಿಗೆ ಧನ್ಯವಾದ ತಿಳಿಸಿದರು.

ರಾಮನ ಎಲ್ಲ ಕೆಲಸದಲ್ಲೂ ಭಾಗವಹಿಸಿದ ಕಾರ್ಮಿಕರಿಗೆ ಮೋದಿ ಕೃತಜ್ಞತೆ ತಿಳಿಸಿದರು. ಪ್ರಧಾನಿ ಮೋದಿ ಅವರು ಧಾರ್ಮಿಕ ವಿಧಿವಿಧಾನದ ಮೂಲಕ ರಾಮ ಲಲ್ಲಾನ ಪ್ರತಿಷ್ಠೆಯನ್ನು ಮಾಡಿದ್ದಾರೆ. ಈ ಕಾರ್ಯಕ್ರಮದ ನಂತರ ದೇಶದ ರಾಮಭಕ್ತರನ್ನುದ್ದೇಶಿ ಮಾತನಾಡಿದ್ದಾರೆ. ನಂತರ ವೇದಿಕೆಯ ಕಾರ್ಯಕ್ರಮ ಮುಗಿದ ನಂತರ ರಾಮಮಂದಿರ ಕಾರ್ಯಕ್ರಮಕ್ಕೆ ಬಂದಿದ್ದ ಅನೇಕ ಗಣ್ಯರನ್ನು ಭೇಟಿಯಾಗಿ ಅವರಿಗೂ ಧನ್ಯವಾದ ತಿಳಿಸಿದರು. ಅಲ್ಲಿಂದ ರಾಮಮಂದಿರ ನಿರ್ಮಾಣಕ್ಕಾಗಿ ಹಗಲು-ರಾತ್ರಿ ಎನ್ನದೇ ದುಡಿದ ಕಾರ್ಮಿಕರ ಮೇಲೆ ಪುಷ್ಪವೃಷ್ಟಿ ಮಾಡಿದರು.

ಇದನ್ನೂ ಓದಿ: ಸೂರ್ಯನ ಕಿರಣದ ಮೂಲಕ ಅಯೋಧ್ಯೆ ರಾಮಮಂದಿರದ ಚಿತ್ರ ಬಿಡಿಸಿದ ಮೈಸೂರು ಕಲಾವಿದ

ರಾಮಮಂದಿರದಲ್ಲಿ ಇನ್ನು ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಬೇರೆ ಬೇರೆ ರಾಜ್ಯದಿಂದ ತಂಡಗಳು ಕೂಡ ಬಂದಿದೆ. ಇನ್ನು ಮಂದಿರವನ್ನು ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾಗಿದೆ. ಇದರ ಪೂರ್ವ-ಪಶ್ಚಿಮ ಉದ್ದ 380 ಅಡಿ, ಅಗಲ 250 ಅಡಿ ಮತ್ತು ಎತ್ತರ 161 ಅಡಿ. ಇದು 392 ಕಂಬಗಳಿಂದ ಬೆಂಬಲಿತವಾಗಿದೆ ಮತ್ತು 44 ಬಾಗಿಲುಗಳನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ