AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹ್ಮದ್​ ಪಟೇಲ್​ ನಿಧನಕ್ಕೆ ಪ್ರಧಾನಿ ಸಂತಾಪ; ನಂಬಿಕಸ್ಥ ಒಡನಾಡಿಯನ್ನು ಕಳೆದುಕೊಂಡೆ ಎಂದ ಸೋನಿಯಾ ಗಾಂಧಿ

ಅಹ್ಮದ್​ ಪಟೇಲ್​ ಅಗಲಿಕೆಗೆ ರಾಷ್ಟ್ರಪತಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಪ್ರಮುಖ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅಹ್ಮದ್​ ಪಟೇಲ್​ ನಿಧನಕ್ಕೆ ಪ್ರಧಾನಿ ಸಂತಾಪ; ನಂಬಿಕಸ್ಥ ಒಡನಾಡಿಯನ್ನು ಕಳೆದುಕೊಂಡೆ ಎಂದ ಸೋನಿಯಾ ಗಾಂಧಿ
Lakshmi Hegde
| Edited By: |

Updated on:Nov 25, 2020 | 12:24 PM

Share

ದೆಹಲಿ: ಹಲವು ವರ್ಷಗಳ ಕಾಲ ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿ, ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ನಾಯಕ ಅಹ್ಮದ್ ಪಟೇಲ್​ ಇಂದು ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು.

ಅಹ್ಮದ್​ ಪಟೇಲ್​ ಅಗಲಿಕೆಗೆ ರಾಷ್ಟ್ರಪತಿ, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಪ್ರಮುಖ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ತೀಕ್ಷ್ಣ ಮತಿಯ ಅಹ್ಮದ್​ ಜೀ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು: ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ಅಹ್ಮದ್​ ಜೀ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ತಮ್ಮ ತೀಕ್ಷ್ಣ ಮತಿಯಿಂದಲೇ ಹೆಸರಾಗಿದ್ದ ಅವರು ಕಾಂಗ್ರೆಸ್​ ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪಟೇಲ್​ ಜಿ ಪುತ್ರ ಫೈಸಲ್​ ಅವರೊಂದಿಗೆ ಮಾತನಾಡಿ, ಸಾಂತ್ವನ ಹೇಳಿದ್ದೇನೆ. ಅಹ್ಮದ್​ ಪಟೇಲ್​ ಆತ್ಮ ಶಾಂತಿಯಲ್ಲಿ ನೆಲೆಸಲಿ ಎಂದಿದ್ದಾರೆ.

ನಂಬಿಕಸ್ಥ ಒಡನಾಡಿಯನ್ನು ಕಳೆದುಕೊಂಡಿದ್ದೇನೆ: ಆಪ್ತನನ್ನು ಕಳೆದುಕೊಂಡ ಸೋನಿಯಾ ಗಾಂಧಿಯವರು ಟ್ವೀಟ್ ಮಾಡಿ, ಇಡೀ ಜೀವನವನ್ನೇ ಕಾಂಗ್ರೆಸ್​ ಪಕ್ಷಕ್ಕಾಗಿ ಮುಡಿಪಾಗಿ ಇಟ್ಟಿದ್ದ ನನ್ನ ನಂಬಿಕಸ್ಥ ಸಹೋದ್ಯೋಗಿ, ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ನನ್ನ ಒಡನಾಡಿಯಾಗಿದ್ದ ಅವರ ಜಾಗವನ್ನು ಇನ್ಯಾರೂ ತುಂಬಲು ಸಾಧ್ಯವಿಲ್ಲ. ನಿಷ್ಠೆ, ಕರ್ತವ್ಯ ಬದ್ಧತೆ, ಔದಾರ್ಯ, ಮತ್ತೊಬ್ಬರಿಗೆ ಸಹಾಯ ಮಾಡುವ ಮನೋಭಾವ ಹೊಂದಿದ್ದ ಅಹ್ಮದ್ ಪಟೇಲ್​ ಉಳಿದವರಿಗಿಂತ ವಿಭಿನ್ನವಾಗಿದ್ದರು. ಅವರ ನಿಧನದಿಂದ ಶೋಕದಲ್ಲಿರುವ ಕುಟುಂಬಕ್ಕೆ ನನ್ನ ಸಾಂತ್ವನಗಳು. ಎಲ್ಲ ರೀತಿಯ ಬೆಂಬಲ, ಸಹಾಯವನ್ನೂ ನೀಡುತ್ತೇನೆ ಎಂದಿದ್ದಾರೆ.

ತುಂಬ ಚುರುಕಾದ ಯೋಜನಾ ಚತುರತೆ ಹೊಂದಿದ್ದ ಸಂಸದರಾಗಿದ್ದರು: ಸಂತಾಪ ಸೂಚಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ ಟ್ವೀಟ್​ ಮಾಡಿದ್ದು, ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್​ ಪಟೇಲ್​ ನಿಧನದ ಸುದ್ದಿ ಕೇಳಿ ದುಃಖವಾಗಿದೆ. ತುಂಬ ಚುರುಕಾದ ಸಂಸದರಾಗಿದ್ದರು. ಯೋಜನಾ ಚತುರತೆ ಮತ್ತು ಮಾಸ್​ ನಾಯಕನ ಮಿಶ್ರಿತ ಕೌಶಲ ಹೊಂದಿದ್ದರು. ತಮ್ಮ ಸ್ನೇಹಶೀಲ ವ್ಯಕ್ತಿತ್ವದಿಂದಾಗಿ ಬೇರೆ ಪಕ್ಷಗಳವರೊಂದಿಗೂ ಸ್ನೇಹ ಸಂಪಾದಿಸಿದ್ದರು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್​ ನಾಯಕರಾದ ಪಿ.ಚಿದಂಬರಂ, ಡಿ.ಕೆ.ಶಿವಕುಮಾರ್​, ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ, ದಿಗ್ವಿಜಯ ಸಿಂಗ್​ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶ

Published On - 11:28 am, Wed, 25 November 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!