AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹ್ಮದ್​ ಪಟೇಲ್​ ನಿಧನಕ್ಕೆ ಪ್ರಧಾನಿ ಸಂತಾಪ; ನಂಬಿಕಸ್ಥ ಒಡನಾಡಿಯನ್ನು ಕಳೆದುಕೊಂಡೆ ಎಂದ ಸೋನಿಯಾ ಗಾಂಧಿ

ಅಹ್ಮದ್​ ಪಟೇಲ್​ ಅಗಲಿಕೆಗೆ ರಾಷ್ಟ್ರಪತಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಪ್ರಮುಖ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅಹ್ಮದ್​ ಪಟೇಲ್​ ನಿಧನಕ್ಕೆ ಪ್ರಧಾನಿ ಸಂತಾಪ; ನಂಬಿಕಸ್ಥ ಒಡನಾಡಿಯನ್ನು ಕಳೆದುಕೊಂಡೆ ಎಂದ ಸೋನಿಯಾ ಗಾಂಧಿ
Lakshmi Hegde
| Updated By: ಸಾಧು ಶ್ರೀನಾಥ್​|

Updated on:Nov 25, 2020 | 12:24 PM

Share

ದೆಹಲಿ: ಹಲವು ವರ್ಷಗಳ ಕಾಲ ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿ, ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ನಾಯಕ ಅಹ್ಮದ್ ಪಟೇಲ್​ ಇಂದು ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು.

ಅಹ್ಮದ್​ ಪಟೇಲ್​ ಅಗಲಿಕೆಗೆ ರಾಷ್ಟ್ರಪತಿ, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಪ್ರಮುಖ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ತೀಕ್ಷ್ಣ ಮತಿಯ ಅಹ್ಮದ್​ ಜೀ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು: ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ಅಹ್ಮದ್​ ಜೀ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ತಮ್ಮ ತೀಕ್ಷ್ಣ ಮತಿಯಿಂದಲೇ ಹೆಸರಾಗಿದ್ದ ಅವರು ಕಾಂಗ್ರೆಸ್​ ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪಟೇಲ್​ ಜಿ ಪುತ್ರ ಫೈಸಲ್​ ಅವರೊಂದಿಗೆ ಮಾತನಾಡಿ, ಸಾಂತ್ವನ ಹೇಳಿದ್ದೇನೆ. ಅಹ್ಮದ್​ ಪಟೇಲ್​ ಆತ್ಮ ಶಾಂತಿಯಲ್ಲಿ ನೆಲೆಸಲಿ ಎಂದಿದ್ದಾರೆ.

ನಂಬಿಕಸ್ಥ ಒಡನಾಡಿಯನ್ನು ಕಳೆದುಕೊಂಡಿದ್ದೇನೆ: ಆಪ್ತನನ್ನು ಕಳೆದುಕೊಂಡ ಸೋನಿಯಾ ಗಾಂಧಿಯವರು ಟ್ವೀಟ್ ಮಾಡಿ, ಇಡೀ ಜೀವನವನ್ನೇ ಕಾಂಗ್ರೆಸ್​ ಪಕ್ಷಕ್ಕಾಗಿ ಮುಡಿಪಾಗಿ ಇಟ್ಟಿದ್ದ ನನ್ನ ನಂಬಿಕಸ್ಥ ಸಹೋದ್ಯೋಗಿ, ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ನನ್ನ ಒಡನಾಡಿಯಾಗಿದ್ದ ಅವರ ಜಾಗವನ್ನು ಇನ್ಯಾರೂ ತುಂಬಲು ಸಾಧ್ಯವಿಲ್ಲ. ನಿಷ್ಠೆ, ಕರ್ತವ್ಯ ಬದ್ಧತೆ, ಔದಾರ್ಯ, ಮತ್ತೊಬ್ಬರಿಗೆ ಸಹಾಯ ಮಾಡುವ ಮನೋಭಾವ ಹೊಂದಿದ್ದ ಅಹ್ಮದ್ ಪಟೇಲ್​ ಉಳಿದವರಿಗಿಂತ ವಿಭಿನ್ನವಾಗಿದ್ದರು. ಅವರ ನಿಧನದಿಂದ ಶೋಕದಲ್ಲಿರುವ ಕುಟುಂಬಕ್ಕೆ ನನ್ನ ಸಾಂತ್ವನಗಳು. ಎಲ್ಲ ರೀತಿಯ ಬೆಂಬಲ, ಸಹಾಯವನ್ನೂ ನೀಡುತ್ತೇನೆ ಎಂದಿದ್ದಾರೆ.

ತುಂಬ ಚುರುಕಾದ ಯೋಜನಾ ಚತುರತೆ ಹೊಂದಿದ್ದ ಸಂಸದರಾಗಿದ್ದರು: ಸಂತಾಪ ಸೂಚಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ ಟ್ವೀಟ್​ ಮಾಡಿದ್ದು, ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್​ ಪಟೇಲ್​ ನಿಧನದ ಸುದ್ದಿ ಕೇಳಿ ದುಃಖವಾಗಿದೆ. ತುಂಬ ಚುರುಕಾದ ಸಂಸದರಾಗಿದ್ದರು. ಯೋಜನಾ ಚತುರತೆ ಮತ್ತು ಮಾಸ್​ ನಾಯಕನ ಮಿಶ್ರಿತ ಕೌಶಲ ಹೊಂದಿದ್ದರು. ತಮ್ಮ ಸ್ನೇಹಶೀಲ ವ್ಯಕ್ತಿತ್ವದಿಂದಾಗಿ ಬೇರೆ ಪಕ್ಷಗಳವರೊಂದಿಗೂ ಸ್ನೇಹ ಸಂಪಾದಿಸಿದ್ದರು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್​ ನಾಯಕರಾದ ಪಿ.ಚಿದಂಬರಂ, ಡಿ.ಕೆ.ಶಿವಕುಮಾರ್​, ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ, ದಿಗ್ವಿಜಯ ಸಿಂಗ್​ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶ

Published On - 11:28 am, Wed, 25 November 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!