AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹ್ಮದ್​ ಪಟೇಲ್​ ನಿಧನಕ್ಕೆ ಪ್ರಧಾನಿ ಸಂತಾಪ; ನಂಬಿಕಸ್ಥ ಒಡನಾಡಿಯನ್ನು ಕಳೆದುಕೊಂಡೆ ಎಂದ ಸೋನಿಯಾ ಗಾಂಧಿ

ಅಹ್ಮದ್​ ಪಟೇಲ್​ ಅಗಲಿಕೆಗೆ ರಾಷ್ಟ್ರಪತಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಪ್ರಮುಖ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅಹ್ಮದ್​ ಪಟೇಲ್​ ನಿಧನಕ್ಕೆ ಪ್ರಧಾನಿ ಸಂತಾಪ; ನಂಬಿಕಸ್ಥ ಒಡನಾಡಿಯನ್ನು ಕಳೆದುಕೊಂಡೆ ಎಂದ ಸೋನಿಯಾ ಗಾಂಧಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on:Nov 25, 2020 | 12:24 PM

Share

ದೆಹಲಿ: ಹಲವು ವರ್ಷಗಳ ಕಾಲ ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿ, ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ನಾಯಕ ಅಹ್ಮದ್ ಪಟೇಲ್​ ಇಂದು ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು.

ಅಹ್ಮದ್​ ಪಟೇಲ್​ ಅಗಲಿಕೆಗೆ ರಾಷ್ಟ್ರಪತಿ, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಪ್ರಮುಖ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ತೀಕ್ಷ್ಣ ಮತಿಯ ಅಹ್ಮದ್​ ಜೀ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು: ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ಅಹ್ಮದ್​ ಜೀ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ತಮ್ಮ ತೀಕ್ಷ್ಣ ಮತಿಯಿಂದಲೇ ಹೆಸರಾಗಿದ್ದ ಅವರು ಕಾಂಗ್ರೆಸ್​ ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪಟೇಲ್​ ಜಿ ಪುತ್ರ ಫೈಸಲ್​ ಅವರೊಂದಿಗೆ ಮಾತನಾಡಿ, ಸಾಂತ್ವನ ಹೇಳಿದ್ದೇನೆ. ಅಹ್ಮದ್​ ಪಟೇಲ್​ ಆತ್ಮ ಶಾಂತಿಯಲ್ಲಿ ನೆಲೆಸಲಿ ಎಂದಿದ್ದಾರೆ.

ನಂಬಿಕಸ್ಥ ಒಡನಾಡಿಯನ್ನು ಕಳೆದುಕೊಂಡಿದ್ದೇನೆ: ಆಪ್ತನನ್ನು ಕಳೆದುಕೊಂಡ ಸೋನಿಯಾ ಗಾಂಧಿಯವರು ಟ್ವೀಟ್ ಮಾಡಿ, ಇಡೀ ಜೀವನವನ್ನೇ ಕಾಂಗ್ರೆಸ್​ ಪಕ್ಷಕ್ಕಾಗಿ ಮುಡಿಪಾಗಿ ಇಟ್ಟಿದ್ದ ನನ್ನ ನಂಬಿಕಸ್ಥ ಸಹೋದ್ಯೋಗಿ, ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ನನ್ನ ಒಡನಾಡಿಯಾಗಿದ್ದ ಅವರ ಜಾಗವನ್ನು ಇನ್ಯಾರೂ ತುಂಬಲು ಸಾಧ್ಯವಿಲ್ಲ. ನಿಷ್ಠೆ, ಕರ್ತವ್ಯ ಬದ್ಧತೆ, ಔದಾರ್ಯ, ಮತ್ತೊಬ್ಬರಿಗೆ ಸಹಾಯ ಮಾಡುವ ಮನೋಭಾವ ಹೊಂದಿದ್ದ ಅಹ್ಮದ್ ಪಟೇಲ್​ ಉಳಿದವರಿಗಿಂತ ವಿಭಿನ್ನವಾಗಿದ್ದರು. ಅವರ ನಿಧನದಿಂದ ಶೋಕದಲ್ಲಿರುವ ಕುಟುಂಬಕ್ಕೆ ನನ್ನ ಸಾಂತ್ವನಗಳು. ಎಲ್ಲ ರೀತಿಯ ಬೆಂಬಲ, ಸಹಾಯವನ್ನೂ ನೀಡುತ್ತೇನೆ ಎಂದಿದ್ದಾರೆ.

ತುಂಬ ಚುರುಕಾದ ಯೋಜನಾ ಚತುರತೆ ಹೊಂದಿದ್ದ ಸಂಸದರಾಗಿದ್ದರು: ಸಂತಾಪ ಸೂಚಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ ಟ್ವೀಟ್​ ಮಾಡಿದ್ದು, ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್​ ಪಟೇಲ್​ ನಿಧನದ ಸುದ್ದಿ ಕೇಳಿ ದುಃಖವಾಗಿದೆ. ತುಂಬ ಚುರುಕಾದ ಸಂಸದರಾಗಿದ್ದರು. ಯೋಜನಾ ಚತುರತೆ ಮತ್ತು ಮಾಸ್​ ನಾಯಕನ ಮಿಶ್ರಿತ ಕೌಶಲ ಹೊಂದಿದ್ದರು. ತಮ್ಮ ಸ್ನೇಹಶೀಲ ವ್ಯಕ್ತಿತ್ವದಿಂದಾಗಿ ಬೇರೆ ಪಕ್ಷಗಳವರೊಂದಿಗೂ ಸ್ನೇಹ ಸಂಪಾದಿಸಿದ್ದರು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್​ ನಾಯಕರಾದ ಪಿ.ಚಿದಂಬರಂ, ಡಿ.ಕೆ.ಶಿವಕುಮಾರ್​, ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ, ದಿಗ್ವಿಜಯ ಸಿಂಗ್​ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶ

Published On - 11:28 am, Wed, 25 November 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?