AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smart India Hackathon: ವಿದ್ಯಾರ್ಥಿಗಳನ್ನ ಉದ್ದೇಶಿಸಿ ಇಂದು ಪ್ರಧಾನಿ ಮೋದಿ ಭಾಷಣ!

ದೆಹಲಿ: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್. ಇಲ್ಲಿ ವಿದ್ಯಾರ್ಥಿಗಳಿಗೆ ದಿನನಿತ್ಯ ಜೀವನದಲ್ಲಿ ಎದುರಾಗೋ ಸಮಸ್ಯೆಗಳನ್ನ ಪರಿಹರಿಸೋ ಚಾಲೆಂಜ್ ನೀಡಲಾಗಿತ್ತು. ಅದರಂತೆ ವಿದ್ಯಾರ್ಥಿಗಳು ಅನೇಕ ಸಮಸ್ಯೆ ಹಾಗೂ ಸವಾಲುಗಳನ್ನ ಪರಿಹರಿಸಿದ್ದಾರೆ. ಇಂದು ಇದರ ಗ್ರ್ಯಾಂಡ್ ಫಿನಾಲೆ ನಡೆಯಲಿದ್ದು, ಸಂಜೆ 4:30ಕ್ಕೆ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ ನಡೆಸಲಿದ್ದಾರೆ. ಅಂದ ಹಾಗೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಮೂಲಕ ಅನ್ವೇಷಣೆ, ಸಮಸ್ಯೆ ಪರಿಹರಿಸೋ ಮನೋಭಾವ ಮತ್ತು ಔಟ್ ಆಫ್ ದಿ ಬಾಕ್ಸ್ ಆಲೋಚನೆ ಬೆಳೆಸುವುದೇ ಉದ್ದೇಶವಾಗಿದೆ. 2017ರಲ್ಲಿ […]

Smart India Hackathon: ವಿದ್ಯಾರ್ಥಿಗಳನ್ನ ಉದ್ದೇಶಿಸಿ ಇಂದು ಪ್ರಧಾನಿ ಮೋದಿ ಭಾಷಣ!
KUSHAL V
|

Updated on: Aug 01, 2020 | 7:37 AM

Share

ದೆಹಲಿ: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್. ಇಲ್ಲಿ ವಿದ್ಯಾರ್ಥಿಗಳಿಗೆ ದಿನನಿತ್ಯ ಜೀವನದಲ್ಲಿ ಎದುರಾಗೋ ಸಮಸ್ಯೆಗಳನ್ನ ಪರಿಹರಿಸೋ ಚಾಲೆಂಜ್ ನೀಡಲಾಗಿತ್ತು. ಅದರಂತೆ ವಿದ್ಯಾರ್ಥಿಗಳು ಅನೇಕ ಸಮಸ್ಯೆ ಹಾಗೂ ಸವಾಲುಗಳನ್ನ ಪರಿಹರಿಸಿದ್ದಾರೆ. ಇಂದು ಇದರ ಗ್ರ್ಯಾಂಡ್ ಫಿನಾಲೆ ನಡೆಯಲಿದ್ದು, ಸಂಜೆ 4:30ಕ್ಕೆ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ ನಡೆಸಲಿದ್ದಾರೆ.

ಅಂದ ಹಾಗೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಮೂಲಕ ಅನ್ವೇಷಣೆ, ಸಮಸ್ಯೆ ಪರಿಹರಿಸೋ ಮನೋಭಾವ ಮತ್ತು ಔಟ್ ಆಫ್ ದಿ ಬಾಕ್ಸ್ ಆಲೋಚನೆ ಬೆಳೆಸುವುದೇ ಉದ್ದೇಶವಾಗಿದೆ. 2017ರಲ್ಲಿ ಮೊದಲು 42 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ರು. 2018ರಲ್ಲಿ ಇದು ಒಂದು ಲಕ್ಷಕ್ಕೆ ಏರಿಕೆಯಾದ್ರೆ, 2019ರಲ್ಲಿ ಎರಡು ಲಕ್ಷಕ್ಕೆ ಏರಿಕೆಯಾಗಿತ್ತು.

ಆದ್ರೆ ಈ ವರ್ಷ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್​ನಲ್ಲಿ ಬರೋಬ್ಬರಿ ನಾಲ್ಕೂವರೆ ಲಕ್ಷ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ಆನ್​ಲೈನ್​ನಲ್ಲಿ ಗ್ರ್ಯಾಂಡ್ ಫಿನಾಲೆ ನಡೆಯಲಿದ್ದು, 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ರು. 243 ಹೇಳಿಕೆಗಳ ಪೈಕಿ 37 ಕೇಂದ್ರ ಸರ್ಕಾರದ ಇಲಾಖೆಗಳ, 17 ರಾಜ್ಯ ಸರ್ಕಾರದ ಮತ್ತು 20 ಕೈಗಾರಿಕೆಗಳ ಸಮಸ್ಯೆಗಳು ಸೇರಿವೆ. ಇಂಥ ಕಠಿಣ ಸಮಸ್ಯೆ ಪರಿಹರಿಸೋ ವಿದ್ಯಾರ್ಥಿಗಳ ಜೊತೆ ಮೋದಿ ಸಂವಾದ ನಡೆಸಲಿದ್ದಾರೆ.

ಒಟ್ನಲ್ಲಿ, ಪ್ರಧಾನಿ ಮೋದಿ ವಿದ್ಯಾರ್ಥಿಗಳಿಗೆ ಏನ್ ಹೇಳ್ತಾರೆ? ಹೇಗೆ ವಿದ್ಯಾರ್ಥಿಗಳಿಗೆ ಹುರಿದುಂಬಿಸ್ತಾರೆ ಅನ್ನೋದನ್ನ ತಿಳೀಬೇಕು ಅಂದ್ರೆ ಸಂಜೆ 4:30ರವರೆಗೆ ಕಾಯಲೇಬೇಕು.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ