AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mann ki Baat: ಇಂದು ಪ್ರಧಾನಿ ಮೋದಿ ಮನ್​ ಕೀ ಬಾತ್​; ಎಲ್ಲೆಲ್ಲಿ ವೀಕ್ಷಿಸಬಹುದು? ಪ್ರಸಾರದ ಸಮಯ ಯಾವುದು? ಇಲ್ಲಿದೆ ಮಾಹಿತಿ

PM Narendra Modi: ಕಳೆದ ತಿಂಗಳಿನ ಮನ್​ ಕೀ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಲಿಂಪಿಕ್ಸ್​ ಪದಕ ವಿಜೇತರನ್ನು ಶ್ಲಾಘಿಸಿದ್ದರು. ಕ್ರೀಡೆಗಳ ಬಗೆಗಿನ ಉತ್ಸಾಹ , ಹಾಕಿ ಮಾಂತ್ರಿಕ ಧ್ಯಾನ್​ ಚಾಂದ್​ರಿಗೆ ಸಲ್ಲಿಸುವ ಗೌರವ ಎಂದು ಹೇಳಿದ್ದರು.

Mann ki Baat: ಇಂದು ಪ್ರಧಾನಿ ಮೋದಿ ಮನ್​ ಕೀ ಬಾತ್​; ಎಲ್ಲೆಲ್ಲಿ ವೀಕ್ಷಿಸಬಹುದು? ಪ್ರಸಾರದ ಸಮಯ ಯಾವುದು? ಇಲ್ಲಿದೆ ಮಾಹಿತಿ
ನರೇಂದ್ರ ಮೋದಿ
TV9 Web
| Edited By: |

Updated on: Sep 26, 2021 | 9:04 AM

Share

ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ 11ಗಂಟೆಗೆ ತಮ್ಮ ರೇಡಿಯೋ ಕಾರ್ಯಕ್ರಮ ಮನ್​ ಕೀ ಬಾತ್(Mann ki Baat)​ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದು ಮನ್​​ ಕೀ ಬಾತ್​ 81ನೇ ಆವೃತ್ತಿಯಾಗಿದೆ. ಮನ್​ ಕೀ ಬಾತ್​​ನ್ನು ಆಲ್​ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಎಲ್ಲ ನೆಟ್​​ವರ್ಕ್​​​ನಲ್ಲೂ ಪ್ರಸಾರ ಮಾಡಲಾಗುತ್ತದೆ. ಹಾಗೇ, ಆಲ್​ ಇಂಡಿಯಾ ರೇಡಿಯೋದ ವೆಬ್​ಸೈಟ್​ www.newsonair.com ಮತ್ತು ಮೊಬೈಲ್​ ಆ್ಯಪ್​​  newsonair ನಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಹಾಗೇ, ಆಲ್​ ಇಂಡಿಯಾ ರೇಡಿಯೋ, ಡಿಡಿ ನ್ಯೂಸ್​, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್​ ಚಾನಲ್​ಗಳಲ್ಲೂ ಮನ್​ ಕಿ ಬಾತ್​ ನೇರಪ್ರಸಾರಗೊಳ್ಳಲಿದೆ. ಇನ್ನು ಇಂದು ರಾತ್ರಿ 8ರ ಹೊತ್ತಿಗೆ ಆಲ್​ ಇಂಡಿಯಾ ರೇಡಿಯೋದಲ್ಲಿ ಮನ್​ ಕೀ ಬಾತ್​ನ್ನು ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಮರುಪ್ರಸಾರ ಮಾಡಲಾಗುತ್ತದೆ. 

ಕಳೆದ ತಿಂಗಳಿನ ಮನ್​ ಕೀ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಒಲಿಂಪಿಕ್ಸ್​ ಪದಕ ವಿಜೇತರನ್ನು ಶ್ಲಾಘಿಸಿದ್ದರು. ಕ್ರೀಡೆಗಳ ಬಗೆಗಿನ ಉತ್ಸಾಹ , ಹಾಕಿ ಮಾಂತ್ರಿಕ ಧ್ಯಾನ್​ ಚಾಂದ್​ರಿಗೆ ಸಲ್ಲಿಸುವ ಗೌರವ ಎಂದು ಹೇಳಿದ್ದರು. ಒಲಿಂಪಿಕ್ಸ್​​ನಲ್ಲಿ 40 ವರ್ಷಗಳ ನಂತರ ನಾವು ಹಾಕಿಯಲ್ಲಿ ಪದಕ ಗೆದ್ದಿದ್ದೇವೆ. ಮೇಜರ್ ಧ್ಯಾನ್​ಚಂದ್​ ಅವರು ಅದೆಷ್ಟು ಖುಷಿಯಾಗಿರಬಹುದು ಎಂದು ಕಲ್ಪಿಸಿಕೊಳ್ಳಿ ಎಂದು ಹೇಳಿದ್ದರು. ಹಾಗೇ, ಈಗಿನ ಪೀಳಿಗೆ ಬದಲಾಗುತ್ತಿದೆ. ಸದಾ ಹೊಸದಕ್ಕೆ ತೆರೆದುಕೊಳ್ಳುತ್ತಿದೆ. ಯುವಜನರು ರಿಸ್ಕ್​ ತೆಗೆದುಕೊಳ್ಳಲು ಮುಂದಡಿ ಇಡುತ್ತಿದ್ದಾರೆ. ತಮ್ಮ ಕನಸುಗಳಿಗೆ ರೆಕ್ಕೆ ಕಟ್ಟಿಕೊಳ್ಳುತ್ತಿದ್ದಾರೆ. ಹೊಸಹೊಸ ವಲಯಗಳಲ್ಲಿ ಹೆಜ್ಜೆ ಇಡುತ್ತಿದ್ದಾರೆ ಎಂದೂ ಹೇಳಿದ್ದರು.

ಇದನ್ನೂ ಓದಿ: Vastu Tips: ಧನ ಲಕ್ಷ್ಮೀ ಖುಲಾಯಿಸಬೇಕು ಅಂದರೆ ಮನೆಯಲ್ಲಿ ತಿಜೋರಿ ಇಡುವುದು ಎಲ್ಲಿ ಎಂಬುದನ್ನು ತಿಳಿದುಕೊಳ್ಳೀ

ಒಂದೇ ಒಂದು ಫೋಟೋದಿಂದ ಶಮಿತಾ ಶೆಟ್ಟಿ-ರಾಕೇಶ್​ ಬಾಪಟ್​ ಪ್ರೇಮ್​​ ಕಹಾನಿ ಬಯಲು; ಇಬ್ಬರ ಕಥೆ ಮುಂದೇನು?

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!