75th Indian Independence Day: 100ನೇ ಸ್ವಾತಂತ್ರ್ಯ ದಿನಾಚರಣೆ ಹೊತ್ತಿಗೆ ಆದರ್ಶ ಭಾರತ ನಿರ್ಮಾಣದ ಗುರಿ: ಪ್ರಧಾನಿ ಮೋದಿ

PM Narendra Modi: ನಾವು ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆಯನ್ನು ಪರಿಚಯಿಸಲಿದ್ದೇವೆ. ನಮ್ಮ ದೇಶದ ಮೂಲಸೌಕರ್ಯ, ಸಾರಿಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈ ಗತಿಶಕ್ತಿ ಯೋಜನೆ ಒಂದು ಮಾಸ್ಟರ್​ ಪ್ಲ್ಯಾನ್​ ಆಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

75th Indian Independence Day: 100ನೇ ಸ್ವಾತಂತ್ರ್ಯ ದಿನಾಚರಣೆ ಹೊತ್ತಿಗೆ ಆದರ್ಶ ಭಾರತ ನಿರ್ಮಾಣದ ಗುರಿ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
| Updated By: Lakshmi Hegde

Updated on:Aug 15, 2021 | 8:50 AM

75ನೇ ಸ್ವಾತಂತ್ರ್ತೋತ್ಸವ (75th Independence Day0 ನಿಮಿತ್ತ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕೆಂಪು ಕೋಟೆ (Red Fort)ಯ ಮೇಲೆ ಧ್ವಜಾರೋಹಣ ಮಾಡಿ, ನಂತರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಈ ದಿನ ನಮ್ಮ ಮಹಾನ್​ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಂಡು, ಅವರಿಗೆ ಗೌರವ ಸಲ್ಲಿಸುವ ದಿನ. ಭಾರತೀಯರ ಪಾಲಿಗೆ ವಿಶೇಷ ದಿನವಾದ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಹೇಳಲು ಬಯಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಹಾಗೇ, ಸ್ವಾತಂತ್ರ್ಯ ಹೋರಾಟಗಾರರಾದ ಗಾಂಧೀಜಿ, ಸುಭಾಷ್​ಚಂದ್ ಬೋಸ್​, ಭಗತ್​ ಸಿಂಗ್​,  ಚಂದ್ರಶೇಖರ್ ಆಜಾದ್, ರಾಣಿ ಲಕ್ಷ್ಮೀಬಾಯಿ, ಕಿತ್ತೂರು ರಾಣಿ ಚೆನ್ನಮ್ಮರನ್ನು ನೆನೆದರು. ಹಾಗೇ, ಇಂದಿನ ಭಾಷಣದಲ್ಲಿ ಮೊದಲ ಪ್ರಧಾನಿ ಜವಾಹರ್​ ಲಾಲ್​ ನೆಹರೂ ಅವರ ಹೆಸರನ್ನೂ ಉಲ್ಲೇಖಿಸಿದ್ದಾರೆ.

ಕೊವಿಡ್​ 19 ಸಂದರ್ಭದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ,  ದೇಶದಲ್ಲಿ ಕೊರೊನಾ ಸಂಕಷ್ಟವಿದ್ದ ಸಮಯದಲ್ಲಿ ನಮ್ಮ ವೈದ್ಯರುಗಳು, ಪ್ಯಾರಾಮೆಡಿಕಲ್ಸ್​ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರು  ಅವಿರತವಾಗಿ ಅದರ ವಿರುದ್ಧ ಹೋರಾಡಿದ್ದಾರೆ. ವಿಜ್ಞಾನಿಗಳು ಲಸಿಕೆ ಅಭಿವೃದ್ಧಿಪಡಿಸಿದ್ದಾರೆ. ಕೋಟ್ಯಂತರ ನಾಗರಿಕರು ಈ ಸಾಂಕ್ರಾಮಿಕ ವಿರುದ್ಧ ಹೋರಾಡಲು ತಮ್ಮದೇ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಕಷ್ಟದ ಕಾಲದಲ್ಲಿ ಮತ್ತೊಬ್ಬರಿಗೆ ಸೇವೆ ಮಾಡಿದ ಪ್ರತಿಯೊಬ್ಬರನ್ನೂ ಶ್ಲಾಘಿಸಲೇಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಆದರ್ಶ್ ಭಾರತ ನಿರ್ಮಾಣ ಗುರಿ ನಾವು ನೂರನೇ ವರ್ಷದ ಸ್ವಾತಂತ್ರ್ಯ ದಿನ ಆಚರಣೆಗಾಗಿ ಆದರ್ಶ ಭಾರತ ನಿರ್ಮಾಣದ ಗುರಿ ಹೊಂದಿದ್ದೇವೆ. 100ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹೊತ್ತಿಗೆ, ಒಗ್ಗಟ್ಟು, ಉತ್ತಮ ಆಡಳಿತ, ಶಿಸ್ತನ್ನು ಅಳವಡಿಸಿಕೊಂಡಿರುವ, ಜಗತ್ತಿನೊಂದಿಗೆ ಸಮಾನಾಂತರವಾಗಿ ಹೆಜ್ಜೆ ಹಾಕುವ ಭಾರತ ನಿರ್ಮಾಣ ನಮ್ಮ ಗುರಿಯಾಗಿದೆ. 100ನೇ ವರ್ಷದ ಸ್ವಾತಂತ್ರ್ಯ ದಿನ ಆಚರಿಸಲು ಇನ್ನೂ 25 ವರ್ಷ ಬಾಕಿ ಇದೆ. ಆದರೆ ನಾವು ಅಲ್ಲಿಯವರೆಗೆ ಕಾಯಬೇಕಿಲ್ಲ. ಈಗಿನಿಂದಲೇ ಸಬ್​ ಕಾ ಸಾಥ್​, ಸಬ್​ ಕಾ ವಿಕಾಸ್​ ಯೋಜನೆಯಡಿ, ಎಲ್ಲರೂ ಒಟ್ಟಾಗಿ ಭಾರತದಲ್ಲಿ ಸಕಾರಾತ್ಮಕ ಬದಾಲವಣೆ ತರಲು ಮುಂದಾಗೋಣ. ಆದರ್ಶ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಪ್ರಯತ್ನ ಹಾಕಿದರೆ ಖಂಡಿತ ನಮ್ಮ ಗುರಿ ತಲುಪುತ್ತೇವೆ ಎಂದರು.

ಪ್ರತಿ ರಾಷ್ಟ್ರಕ್ಕೂ ಅದರ ಅಭಿವೃದ್ಧಿ ಪಯಣದಲ್ಲಿ, ಹೊಸ ಗುರಿಯೊಂದಿಗೆ ತನ್ನನ್ನು ತಾನು ವ್ಯಾಖ್ಯಾನಿಸಿಕೊಳ್ಳುವ ಸಮಯ ಬರುತ್ತದೆ. ಆಗ ಹೊಸ ನಿರ್ಣಯಗಳು, ಅಭಿವೃದ್ಧಿ ಕಾರ್ಯಗಳೊಂದಿಗೆ ಅದು ಮುಂದಡಿ ಇಡಬೇಕು. ಆ ಕಾಲವೀಗ ಭಾರತಕ್ಕೆ ಬಂದಿದೆ. ಎಲ್ಲರೂ ಒಗ್ಗಟ್ಟಾಗಿ ಭಾರತದ ಅಭಿವೃದ್ಧಿ ಪಯಣಕ್ಕೆ ಒಂದು ಹೊಸ ಮೈಲುಗಲ್ಲು ಹಾಕೋಣ ಎಂದು ಹೇಳಿದರು.

ಪರಿಪೂರ್ಣತೆ ಗುರಿಯಾಗಬೇಕು.. ನಾವೀಗ ದೇಶವನ್ನು ಪರಿಪೂರ್ಣತೆಗೆ ಒಯ್ಯಬೇಕು. ಶೇ. 100ರಷ್ಟು ಹಳ್ಳಿಗಳಿಗೂ ರಸ್ತೆ ನಿರ್ಮಾಣವಾಗಬೇಕು, ಶೇ.100 ರಷ್ಟು ಕುಟುಂಬಗಳೂ ಬ್ಯಾಂಕ್​ ಅಕೌಂಟ್​ ಹೊಂದಬೇಕು. ನೂರಕ್ಕೆ ನೂರು ಪರ್ಸಂಟ್​ ಫಲಾನುಭವಿಗಳೂ ಆಯುಷ್ಮಾನ್​ ಭಾರತ್​ ಕಾರ್ಡ್​ ಹೊಂದಬೇಕು. ಉಜ್ವಲಾ ಯೋಜನೆಯಡಿಯ ಅರ್ಹರೆಲ್ಲರೂ ಎಲ್​ಪಿಜಿ ಗ್ಯಾಸ್​ ಸಂಪರ್ಕ ಹೊಂದುವಂತಾಗಬೇಕು ಎಂದು ಪ್ರಧಾನಿ ಹೇಳಿದರು.

ಗತಿ ಶಕ್ತಿ ಯೋಜನೆ ಪರಿಚಯ ನಾವು ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆಯನ್ನು ಪರಿಚಯಿಸಲಿದ್ದೇವೆ. ನಮ್ಮ ದೇಶದ ಮೂಲಸೌಕರ್ಯ, ಸಾರಿಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈ ಗತಿಶಕ್ತಿ ಯೋಜನೆ ಒಂದು ಮಾಸ್ಟರ್​ ಪ್ಲ್ಯಾನ್​ ಆಗಲಿದೆ. ಇದು 100 ಕೋಟಿ ರೂಪಾಯಿಗಳ ಪ್ರಾಜೆಕ್ಟ್​ ಆಗಿದ್ದು, ಉದ್ಯೋಗ ಸೃಷ್ಟಿಸುತ್ತದೆ. ಹೊಸಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ. ಅಭಿವೃದ್ಧಿ ಪಥದಲ್ಲಿರುವ ಎಲ್ಲ ಅಡೆತಡೆಗಳನ್ನೂ ಇದು ತೊಡೆದುಹಾಕುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Azadi Ka Amrut Mahotsav: ಕಾರವಾರದಲ್ಲಿ ಸ್ವಾತಂತ್ರ್ಯ ಹೋರಾಟ; ಇತಿಹಾಸದ ರೋಚಕ ಕಥೆ

ನಿವೃತ್ತ ಸರ್ಕಾರಿ ಅಧಿಕಾರಿ ಕುಟುಂಬಸ್ಥರಿಂದ ಗೂಂಡಾಗಿರಿ; ವಂಚನೆ ದೂರು ನೀಡಿದ್ದಕ್ಕೆ ಯುವಕನ ಮೇಲೆ ಹಲ್ಲೆ

Published On - 8:10 am, Sun, 15 August 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ