AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಹಂತದಲ್ಲಿ.. ಪ್ರಧಾನಿ ನರೇಂದ್ರ ಮೋದಿಗೂ ಕೊರೊನಾ ಲಸಿಕೆ!

ಸರ್ಕಾರದ ಉನ್ನತ ಮೂಲಗಳು ತಿಳಿಸಿರುವ ಮಾಹಿತಿ ಪ್ರಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ಸಂದರ್ಭದಲ್ಲಿ ಲಸಿಕೆ ಪಡೆಯಲಿದ್ದಾರೆ.

ಎರಡನೇ ಹಂತದಲ್ಲಿ.. ಪ್ರಧಾನಿ ನರೇಂದ್ರ ಮೋದಿಗೂ ಕೊರೊನಾ ಲಸಿಕೆ!
ಪ್ರಾತಿನಿ
Skanda
|

Updated on: Jan 21, 2021 | 11:56 AM

Share

ದೆಹಲಿ: ದೇಶದಲ್ಲಿ ಮೊದಲ ಹಂತದ ಕೊರೊನಾ ಲಸಿಕೆ ವಿತರಣೆ ನಿರ್ದಿಷ್ಟ ಸಮಯದಲ್ಲಿ ನಿರೀಕ್ಷಿತ ಗುರಿ ತಲುಪುತ್ತಿಲ್ಲ. ಹಲವೆಡೆ ಲಸಿಕೆ ಸ್ವೀಕರಿಸಲು ಹೆಸರು ನೋಂದಾಯಿಸಿಕೊಂಡಿದ್ದ ಸ್ವಯಂ ಸೇವಕರು ಲಸಿಕೆ ಪಡೆಯಲು ಮುಂದಾಗುತ್ತಿಲ್ಲ. ಏತನ್ಮಧ್ಯೆ ಬೇರೆ ದೇಶಗಳ ಮುಖಂಡರು ಮೊದಲು ತಾವೇ ಲಸಿಕೆ ಸ್ವೀಕರಿಸಿ ಜನರಿಗೆ ಧೈರ್ಯ ತುಂಬಿದ್ದಾರೆ, ಭಾರತದಲ್ಲಿ ಹೀಗೇಕೆ ಆಗುತ್ತಿಲ್ಲ? ಎಂಬ ಪ್ರಶ್ನೆಗಳೂ ಮೂಡಿದ್ದವು.

ಇದೀಗ ಸರ್ಕಾರದ ಉನ್ನತ ಮೂಲಗಳು ತಿಳಿಸಿರುವ ಮಾಹಿತಿ ಪ್ರಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ಸಂದರ್ಭದಲ್ಲಿ ಲಸಿಕೆ ಪಡೆಯಲಿದ್ದಾರೆ. ಅವರೊಂದಿಗೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಸಹ ಕೊರೊನಾ ಲಸಿಕೆ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಜನವರಿ 16ರಂದು ಮೊದಲ ಹಂತದ ಕೊರೊನಾ ಲಸಿಕೆ ವಿತರಣೆ ಆರಂಭಿಸಿದ ನಂತರ ದೇಶದ ಜನರಲ್ಲಿ ಮನವಿ ಮಾಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಲಸಿಕೆಯನ್ನು ಕಡೆಗಣಿಸದಂತೆ ಮನವಿ ಮಾಡಿದ್ದರು. ಸದ್ಯ ಕೇಂದ್ರಾರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಇದುವರೆಗೆ ಮೊದಲ ಹಂತದ ಕೊರೊನಾ ಲಸಿಕೆ ವಿತರಣೆಯಲ್ಲಿ ದೇಶಾದ್ಯಂತ 1,91,181 ಮಂದಿ ಕೊರೊನಾ ಲಸಿಕೆ ಸ್ವೀಕರಿಸಿದ್ದಾರೆ. ಎರಡನೇ ಹಂತದ ಲಸಿಕೆ ವಿತರಣೆ ಮುಗಿಯುವ ವೇಳೆ ದೇಶದ 30 ಕೋಟಿ ಜನರಿಗೆ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ.

ವ್ಯಾಕ್ಸಿನ್ ವಿಚಾರದಲ್ಲಿ ಸರ್ಕಾರದ ಲೆಕ್ಕಾಚಾರ ಉಲ್ಟಾ.. ಹೆಲ್ತ್ ವಾರಿಯರ್ಸ್‌ಗೆ ಬಂದ ವ್ಯಾಕ್ಸಿನ್ ಫ್ರಂಟ್‌ಲೈನ್ ವಾರಿಯರ್ಸ್‌ಗೆ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ