AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಹಂತದಲ್ಲಿ.. ಪ್ರಧಾನಿ ನರೇಂದ್ರ ಮೋದಿಗೂ ಕೊರೊನಾ ಲಸಿಕೆ!

ಸರ್ಕಾರದ ಉನ್ನತ ಮೂಲಗಳು ತಿಳಿಸಿರುವ ಮಾಹಿತಿ ಪ್ರಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ಸಂದರ್ಭದಲ್ಲಿ ಲಸಿಕೆ ಪಡೆಯಲಿದ್ದಾರೆ.

ಎರಡನೇ ಹಂತದಲ್ಲಿ.. ಪ್ರಧಾನಿ ನರೇಂದ್ರ ಮೋದಿಗೂ ಕೊರೊನಾ ಲಸಿಕೆ!
ಪ್ರಾತಿನಿ
Skanda
|

Updated on: Jan 21, 2021 | 11:56 AM

Share

ದೆಹಲಿ: ದೇಶದಲ್ಲಿ ಮೊದಲ ಹಂತದ ಕೊರೊನಾ ಲಸಿಕೆ ವಿತರಣೆ ನಿರ್ದಿಷ್ಟ ಸಮಯದಲ್ಲಿ ನಿರೀಕ್ಷಿತ ಗುರಿ ತಲುಪುತ್ತಿಲ್ಲ. ಹಲವೆಡೆ ಲಸಿಕೆ ಸ್ವೀಕರಿಸಲು ಹೆಸರು ನೋಂದಾಯಿಸಿಕೊಂಡಿದ್ದ ಸ್ವಯಂ ಸೇವಕರು ಲಸಿಕೆ ಪಡೆಯಲು ಮುಂದಾಗುತ್ತಿಲ್ಲ. ಏತನ್ಮಧ್ಯೆ ಬೇರೆ ದೇಶಗಳ ಮುಖಂಡರು ಮೊದಲು ತಾವೇ ಲಸಿಕೆ ಸ್ವೀಕರಿಸಿ ಜನರಿಗೆ ಧೈರ್ಯ ತುಂಬಿದ್ದಾರೆ, ಭಾರತದಲ್ಲಿ ಹೀಗೇಕೆ ಆಗುತ್ತಿಲ್ಲ? ಎಂಬ ಪ್ರಶ್ನೆಗಳೂ ಮೂಡಿದ್ದವು.

ಇದೀಗ ಸರ್ಕಾರದ ಉನ್ನತ ಮೂಲಗಳು ತಿಳಿಸಿರುವ ಮಾಹಿತಿ ಪ್ರಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ಸಂದರ್ಭದಲ್ಲಿ ಲಸಿಕೆ ಪಡೆಯಲಿದ್ದಾರೆ. ಅವರೊಂದಿಗೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಸಹ ಕೊರೊನಾ ಲಸಿಕೆ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಜನವರಿ 16ರಂದು ಮೊದಲ ಹಂತದ ಕೊರೊನಾ ಲಸಿಕೆ ವಿತರಣೆ ಆರಂಭಿಸಿದ ನಂತರ ದೇಶದ ಜನರಲ್ಲಿ ಮನವಿ ಮಾಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಲಸಿಕೆಯನ್ನು ಕಡೆಗಣಿಸದಂತೆ ಮನವಿ ಮಾಡಿದ್ದರು. ಸದ್ಯ ಕೇಂದ್ರಾರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಇದುವರೆಗೆ ಮೊದಲ ಹಂತದ ಕೊರೊನಾ ಲಸಿಕೆ ವಿತರಣೆಯಲ್ಲಿ ದೇಶಾದ್ಯಂತ 1,91,181 ಮಂದಿ ಕೊರೊನಾ ಲಸಿಕೆ ಸ್ವೀಕರಿಸಿದ್ದಾರೆ. ಎರಡನೇ ಹಂತದ ಲಸಿಕೆ ವಿತರಣೆ ಮುಗಿಯುವ ವೇಳೆ ದೇಶದ 30 ಕೋಟಿ ಜನರಿಗೆ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ.

ವ್ಯಾಕ್ಸಿನ್ ವಿಚಾರದಲ್ಲಿ ಸರ್ಕಾರದ ಲೆಕ್ಕಾಚಾರ ಉಲ್ಟಾ.. ಹೆಲ್ತ್ ವಾರಿಯರ್ಸ್‌ಗೆ ಬಂದ ವ್ಯಾಕ್ಸಿನ್ ಫ್ರಂಟ್‌ಲೈನ್ ವಾರಿಯರ್ಸ್‌ಗೆ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ