AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ 80 ಕೋಟಿ ಬಡವರಿಗೆ ಮೇ ಮತ್ತು ಜೂನ್​ ಉಚಿತ ಆಹಾರಧಾನ್ಯ ವಿತರಣೆ: ರೂ 26000 ಕೋಟಿ ಹಣ ನೀಡಿಕೆ-ಪ್ರಧಾನಿ ನರೇಂದ್ರ ಮೋದಿ

Free Food Grains: ಮೇ ಮತ್ತು ಜೂನ್ ತಿಂಗಳು, 5 ಕೆಜಿ ಉಚಿತ ಆಹಾರ ಧಾನ್ಯಗಳನ್ನು ಬಡವರಿಗೆ ನೀಡಲಾಗುವುದು. ಉಚಿತ ಆಹಾರ ಧಾನ್ಯಗಳನ್ನು ಪಡೆಯಲು ಸುಮಾರು 80 ಕೋಟಿ ಫಲಾನುಭವಿಗಳು ಇದ್ದಾರೆ.

ದೇಶದ 80 ಕೋಟಿ ಬಡವರಿಗೆ ಮೇ ಮತ್ತು ಜೂನ್​ ಉಚಿತ ಆಹಾರಧಾನ್ಯ ವಿತರಣೆ: ರೂ 26000 ಕೋಟಿ ಹಣ ನೀಡಿಕೆ-ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
ಡಾ. ಭಾಸ್ಕರ ಹೆಗಡೆ
| Updated By: Digi Tech Desk

Updated on:Apr 23, 2021 | 3:58 PM

ಕಳೆದ ವರ್ಷ ಲಾಕ್​ಡೌನ್​ ಮಾಡಿದಾಗ, ಬಡವರು ಮತ್ತು ದಿನಗೂಲಿ ಕಾರ್ಮಿಕರಿಗೆ ಆದ ಸಂಕಷ್ಟವನ್ನು ಗಮನದಲ್ಲಿಟ್ಟಕೊಂಡು ಕೇಂದ್ರ ಸರಕಾರ ಮತ್ತೆ ಈ ಬಾರಿ ಕೂಡ  ಉಚಿತ ಆಹಾರ ಧಾನ್ಯ ನೀಡಲು ನಿರ್ಧರಿಸಿದೆ. ಪ್ರಧಾನಿ ಕಾರ್ಯಲಯ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದೆ. ಕಳೆದ ವರ್ಷ ಒಮ್ಮೆಲೆ ಲಾಕ್​ಡೌನ್​ ಮಾಡಿದ ಕಾರಣಕ್ಕಾಗಿ ಸಾವಿರಾರು ಜನ ಹಸಿವಿನಿಂದ ನರಳುವಂತಾಯಿತು. ಈ ಬಾರಿ ಕೇಂದ್ರ ಸರಕಾರ ಲಾಕ್​ಡೌನ್​ ಹಾಕದಿದ್ದರೂ, ಹಲವು ರಾಜ್ಯಗಳು ಕರ್ಫ್ಯೂ ಹೇರಿವೆ. ದೆಹಲಿಲಾಕ್​ಡೌನ್​ ಹೇರಿದೆ. ಮಹಾರಾಷ್ಟ್ರ ಈ ಕುರಿತು ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಬಡವರು ಮತ್ತು ಕೂಲಿ ಕಾರ್ಮಿಕರಿಗೆ ತೊಂದರೆ ಆಗಬಾರದೆಂದು ಎರಡು ತಿಂಗಳು ಉಚಿತವಾಗಿ ಆಹಾರ ಧಾನ್ಯ ನೀಡಲು ನಿರ್ಧರಿಸಿದೆ.   

ಮೇ ಮತ್ತು ಜೂನ್  ಪಿಎಂ ಗರಿಬ್ ಕಲ್ಯಾಣ್ ಆನ್ ಯೋಜನೆ ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳನ್ನು ನೀಡಲು ಭಾರತ ಸರ್ಕಾರ ನಿರ್ಧರಿಸಿದ್ದು, ಮೇ ಮತ್ತು ಜೂನ್ 2021 ಕ್ಕೆ 5 ಕೆಜಿ ಉಚಿತ ಆಹಾರ ಧಾನ್ಯಗಳನ್ನು ಬಡವರಿಗೆ ನೀಡಲಾಗುವುದು. ಉಚಿತ ಆಹಾರ ಧಾನ್ಯಗಳನ್ನು ಪಡೆಯಲು ಸುಮಾರು 80 ಕೋಟಿ ಫಲಾನುಭವಿಗಳು ಇದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಕರೋನಾ ವೈರಸ್‌ನ ಎರಡನೇ ಅಲೆಯನ್ನು ದೇಶ ಎದುರಿಸುತ್ತಿರುವಾಗ ದೇಶದ ಬಡವರಿಗೆ ಪೌಷ್ಠಿಕಾಂಶದ ಬೆಂಬಲ ನೀಡಬೇಕಾದುದು ನಮ್ಮ ಕರ್ತವ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕೇಂದ್ರ ಸರಕಾರ ಈ ಕಾರ್ಯಕ್ರಮಕ್ಕೆ ರೂ 26,000 ಕೋಟಿ ನೀಡಲು ನಿರ್ಧರಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ ಎಂದು ಅವರ ಕಾರ್ಯಾಲಯ ಹೇಳಿದೆ. ಕಳೆದ ವರ್ಷ ಈ ಕುರಿತು ಯಾವ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಪ್ರಧಾನಿ ಈ ಬಾರಿ ಮೊದಲೆ ಎಚ್ಚೆತ್ತುಕೊಂಡಿದ್ದಾರೆ.

ಈಗಾಗಲೇ ಮುಂಬೈ ಮತ್ತು ದೇಶದ ಇನ್ನಿತರೇ ನಗರಗಳಿಂದ ಸಾವಿರಾರು ದಿನಗೂಲಿ ನೌಕರರು ತಮ್ಮ ತಮ್ಮ ಊರುಗಳಿಗೆ ಹಿಂದಿರುಗಿದ್ದಾರೆ. ದೆಹಲಿಯಲ್ಲಿರುವ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಸರಕಾರ ಈಗಾಗಲೇ ಈ ವರ್ಗದ  ಜನರಿಗೆ ಉಚಿತ ಊಟ ನೀಡಲು ನಿರ್ಧರಿಸಿದೆ.

ಇದನ್ನೂ ಓದಿ:

ಮಾನವೀಯತೆಗೇ ಲಾಕ್​ ಬಿತ್ತಾ?- ಕೊರೊನಾ ಸೋಂಕಿತಳನ್ನು ಮನೆಯಾಚೆ ಹಾಕಿದ ಪತಿ, ಮಕ್ಕಳು; ಆಹಾರ, ಔಷಧಿ ಇಲ್ಲದೆ ಜೀವ ಬಿಟ್ಟರು

ಕೊವಿಡ್‌ ಕೇರ್‌ ಸೆಂಟರ್ ಆಗಿ ಬದಲಾಯ್ತು ಲಕ್ಸುರಿ ಹೋಟೆಲ್! ಎಲ್ಲಿ?

(Prime minister Narendra Modi announces free food grain for poor under PM Garib Kalyan Yojana during May and June)

Published On - 3:57 pm, Fri, 23 April 21

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ