AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ತೀವ್ರವಾಗುತ್ತಿದೆ ಕೊವಿಡ್​ 19; ಇಂದು ಮತ್ತೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ ಮೋದಿ

ರೆಮ್​ಡಿಸಿವಿರ್ ಸೇರಿ ಕೊವಿಡ್ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಔಷಧಗಳ ಉತ್ಪಾದನೆಯೂ ಗಣನೀಯವಾಗಿ ಹೆಚ್ಚಾಗಿದೆ ಎಂದು ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ತಿಳಿಸಲಾಗಿದೆ.

ದೇಶದಲ್ಲಿ ತೀವ್ರವಾಗುತ್ತಿದೆ ಕೊವಿಡ್​ 19; ಇಂದು ಮತ್ತೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Lakshmi Hegde
|

Updated on: May 12, 2021 | 10:49 PM

Share

ದೇಶದಲ್ಲಿ ಆಮ್ಲಜನಕ ಲಭ್ಯತೆ ಮತ್ತು ಪೂರೈಕೆಯ ಬಗ್ಗೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದಾರೆ. ದೇಶದಲ್ಲಿ ಯಾವ್ಯಾವ ರಾಜ್ಯಗಳಲ್ಲಿ ಆಕ್ಸಿಜನ್​ ಕೊರತೆ ಇದೆ. ಪೂರೈಕೆಯ ಪ್ರಮಾಣ ಎಷ್ಟಿದೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ಅವರು ವರದಿ ಪಡೆದಿದ್ದಾರೆ.

ಇನ್ನು ಕೊವಿಡ್​ನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವ ಮ್ಯೂಕೋರ್ಮೈಕೋಸಿಸ್​ಗೆ ಅಗತ್ಯವಿರುವ ಔಷಧಿಯ ಸರಬರಾಜಿನ ಬಗ್ಗೆಯೂ ಪ್ರಧಾನಿ ಮೋದಿ ವಿವರಣೆ ಕೇಳಿದ್ದಾರೆ. ಕಪ್ಪು ಶೀಲೀಂದ್ರ ಸೋಂಕಿಗೆ ಚಿಕಿತ್ಸೆ ನೀಡಲು ಸರಬರಾಜು ಮಾಡುತ್ತಿರುವ ಔಷಧಿಯ ಮೇಲ್ವಿಚಾರಣೆಯನ್ನು ಸೂಕ್ತವಾಗಿ ನಿರ್ವಹಿಸುತ್ತಿರುವ ಬಗ್ಗೆ ಅವರಿಗೆ ಈ ಸಭೆಯಲ್ಲಿ ತಿಳಿಸಲಾಗಿದೆ. ಹಾಗೇ ರಾಜ್ಯಸರ್ಕಾರಗಳಿಗೆ ಅಗತ್ಯ ಇರುವಷ್ಟು ಪೂರೈಕೆ ಮಾಡಲಾಗುತ್ತಿದೆ ಎಂದೂ ಸಂಬಂಧಪಟ್ಟ ಸಚಿವಾಲಯದವರು ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ.

ಇನ್ನು ರೆಮ್​ಡಿಸಿವಿರ್ ಸೇರಿ ಕೊವಿಡ್ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಔಷಧಗಳ ಉತ್ಪಾದನೆಯೂ ಗಣನೀಯವಾಗಿ ಹೆಚ್ಚಾಗಿದೆ ಎಂದು ತಿಳಿಸಲಾಗಿದೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ. ದೇಶದಲ್ಲಿ ಕೊವಿಡ್ 19 ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಬಹುತೇಕ ರಾಜ್ಯಗಳು ಲಾಕ್​ಡೌನ್ ವಿಧಿಸಿವೆ. ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಟ್ಟಿಗೆ ಪದೇಪದೆ ಮಾತುಕತೆ ನಡೆಸುತ್ತಿದ್ದಾರೆ. ಆಯಾ ರಾಜ್ಯಗಳ ಪರಿಸ್ಥಿತಿಯ ಬಗ್ಗೆ ವರದಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: 18 ವರ್ಷ ಮೇಲ್ಪಟ್ಟವರಿಗೆ ಸದ್ಯ ಕೊವಿಡ್ ಲಸಿಕೆ ಇಲ್ಲ: ರಾಜ್ಯ ಸರ್ಕಾರ ಆದೇಶ

Prime Minister Narendra Modi chaired a high level meeting to review Covid 19 situation