AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗಾರು ಅಧಿವೇಶನದ ಸಿದ್ಧತೆ; ಕೇಂದ್ರ ಸಚಿವ ಸಂಪುಟದ ಸಭೆ ನಡೆಸಿದ ಪ್ರಧಾನಿ ಮೋದಿ

Narendra Modi: ಕಳೆದ ವರ್ಷ ಏಪ್ರಿಲ್​ನಲ್ಲಿ ಹೀಗೆ ಭೌತಿಕವಾಗಿ ಕೇಂದ್ರ ಸಂಪುಟ ಸಭೆ ನಡೆದಿತ್ತು. ಅದಾದ ಬಳಿಕ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆಯನ್ನು ನರೇಂದ್ರ ಮೋದಿ ಭೌತಿಕವಾಗಿ ನಡೆಸಿದ್ದಾರೆ.

ಮುಂಗಾರು ಅಧಿವೇಶನದ ಸಿದ್ಧತೆ; ಕೇಂದ್ರ ಸಚಿವ ಸಂಪುಟದ ಸಭೆ ನಡೆಸಿದ ಪ್ರಧಾನಿ ಮೋದಿ
ಕ್ಯಾಬಿನೆಟ್​ ಸಭೆ
TV9 Web
| Edited By: |

Updated on: Jul 14, 2021 | 3:13 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಕೇಂದ್ರ ಸಂಪುಟದ ಸಚಿವರೊಂದಿಗೆ ಭೌತಿಕವಾಗಿಯೇ ಸಭೆ ನಡೆಸಿದರೆ. ಕೊವಿಡ್​ 19 ಕಾರಣದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಸಚಿವ ಸಂಪುಟದ ಸಭೆ ನಡೆಯುತ್ತಿತ್ತು. ಜು.7ರಂದು ಹೊಸದಾಗಿ ಕ್ಯಾಬಿನೆಟ್​ ವಿಸ್ತರಣೆಯಾಗಿದ್ದು, 43 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಜು.8ರಂದು ತಮ್ಮ ಸಂಪುಟದ ನೂತನ ಸಚಿವರೊಂದಿಗೆ ಮಾತುಕತೆ ನಡೆಸಿದ್ದ ಪ್ರಧಾನಿ ಮೋದಿ ಕೆಲವು ಸಲಹೆಗಳನ್ನು ನೀಡಿದ್ದರು.

ಕಳೆದ ವರ್ಷ ಏಪ್ರಿಲ್​ನಲ್ಲಿ ಹೀಗೆ ಭೌತಿಕವಾಗಿ ಕೇಂದ್ರ ಸಂಪುಟ ಸಭೆ ನಡೆದಿತ್ತು. ಅದಾದ ಬಳಿಕ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆಯನ್ನು ನರೇಂದ್ರ ಮೋದಿ ಭೌತಿಕವಾಗಿ ನಡೆಸಿದ್ದಾರೆ. ಹಾಗೇ, ಇಂದು ಸಂಜೆ 4ಗಂಟೆಗೆ ತಮ್ಮ ಮಂತ್ರಿ ಮಂಡಲವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದೆ. ಇದೇ ಕಾರಣಕ್ಕೆ ಪ್ರಧಾನಿ ಮೋದಿ ಕ್ಯಾಬಿನೆಟ್ ಸಭೆ ನಡೆಸಿದ್ದಾರೆ ಮತ್ತು ಮಂತ್ರಿಮಂಡಲವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಕ್ಯಾಬಿನೆಟ್ ಸಮಿತಿಗಳನ್ನು ಪುನರ್ ರಚಿಸಿದ್ದಾರೆ. ಆರ್ಥಿಕ ವ್ಯವಹಾರಗಳ ಪ್ರಬಲ ಕ್ಯಾಬಿನೆಟ್ ಸಮಿತಿಯನ್ನು ಕಿರಿದಾಗಿಸಿದ್ದು ಮತ್ತು ರಾಜಕೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಗೆ ಹೊಸಬರನ್ನು ತರಲಾಗಿದೆ. ಪ್ರಧಾನಿ ಮೋದಿ ನೇತೃತ್ವದ ನಿರ್ಣಾಯಕ ಸಿಸಿಪಿಎದಲ್ಲಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಗಿರಿರಾಜ್ ಸಿಂಗ್, ಮನ್ಸುಖ್ ಮಾಂಡವಿಯಾ, ಭೂಪೇಂದರ್ ಯಾದವ್ ಮತ್ತು ಸರ್ಬಾನಂದ ಸೋನೊವಾಲ್ ಹೊಸದಾಗಿ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ಬಳಿಕ ಸಂಪುಟ ಸಮಿತಿ ಪುನರ್ ರಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ; ಸ್ಮೃತಿ ಇರಾನಿ, ಸೋನೊವಾಲ್​ಗೆ ಸ್ಥಾನ

Prime Minister Narendra Modi chairs in person Union Cabinet meet Today

Follow Us
Web contact
Web contact

TV9 Kannada

Read More
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್