AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗಾರು ಅಧಿವೇಶನದ ಸಿದ್ಧತೆ; ಕೇಂದ್ರ ಸಚಿವ ಸಂಪುಟದ ಸಭೆ ನಡೆಸಿದ ಪ್ರಧಾನಿ ಮೋದಿ

Narendra Modi: ಕಳೆದ ವರ್ಷ ಏಪ್ರಿಲ್​ನಲ್ಲಿ ಹೀಗೆ ಭೌತಿಕವಾಗಿ ಕೇಂದ್ರ ಸಂಪುಟ ಸಭೆ ನಡೆದಿತ್ತು. ಅದಾದ ಬಳಿಕ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆಯನ್ನು ನರೇಂದ್ರ ಮೋದಿ ಭೌತಿಕವಾಗಿ ನಡೆಸಿದ್ದಾರೆ.

ಮುಂಗಾರು ಅಧಿವೇಶನದ ಸಿದ್ಧತೆ; ಕೇಂದ್ರ ಸಚಿವ ಸಂಪುಟದ ಸಭೆ ನಡೆಸಿದ ಪ್ರಧಾನಿ ಮೋದಿ
ಕ್ಯಾಬಿನೆಟ್​ ಸಭೆ
TV9 Web
| Edited By: |

Updated on: Jul 14, 2021 | 3:13 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಕೇಂದ್ರ ಸಂಪುಟದ ಸಚಿವರೊಂದಿಗೆ ಭೌತಿಕವಾಗಿಯೇ ಸಭೆ ನಡೆಸಿದರೆ. ಕೊವಿಡ್​ 19 ಕಾರಣದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಸಚಿವ ಸಂಪುಟದ ಸಭೆ ನಡೆಯುತ್ತಿತ್ತು. ಜು.7ರಂದು ಹೊಸದಾಗಿ ಕ್ಯಾಬಿನೆಟ್​ ವಿಸ್ತರಣೆಯಾಗಿದ್ದು, 43 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಜು.8ರಂದು ತಮ್ಮ ಸಂಪುಟದ ನೂತನ ಸಚಿವರೊಂದಿಗೆ ಮಾತುಕತೆ ನಡೆಸಿದ್ದ ಪ್ರಧಾನಿ ಮೋದಿ ಕೆಲವು ಸಲಹೆಗಳನ್ನು ನೀಡಿದ್ದರು.

ಕಳೆದ ವರ್ಷ ಏಪ್ರಿಲ್​ನಲ್ಲಿ ಹೀಗೆ ಭೌತಿಕವಾಗಿ ಕೇಂದ್ರ ಸಂಪುಟ ಸಭೆ ನಡೆದಿತ್ತು. ಅದಾದ ಬಳಿಕ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆಯನ್ನು ನರೇಂದ್ರ ಮೋದಿ ಭೌತಿಕವಾಗಿ ನಡೆಸಿದ್ದಾರೆ. ಹಾಗೇ, ಇಂದು ಸಂಜೆ 4ಗಂಟೆಗೆ ತಮ್ಮ ಮಂತ್ರಿ ಮಂಡಲವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದೆ. ಇದೇ ಕಾರಣಕ್ಕೆ ಪ್ರಧಾನಿ ಮೋದಿ ಕ್ಯಾಬಿನೆಟ್ ಸಭೆ ನಡೆಸಿದ್ದಾರೆ ಮತ್ತು ಮಂತ್ರಿಮಂಡಲವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಕ್ಯಾಬಿನೆಟ್ ಸಮಿತಿಗಳನ್ನು ಪುನರ್ ರಚಿಸಿದ್ದಾರೆ. ಆರ್ಥಿಕ ವ್ಯವಹಾರಗಳ ಪ್ರಬಲ ಕ್ಯಾಬಿನೆಟ್ ಸಮಿತಿಯನ್ನು ಕಿರಿದಾಗಿಸಿದ್ದು ಮತ್ತು ರಾಜಕೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಗೆ ಹೊಸಬರನ್ನು ತರಲಾಗಿದೆ. ಪ್ರಧಾನಿ ಮೋದಿ ನೇತೃತ್ವದ ನಿರ್ಣಾಯಕ ಸಿಸಿಪಿಎದಲ್ಲಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಗಿರಿರಾಜ್ ಸಿಂಗ್, ಮನ್ಸುಖ್ ಮಾಂಡವಿಯಾ, ಭೂಪೇಂದರ್ ಯಾದವ್ ಮತ್ತು ಸರ್ಬಾನಂದ ಸೋನೊವಾಲ್ ಹೊಸದಾಗಿ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ಬಳಿಕ ಸಂಪುಟ ಸಮಿತಿ ಪುನರ್ ರಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ; ಸ್ಮೃತಿ ಇರಾನಿ, ಸೋನೊವಾಲ್​ಗೆ ಸ್ಥಾನ

Prime Minister Narendra Modi chairs in person Union Cabinet meet Today

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ