AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಉಗ್ರ ಹೋರಾಟ ನಡುವೆ ಕೃಷಿ ಕಾಯ್ದೆಯನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ

ಸಂಸತ್ತು ಇತ್ತೀಚೆಗಷ್ಟೇ ಕೃಷಿ ಸುಧಾರಣಾ ಮಸೂದೆಗಳನ್ನು ಪಾಸ್ ಮಾಡಿದೆ. ಈ ಕಾಯ್ದೆಗಳು ರೈತರನ್ನು ಸಂಕೋಲೆಯಿಂದ ಮುಕ್ತ ಮಾಡುವ ಜತೆ, ಹೊಸ ಅವಕಾಶ, ಹಕ್ಕುಗಳನ್ನು ಅವರಿಗೆ ನೀಡುತ್ತವೆ. ಈಗಾಗಲೇ ಆ ಅನುಭವ ರೈತರಿಗೆ ಆಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ರೈತರ ಉಗ್ರ ಹೋರಾಟ ನಡುವೆ ಕೃಷಿ ಕಾಯ್ದೆಯನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ (FILE PHOTO)
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 29, 2020 | 1:57 PM

Share

ದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳ ವಿರುದ್ಧ ಪಂಜಾಬ್​, ಹರ್ಯಾಣ ಸೇರಿ ಕೆಲವು ರಾಜ್ಯಗಳ ರೈತರ ಪ್ರತಿಭಟನೆ ಮುಂದುವರಿದಿದೆ. ದೆಹಲಿಯ ಗಡಿ ಪ್ರದೇಶದಲ್ಲಿ ಹೋರಾಟ ಮುಂದುವರಿಸಿದ್ದಾರೆ. ಹೀಗಿರುವಾಗ ಮೋದಿಯವರು ಇಂದು ಮನ್​ ಕೀ ಬಾತ್​ನಲ್ಲಿ ಕೃಷಿ ಕಾಯ್ದೆಯ ಬಗ್ಗೆ ಉಲ್ಲೇಖಿಸಿದ್ದಾರೆ. ನಮ್ಮ ಸರ್ಕಾರ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.

ಸಂಸತ್ತು ಇತ್ತೀಚೆಗಷ್ಟೇ ಕೃಷಿ ಸುಧಾರಣಾ ಮಸೂದೆಗಳನ್ನು ಪಾಸ್ ಮಾಡಿದೆ. ಈ ಕಾಯ್ದೆಗಳು ರೈತರನ್ನು ಸಂಕೋಲೆಯಿಂದ ಮುಕ್ತ ಮಾಡುವ ಜತೆ, ಹೊಸ ಅವಕಾಶ, ಹಕ್ಕುಗಳನ್ನು ಅವರಿಗೆ ನೀಡುತ್ತವೆ. ಈಗಾಗಲೇ ಆ ಅನುಭವ ರೈತರಿಗೆ ಆಗಿದೆ. ಈ ಕಾನೂನಿನ ಅನ್ವಯ ಆಯಾ ಪ್ರದೇಶಗಳಲ್ಲಿರುವ ಸಬ್​ ಡಿವಿಜನ್​ ಮ್ಯಾಜಿಸ್ಟ್ರೇಟ್​ಗಳು ರೈತರ ದೂರು, ಸಮಸ್ಯೆಗಳನ್ನು ಒಂದು ತಿಂಗಳೊಳಗೇ ಪರಿಹರಿಸಬೇಕಾಗಿದೆ. ಇದರಿಂದ ತುಂಬ ಅನುಕೂಲ ಆಗಲಿದೆ. ರೈತನಿಂದ ಖರೀದಿಸಿದ ಬೆಳೆಯ ಬಾಕಿಯನ್ನು ಖರೀದಿದಾರರು ತುಂಬ ದಿನ ಉಳಿಸಿಕೊಳ್ಳುವಂತಿಲ್ಲ. ಮೂರು ದಿನಗಳ ಒಳಗೆ ಎಲ್ಲ ಹಣವನ್ನೂ ಕೊಟ್ಟು ಬಿಡಬೇಕು. ಇಲ್ಲದಿದ್ದರೆ ರೈತರು ದೂರು ನೀಡಬಹುದು ಎಂಬುದನ್ನು ಹೊಸ ಕಾನೂನು ತಿಳಿಸುತ್ತದೆ ಎಂದು ನರೇಂದ್ರ ಮೋದಿ ಹೇಳಿದರು.

ಗಡಿ ಭಾಗಗಳಲ್ಲಿ ನಡೆಯುತ್ತಿರುವ ರೈತರು ನಡೆಸುತ್ತಿರುವ ಉಗ್ರ ಪ್ರತಿಭಟನೆ ನಡುವೆಯೂ ಪ್ರಧಾನಿ ಮೋದಿಯವರು ಈ ಕಾಯ್ದೆಯನ್ನು ಮತ್ತಷ್ಟು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: 100 ವರ್ಷಗಳ ಹಿಂದೆ ಕಳುವಾಗಿದ್ದ ಅನ್ನಪೂರ್ಣಾ ವಿಗ್ರಹ ಮರಳಿ ಭಾರತಕ್ಕೆ: ಮನ್​ ಕಿ ಬಾತ್​ನಲ್ಲಿ ಮೋದಿ ಖುಷಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್