ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ ರೋಡ್​ ಶೋ ಪೂರ್ವ ನಿರ್ಧರಿತವಲ್ಲ, ಆದ್ರೂ ಸಾರ್ವಜನಿಕರಿಂದ ಸಿಕ್ತು ಅದ್ಧೂರಿ ಸ್ವಾಗತ

ಪಶ್ಚಿಮ ಬಂಗಾಳದಲ್ಲಿ ಇಂದು ನಡೆದ ಪ್ರಧಾನಿ ಮೋದಿಯವರ ರೋಡ್​ ಶೋ ಪೂರ್ವನಿರ್ಧರಿತವಾಗಿಲ್ಲದಿದ್ದರೂ ಅದ್ಧೂರಿ ಸ್ವಾಗತ ಸಿಕ್ಕಿದೆ. ಎಲ್ಲೆಡೆ ಬಿಜೆಪಿ ಬಾವುಟಗಳು ರಾರಾಜಿಸಿದವು.

ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ ರೋಡ್​ ಶೋ ಪೂರ್ವ ನಿರ್ಧರಿತವಲ್ಲ, ಆದ್ರೂ ಸಾರ್ವಜನಿಕರಿಂದ ಸಿಕ್ತು ಅದ್ಧೂರಿ ಸ್ವಾಗತ
ನರೇಂದ್ರ ಮೋದಿ

Updated on: May 12, 2024 | 3:28 PM

ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಪಶ್ಚಿಮ ಬಂಗಾಳ ರೋಡ್​ ಶೋ ಪೂರ್ವ ನಿರ್ಧರಿತವಾಗಿಲ್ಲದಿದ್ದರೂ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ ಜನರು ಅದ್ಧೂರಿ ಸ್ವಾಗತ ಮಾಡಿದರು. ಈ ವೇಳೆ ಪ್ರಧಾನಿ ಮೋದಿಯವರ ರೋಡ್ ಶೋನಲ್ಲಿ ಭಾಗವಹಿಸಲು ಸಾರ್ವಜನಿಕರು ಬೀದಿಗಳಲ್ಲಿ ಜಮಾಯಿಸಿದ್ದರು. ಪ್ರಧಾನಿ ಮೋದಿಯವರನ್ನು ಪುಷ್ಪಗಳ ಮೂಲಕ ಸ್ವಾಗತಿಸಲಾಯಿತು, ಪುಷ್ಪವೃಷ್ಟಿ ಹರಿಸಿದರು, ರೋಡ್ ಶೋ ತುಂಬಾ ಸಾರ್ವಜನಿಕರ ಕೈಯಲ್ಲಿ ಎಲ್ಲೆಂದರಲ್ಲಿ ಬಿಜೆಪಿ ಪಕ್ಷದ ಬಾವುಟಗಳು ಕಂಡು ಬಂದವು.

ಪ್ರಧಾನಿ ಮೋದಿಯವರ ರೋಡ್ ಶೋನಲ್ಲಿ ಭಾಗವಹಿಸಲು ರಸ್ತೆಯಲ್ಲಿ ಜಮಾಯಿಸಿದ ಜನಸಮೂಹದಲ್ಲಿ ಮಕ್ಕಳು ಮತ್ತು ವೃದ್ಧರು ಕೂಡ ಕಂಡುಬಂದರು, ಮಹಿಳೆಯರೊಂದಿಗೆ ಮುಂಚೂಣಿಯಲ್ಲಿ ರ್ಯಾಲಿಯ ಭಾಗವಾಗುತ್ತಿರುವುದು ಕಂಡುಬಂತು. ಪ್ರಧಾನಿ ಮೋದಿಯವರ ಹಠಾತ್ ರೋಡ್ ಶೋನಿಂದ ಜನರಲ್ಲಿ ಉತ್ಸಾಹ ಕಂಡುಬಂದಿತು, ಇದರಿಂದಾಗಿ ರೋಡ್ ಶೋನಲ್ಲಿ ಬ್ಯಾರಕ್‌ಪೋರ್ ಪ್ರಧಾನಿ ಮೋದಿ ಘೋಷಣೆಗಳೊಂದಿಗೆ ಪ್ರತಿಧ್ವನಿಸಿತು. ಎಲ್ಲೆಲ್ಲೂ ಪ್ರಧಾನಿ ಮೋದಿ, ಮೋದಿ, ಮೋದಿ ಎಂಬ ಘೋಷಣೆಗಳು ಮೊಳಗಿದವು.

4 ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾತ್ರಿ ಕೋಲ್ಕತ್ತಾ ತಲುಪಿದ್ದು, ಭಾನುವಾರ ಪಶ್ಚಿಮ ಬಂಗಾಳದ ಮೂರು ಜಿಲ್ಲೆಗಳಲ್ಲಿ ನಾಲ್ಕು ಲೋಕಸಭಾ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮೂರು ಜಿಲ್ಲೆಗಳಲ್ಲಿ -ಉತ್ತರ 24 ಪರಗಣ ಜಿಲ್ಲೆಯ ಬ್ಯಾರಕ್‌ಪೋರ್, ಹೌರಾದ ಪಂಚ್ಲಾ ಮತ್ತು ಚಿನ್ಸುರಾ ಮತ್ತು ಹೂಗ್ಲಿ ಜಿಲ್ಲೆಯ ಪುರ್ಸುರಾ ಈ ನಾಲ್ಕು ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮತ್ತಷ್ಟು ಓದಿ: ಲೋಕಸಭಾ ಚುನಾವಣೆ 2024: ಪಶ್ಚಿಮ ಬಂಗಾಳ ಜನತೆಗೆ 5 ಭರವಸೆಗಳ ಕೊಟ್ಟ ಮೋದಿ

ಪ್ರಧಾನಿ ಮೋದಿ ಶನಿವಾರ ರಾತ್ರಿ ಕೋಲ್ಕತ್ತಾ ತಲುಪಿದರು, ಅಲ್ಲಿ ಅವರನ್ನು ರಾಜ್ಯಪಾಲ ಸಿವಿ ಆನಂದ್ ಬೋಸ್ ಅವರು ರಾಜಭವನದಲ್ಲಿ ಸ್ವಾಗತಿಸಿದರು. ಈ ತಿಂಗಳ ಕೋಲ್ಕತ್ತಾಗೆ ಪ್ರಧಾನಿಯವರ ಎರಡನೇ ಭೇಟಿ ಇದಾಗಿದ್ದು, ಇದಕ್ಕೂ ಮುನ್ನ ಮೋದಿ ಅವರು ಮೇ 2 ರಂದು ಪಶ್ಚಿಮ ಬಂಗಾಳಕ್ಕೆ ಬಂದಿದ್ದರು, ಅಲ್ಲಿ ಅವರು ಕೃಷ್ಣನಗರ, ಪುರ್ಬಾ ಬರ್ಧಮಾನ್ ಮತ್ತು ಬೋಲ್ಪುರ್ ಲೋಕಸಭಾ ಕ್ಷೇತ್ರಗಳಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು.

ಮೂರನೇ ಹಂತದಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಮತದಾನ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಸಪ್ತಗ್ರಾಮ್‌ನಲ್ಲಿ ಹೂಗ್ಲಿಯಿಂದ ಟಿಎಂಸಿ ಅಭ್ಯರ್ಥಿಯನ್ನು ಬೆಂಬಲಿಸಿ ರ್ಯಾಲಿಯನ್ನುದ್ದೇಶಿಸಿ, ನಗರದಲ್ಲಿ ಮೋದಿ ಅವರ ರ್ಯಾಲಿಗೆ ಒಂದು ದಿನ ಮೊದಲು ಮಾತನಾಡಿದರು. ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಪ್ರಚಾರ ಮೇ 11 ರಂದು ಕೊನೆಗೊಂಡಿತು. ರಾಜ್ಯದ ಒಟ್ಟು ಎಂಟು ಸ್ಥಾನಗಳಿಗೆ ಮೇ 13 ರಂದು ಮತದಾನ ನಡೆಯಲಿದೆ – ಬಹರಂಪುರ್, ಕೃಷ್ಣನಗರ, ರಾಣಾಘಾಟ್, ಬರ್ಧಮಾನ್ ಪುರ್ಬಾ, ಬುರ್ದ್ವಾನ್-ದುರ್ಗಾಪುರ್, ಅಸನ್ಸೋಲ್, ಬೋಲ್ಪುರ್ ಮತ್ತು ಬಿರ್ಭುಮ್ ಈ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:09 pm, Sun, 12 May 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us